• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಪ್ ನ 20 ಶಾಸಕರ ಅಮಾನತು ಬಳಿಕ ಮತ್ತೊಬ್ಬ ಆಪ್ ಸಚಿವರಿಗೆ ಸಿಬಿಐನಿಂದ ಕುತ್ತು, ಆಸ್ತಿಪತ್ರ ಜಪ್ತಿ

TNN Correspondent Posted On February 5, 2018
0


0
Shares
  • Share On Facebook
  • Tweet It

ದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಆರೋಪದಲ್ಲಿ ದೆಹಲಿಯ 20 ಶಾಸಕರನ್ನು ರಾಷ್ಟ್ರಪತಿಯವರು ಅಮಾನತುಗೊಳಿಸಿದ್ದು ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರಕ್ಕೆ ಮುಜುಗರ ಉಂಟಾದ ಬೆನ್ನಲ್ಲೇ ಮತ್ತೊಂದು ಹಿನ್ನಡೆಯಾಗಿದ್ದು, ದೆಹಲಿ ಸರ್ಕಾರದ ಸಚಿವ, ಆಪ್ ಮುಖಂಡ ಸಂತ್ಯೇಂದರ್ ಜೈನ್ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳನ್ನು ಸಿಬಿಐ ಜಪ್ತಿ ಮಾಡಿದೆ.

ದೆಹಲಿಯ ಡೆಂಟಲ್ ಕೌನ್ಸಿಲ್ನ ಹಲವು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಸತ್ಯೇಂದರ್ ಜೈನ್ ಅವರಿಗೆ ಸಂಬಂಧಿಸಿ ಕೋಟ್ಯಂತರ ರುಪಾಯಿ ಮೌಲ್ಯದ ದಾಖಲೆ, ಆಸ್ತಿಪತ್ರ, ಚೆಕ್ ಬುಕ್ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸತ್ಯೇಂದರ್ ಜೈನ್ ವಿರುದ್ಧ ಇದ್ದ ಪ್ರಕರಣವೊಂದರ ತನಿಖೆ ವೇಳೆ ದಾಖಲೆ ಪತ್ತೆಯಾಗಿದ್ದು, ಮುಂದಿನ ದಿನಗಳಲ್ಲಿ ಸಿಬಿಐ ಅಧಿಕಾರಿಗಳು ಜೈನ್ ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಭ್ರಷ್ಟಾಚಾರ ಹಾಗೂ ಹವಾಲ ದಂಧೆಯಲ್ಲಿ ಭಾಗಿಯಾದ ಆರೋಪದಲ್ಲಿ ಸತ್ಯೇಂದರ್ ಜೈನ್ ವಿರುದ್ಧ ಮೂರು ಪ್ರಕರಣ ದಾಖಲಾಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

2010-12 ಹಾಗೂ 2015-16ನೇ ಸಾಲಿನಲ್ಲಿ ಸತ್ಯೇಂದರ್ ಜೈನ್ ಎರಡು ಪ್ರತ್ಯೇಕ ಕಂಪನಿಗಳಿಗೆ 11.78 ಹಾಗೂ 4.63 ಕೋಟಿ ರೂ. ಹವಾಲ ದಂಧೆ ಮೂಲಕ ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಸಿಲುಕಿದ್ದಾರೆ. ಆದಾಗ್ಯೂ ಸಿಬಿಐ ದಾಳಿಯನ್ನು ಆಪ್ ತಿರಸ್ಕರಿಸಿದ್ದು, ಇದು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದೆ.

0
Shares
  • Share On Facebook
  • Tweet It




Trending Now
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
  • Popular Posts

    • 1
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 2
      ಕೇರಳ ಇನ್ನು ಮುಂದೆ ಕೇರಳಂ!
    • 3
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search