• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆಪ್ ನ 20 ಶಾಸಕರ ಅಮಾನತು ಬಳಿಕ ಮತ್ತೊಬ್ಬ ಆಪ್ ಸಚಿವರಿಗೆ ಸಿಬಿಐನಿಂದ ಕುತ್ತು, ಆಸ್ತಿಪತ್ರ ಜಪ್ತಿ

TNN Correspondent Posted On February 5, 2018


  • Share On Facebook
  • Tweet It

ದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಆರೋಪದಲ್ಲಿ ದೆಹಲಿಯ 20 ಶಾಸಕರನ್ನು ರಾಷ್ಟ್ರಪತಿಯವರು ಅಮಾನತುಗೊಳಿಸಿದ್ದು ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರಕ್ಕೆ ಮುಜುಗರ ಉಂಟಾದ ಬೆನ್ನಲ್ಲೇ ಮತ್ತೊಂದು ಹಿನ್ನಡೆಯಾಗಿದ್ದು, ದೆಹಲಿ ಸರ್ಕಾರದ ಸಚಿವ, ಆಪ್ ಮುಖಂಡ ಸಂತ್ಯೇಂದರ್ ಜೈನ್ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳನ್ನು ಸಿಬಿಐ ಜಪ್ತಿ ಮಾಡಿದೆ.

ದೆಹಲಿಯ ಡೆಂಟಲ್ ಕೌನ್ಸಿಲ್ನ ಹಲವು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಸತ್ಯೇಂದರ್ ಜೈನ್ ಅವರಿಗೆ ಸಂಬಂಧಿಸಿ ಕೋಟ್ಯಂತರ ರುಪಾಯಿ ಮೌಲ್ಯದ ದಾಖಲೆ, ಆಸ್ತಿಪತ್ರ, ಚೆಕ್ ಬುಕ್ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸತ್ಯೇಂದರ್ ಜೈನ್ ವಿರುದ್ಧ ಇದ್ದ ಪ್ರಕರಣವೊಂದರ ತನಿಖೆ ವೇಳೆ ದಾಖಲೆ ಪತ್ತೆಯಾಗಿದ್ದು, ಮುಂದಿನ ದಿನಗಳಲ್ಲಿ ಸಿಬಿಐ ಅಧಿಕಾರಿಗಳು ಜೈನ್ ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಭ್ರಷ್ಟಾಚಾರ ಹಾಗೂ ಹವಾಲ ದಂಧೆಯಲ್ಲಿ ಭಾಗಿಯಾದ ಆರೋಪದಲ್ಲಿ ಸತ್ಯೇಂದರ್ ಜೈನ್ ವಿರುದ್ಧ ಮೂರು ಪ್ರಕರಣ ದಾಖಲಾಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

2010-12 ಹಾಗೂ 2015-16ನೇ ಸಾಲಿನಲ್ಲಿ ಸತ್ಯೇಂದರ್ ಜೈನ್ ಎರಡು ಪ್ರತ್ಯೇಕ ಕಂಪನಿಗಳಿಗೆ 11.78 ಹಾಗೂ 4.63 ಕೋಟಿ ರೂ. ಹವಾಲ ದಂಧೆ ಮೂಲಕ ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಸಿಲುಕಿದ್ದಾರೆ. ಆದಾಗ್ಯೂ ಸಿಬಿಐ ದಾಳಿಯನ್ನು ಆಪ್ ತಿರಸ್ಕರಿಸಿದ್ದು, ಇದು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search