• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರವನ್ನು ತೆಗಳುವ ಸಿಎಂ ಸಿದ್ದರಾಮಯ್ಯ ಅವಧಿಯಲ್ಲಿ ರಾಜ್ಯದ ಜಿಡಿಪಿ ಹೇಗೆ ಕುಸಿಯುತ್ತಿದೆ ಗೊತ್ತಾ?

TNN Correspondent Posted On February 5, 2018
0


0
Shares
  • Share On Facebook
  • Tweet It

ಬೆಂಗಳೂರು: ಕೇಂದ್ರ ಸರ್ಕಾರ ನೋಟು ನಿಷೇಧಗೊಳಿಸಿದಾಗ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗ ಇವು ದೇಶದ ಆರ್ಥಿಕ ಸ್ಥಿತಿಯನ್ನು ಬುಡಮೇಲು ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಆದರೆ ಇದೆಲ್ಲವನ್ನೂ ಮೀರಿ ದೇಶದ ಜಿಡಿಪಿ ಏರಿಕೆಯಾಗುತ್ತಿದ್ದು, ಭಾರತ ವಿಶ್ವದ ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮುತ್ತದೆ ಎಂದು ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ವರದಿ ನೀಡಿವೆ.

ಆದರೆ ಕೇಂದ್ರದ ವಿರುದ್ಧ ಇಷ್ಟೆಲ್ಲ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ ಹಾಗೂ ಮಾಡಿದ್ದಾರೆ ಎಂಬುದು ಈಗ ಬಹಿರಂಗವಾಗಿದೆ.

2016-17ನೇ ಸಾಲಿನ ವಿತ್ತೀಯ ಸರ್ವೇ ಪ್ರಕಾರ ಕರ್ನಾಟಕದ ಜಿಎಸ್ ಡಿಪಿ (ಒಟ್ಟು ಕರ್ನಾಟಕದ ಉತ್ಪನ್ನ) ಶೇ.7.3ರಿಂದ 6.9ಕ್ಕೆ ಕುಸಿದಿದೆ. ಕರ್ನಾಟಕದ ಬೆನ್ನೆಲುಬು ಎಂದೇ ಕರೆಯುವ ಸೇವಾ ಕ್ಷೇತ್ರಗಳ ಬೆಳವಣಿಗೆ ದರ 2016-17ರಲ್ಲಿ ಶೇ.10.4ರಿಂದ 8.5ಕ್ಕೆ ಕುಸಿದಿದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, 2017-18ನೇ ಸಾಲಿನಲ್ಲಿ ರಾಜ್ಯ ಸರ್ಕಾರ 33,359 ಕೋಟಿ ರೂ. (ಜಿಎಸ್ ಡಿಪಿಯ ಶೇ.2.61ರಷ್ಟು ಹಣ) ವಿತ್ತೀಯ ಕೊರತೆ ಎದುರಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

ಒಟ್ಟಿನಲ್ಲಿ ವಿಪರೀತ ಸಾಲ, ಮುಂದಾಲೋಚನೆ ಇಲ್ಲದ ಯೋಜನೆ ಸೇರಿ ಸರ್ಕಾರದ ಹಲವು ನಿರ್ಧಾರಗಳಿಂದ ರಾಜ್ಯದ ವಿತ್ತೀಯ ಪರಿಸ್ಥಿತಿ ಹದಗೆಡುತ್ತಿದ್ದು, ರಾಜ್ಯ ಸರ್ಕಾರ ಮಾತ್ರ ಚುನಾವಣೆಗೆ ಸಜ್ಜಾಗುತ್ತಿದೆ. ಅದೂ ಕೇಂದ್ರದ ಜಿಎಸ್ಟಿ ವಿರುದ್ಧವೇ ಮಾತನಾಡುತ್ತ!

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search