• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರವನ್ನು ತೆಗಳುವ ಸಿಎಂ ಸಿದ್ದರಾಮಯ್ಯ ಅವಧಿಯಲ್ಲಿ ರಾಜ್ಯದ ಜಿಡಿಪಿ ಹೇಗೆ ಕುಸಿಯುತ್ತಿದೆ ಗೊತ್ತಾ?

TNN Correspondent Posted On February 5, 2018
0


0
Shares
  • Share On Facebook
  • Tweet It

ಬೆಂಗಳೂರು: ಕೇಂದ್ರ ಸರ್ಕಾರ ನೋಟು ನಿಷೇಧಗೊಳಿಸಿದಾಗ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗ ಇವು ದೇಶದ ಆರ್ಥಿಕ ಸ್ಥಿತಿಯನ್ನು ಬುಡಮೇಲು ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಆದರೆ ಇದೆಲ್ಲವನ್ನೂ ಮೀರಿ ದೇಶದ ಜಿಡಿಪಿ ಏರಿಕೆಯಾಗುತ್ತಿದ್ದು, ಭಾರತ ವಿಶ್ವದ ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮುತ್ತದೆ ಎಂದು ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ವರದಿ ನೀಡಿವೆ.

ಆದರೆ ಕೇಂದ್ರದ ವಿರುದ್ಧ ಇಷ್ಟೆಲ್ಲ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ ಹಾಗೂ ಮಾಡಿದ್ದಾರೆ ಎಂಬುದು ಈಗ ಬಹಿರಂಗವಾಗಿದೆ.

2016-17ನೇ ಸಾಲಿನ ವಿತ್ತೀಯ ಸರ್ವೇ ಪ್ರಕಾರ ಕರ್ನಾಟಕದ ಜಿಎಸ್ ಡಿಪಿ (ಒಟ್ಟು ಕರ್ನಾಟಕದ ಉತ್ಪನ್ನ) ಶೇ.7.3ರಿಂದ 6.9ಕ್ಕೆ ಕುಸಿದಿದೆ. ಕರ್ನಾಟಕದ ಬೆನ್ನೆಲುಬು ಎಂದೇ ಕರೆಯುವ ಸೇವಾ ಕ್ಷೇತ್ರಗಳ ಬೆಳವಣಿಗೆ ದರ 2016-17ರಲ್ಲಿ ಶೇ.10.4ರಿಂದ 8.5ಕ್ಕೆ ಕುಸಿದಿದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, 2017-18ನೇ ಸಾಲಿನಲ್ಲಿ ರಾಜ್ಯ ಸರ್ಕಾರ 33,359 ಕೋಟಿ ರೂ. (ಜಿಎಸ್ ಡಿಪಿಯ ಶೇ.2.61ರಷ್ಟು ಹಣ) ವಿತ್ತೀಯ ಕೊರತೆ ಎದುರಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

ಒಟ್ಟಿನಲ್ಲಿ ವಿಪರೀತ ಸಾಲ, ಮುಂದಾಲೋಚನೆ ಇಲ್ಲದ ಯೋಜನೆ ಸೇರಿ ಸರ್ಕಾರದ ಹಲವು ನಿರ್ಧಾರಗಳಿಂದ ರಾಜ್ಯದ ವಿತ್ತೀಯ ಪರಿಸ್ಥಿತಿ ಹದಗೆಡುತ್ತಿದ್ದು, ರಾಜ್ಯ ಸರ್ಕಾರ ಮಾತ್ರ ಚುನಾವಣೆಗೆ ಸಜ್ಜಾಗುತ್ತಿದೆ. ಅದೂ ಕೇಂದ್ರದ ಜಿಎಸ್ಟಿ ವಿರುದ್ಧವೇ ಮಾತನಾಡುತ್ತ!

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search