• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರವನ್ನು ತೆಗಳುವ ಸಿಎಂ ಸಿದ್ದರಾಮಯ್ಯ ಅವಧಿಯಲ್ಲಿ ರಾಜ್ಯದ ಜಿಡಿಪಿ ಹೇಗೆ ಕುಸಿಯುತ್ತಿದೆ ಗೊತ್ತಾ?

TNN Correspondent Posted On February 5, 2018
0


0
Shares
  • Share On Facebook
  • Tweet It

ಬೆಂಗಳೂರು: ಕೇಂದ್ರ ಸರ್ಕಾರ ನೋಟು ನಿಷೇಧಗೊಳಿಸಿದಾಗ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗ ಇವು ದೇಶದ ಆರ್ಥಿಕ ಸ್ಥಿತಿಯನ್ನು ಬುಡಮೇಲು ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಆದರೆ ಇದೆಲ್ಲವನ್ನೂ ಮೀರಿ ದೇಶದ ಜಿಡಿಪಿ ಏರಿಕೆಯಾಗುತ್ತಿದ್ದು, ಭಾರತ ವಿಶ್ವದ ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮುತ್ತದೆ ಎಂದು ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ವರದಿ ನೀಡಿವೆ.

ಆದರೆ ಕೇಂದ್ರದ ವಿರುದ್ಧ ಇಷ್ಟೆಲ್ಲ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ ಹಾಗೂ ಮಾಡಿದ್ದಾರೆ ಎಂಬುದು ಈಗ ಬಹಿರಂಗವಾಗಿದೆ.

2016-17ನೇ ಸಾಲಿನ ವಿತ್ತೀಯ ಸರ್ವೇ ಪ್ರಕಾರ ಕರ್ನಾಟಕದ ಜಿಎಸ್ ಡಿಪಿ (ಒಟ್ಟು ಕರ್ನಾಟಕದ ಉತ್ಪನ್ನ) ಶೇ.7.3ರಿಂದ 6.9ಕ್ಕೆ ಕುಸಿದಿದೆ. ಕರ್ನಾಟಕದ ಬೆನ್ನೆಲುಬು ಎಂದೇ ಕರೆಯುವ ಸೇವಾ ಕ್ಷೇತ್ರಗಳ ಬೆಳವಣಿಗೆ ದರ 2016-17ರಲ್ಲಿ ಶೇ.10.4ರಿಂದ 8.5ಕ್ಕೆ ಕುಸಿದಿದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, 2017-18ನೇ ಸಾಲಿನಲ್ಲಿ ರಾಜ್ಯ ಸರ್ಕಾರ 33,359 ಕೋಟಿ ರೂ. (ಜಿಎಸ್ ಡಿಪಿಯ ಶೇ.2.61ರಷ್ಟು ಹಣ) ವಿತ್ತೀಯ ಕೊರತೆ ಎದುರಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

ಒಟ್ಟಿನಲ್ಲಿ ವಿಪರೀತ ಸಾಲ, ಮುಂದಾಲೋಚನೆ ಇಲ್ಲದ ಯೋಜನೆ ಸೇರಿ ಸರ್ಕಾರದ ಹಲವು ನಿರ್ಧಾರಗಳಿಂದ ರಾಜ್ಯದ ವಿತ್ತೀಯ ಪರಿಸ್ಥಿತಿ ಹದಗೆಡುತ್ತಿದ್ದು, ರಾಜ್ಯ ಸರ್ಕಾರ ಮಾತ್ರ ಚುನಾವಣೆಗೆ ಸಜ್ಜಾಗುತ್ತಿದೆ. ಅದೂ ಕೇಂದ್ರದ ಜಿಎಸ್ಟಿ ವಿರುದ್ಧವೇ ಮಾತನಾಡುತ್ತ!

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!

  • Privacy Policy
  • Contact
© Tulunadu Infomedia.

Press enter/return to begin your search