• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂಬೈ ಸ್ಲಂ ಯುವಕ ಇಸ್ರೋ ವಿಜ್ಞಾನಿಯಾದ ಕಥೆ ಕೇಳಿ

TNN Correspondent Posted On February 5, 2018
0


0
Shares
  • Share On Facebook
  • Tweet It

ಮುಂಬೈ: ಜೀವನದಲ್ಲಿ ಸಾಧಕನಿಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದಕ್ಕೆ ಮುಂಬೈ ನಗರದ ಪ್ರಥಮೇಶ ಹಿರ್ವೆ ಸಾಕ್ಷಿಯಾಗಿದ್ದಾರೆ. ಸ್ಲಂ ನಲ್ಲಿ, ಕಡುಬಡತನದಲ್ಲಿ ಬೆಳೆದ ಯುವಕ ಪ್ರಥಮೇಶ್ ಇದೀಗ ಇಸ್ರೋ ವಿಜ್ಞಾನಿಯಾಗಿ ನೇಮಕವಾಗಿದ್ದಾರೆ.

ಮುಂಬೈನ ಸ್ಲಂ ಪ್ರದೇಶ ಪೋವೈ ಪ್ರದೇಶದ ಫಿಲ್ಟರ್ ಪಾಡದಿಂದ ಬಂದಿರುವ ಪ್ರಥಮೇಶ ಮುಂಬೈನಿಂದ ಇಸ್ರೋ ವಿಜ್ಞಾನಿಯಾಗಿ ನೇಮಕವಾದ ಪ್ರಥಮ ವ್ಯಕ್ತಿ. ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರ ಮಧ್ಯೆ ಆಯ್ಕೆಯಾಗುವ ಮೂಲಕ ಸಾಧನೆಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾನೆ. ಇಸ್ರೋನಲ್ಲಿ ಎಲೆಕ್ಟ್ರಿಕಲ್ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಲಿದ್ದಾನೆ.

ಮುಂಬೈನ್ ಪೊವೈ ಫಿಲ್ಟರ್ ಪಾಡಾ ಸ್ಲಂ ನಲ್ಲಿ ಬಾಲ್ಯದಲ್ಲಿ ಕೇವಲ 10*10 ಅಡಿ ಮನೆಯಲ್ಲಿ ಜೀವನ ನಡೆಸಿದ್ದ ಹಿರ್ವೆ. ಆದರೆ ಹಿರ್ವೆ ಬಡತನವನ್ನು ಕಡೆಗಣಿಸಿ ಓದಿನತ್ತ ಚಿತ್ತ ಹರಿಸಿದ್ದರ ಫಲದಿಂದ ಇದೀಗ ಇಸ್ರೋ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾನೆ.

10ನೇ ತರಗತಿಯವರೆಗೆ ಮರಾಠಿಯಲ್ಲೇ ಅಧ್ಯಯನ ಮಾಡಿದ್ದ ಪ್ರಥಮೇಶ್ ಗೆ ನಂತರದ ಅಧ್ಯಯನ ಕಷ್ಟಕರವಾಗಿತ್ತು. ಆದರೆ ಫಿನಿಕ್ಸ್ ನಂತೆ ಎದ್ದು ಬಂದ ಹಿರ್ವೆ ಇಂಗ್ಲಿಷ್ ಭಾಷೆಯೊಂದಿಗೆ ಉತ್ತಮ ಫಲಿತಾಂಶವನ್ನು ತೆಗೆದಿದ್ದರು. ಅದನ್ನೇ ಮುಂದುವರಿಸಿಕೊಂಡು ಬಂದು ಕಷ್ಟದಲ್ಲೇ ವಿದ್ಯಾಭ್ಯಾಸ ಮಾಡಿದರು.

ಇನ್ನು ಮನೆಯವರು ಪ್ರಥಮೇಶ್ ಗೆ ಕಲಾ ವಿಭಾಗಕ್ಕೆ ಸೇರಿಸಬೇಕು ಎಂದು ಸೂಚಿಸಿದ್ದಾಗ, ನಿರಾಕರಿಸಿದ ಹಿರ್ವೆ ಏನೇ ಕಷ್ಟವಾದರೂ ಪರವಾಗಿಲ್ಲ ನಾನು ಎಂಜಿನಿಯರ್ ಆಗಬೇಕು ಎಂದು ನಿರ್ಧರಿಸಿ, ವಿಜ್ಞಾನ ವಿಭಾಗ ಸೇರಿಕೊಂಡರು. ಇದೀಗ ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರಲ್ಲಿ ಆಯ್ಕೆಯಾದ 9 ಜನರಲ್ಲಿ ಪ್ರಥಮೇಶ್ ಒಬ್ಬರು ಎಂಬುದು ವಿಶೇಷ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search