• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂಬೈ ಸ್ಲಂ ಯುವಕ ಇಸ್ರೋ ವಿಜ್ಞಾನಿಯಾದ ಕಥೆ ಕೇಳಿ

TNN Correspondent Posted On February 5, 2018
0


0
Shares
  • Share On Facebook
  • Tweet It

ಮುಂಬೈ: ಜೀವನದಲ್ಲಿ ಸಾಧಕನಿಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದಕ್ಕೆ ಮುಂಬೈ ನಗರದ ಪ್ರಥಮೇಶ ಹಿರ್ವೆ ಸಾಕ್ಷಿಯಾಗಿದ್ದಾರೆ. ಸ್ಲಂ ನಲ್ಲಿ, ಕಡುಬಡತನದಲ್ಲಿ ಬೆಳೆದ ಯುವಕ ಪ್ರಥಮೇಶ್ ಇದೀಗ ಇಸ್ರೋ ವಿಜ್ಞಾನಿಯಾಗಿ ನೇಮಕವಾಗಿದ್ದಾರೆ.

ಮುಂಬೈನ ಸ್ಲಂ ಪ್ರದೇಶ ಪೋವೈ ಪ್ರದೇಶದ ಫಿಲ್ಟರ್ ಪಾಡದಿಂದ ಬಂದಿರುವ ಪ್ರಥಮೇಶ ಮುಂಬೈನಿಂದ ಇಸ್ರೋ ವಿಜ್ಞಾನಿಯಾಗಿ ನೇಮಕವಾದ ಪ್ರಥಮ ವ್ಯಕ್ತಿ. ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರ ಮಧ್ಯೆ ಆಯ್ಕೆಯಾಗುವ ಮೂಲಕ ಸಾಧನೆಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾನೆ. ಇಸ್ರೋನಲ್ಲಿ ಎಲೆಕ್ಟ್ರಿಕಲ್ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಲಿದ್ದಾನೆ.

ಮುಂಬೈನ್ ಪೊವೈ ಫಿಲ್ಟರ್ ಪಾಡಾ ಸ್ಲಂ ನಲ್ಲಿ ಬಾಲ್ಯದಲ್ಲಿ ಕೇವಲ 10*10 ಅಡಿ ಮನೆಯಲ್ಲಿ ಜೀವನ ನಡೆಸಿದ್ದ ಹಿರ್ವೆ. ಆದರೆ ಹಿರ್ವೆ ಬಡತನವನ್ನು ಕಡೆಗಣಿಸಿ ಓದಿನತ್ತ ಚಿತ್ತ ಹರಿಸಿದ್ದರ ಫಲದಿಂದ ಇದೀಗ ಇಸ್ರೋ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾನೆ.

10ನೇ ತರಗತಿಯವರೆಗೆ ಮರಾಠಿಯಲ್ಲೇ ಅಧ್ಯಯನ ಮಾಡಿದ್ದ ಪ್ರಥಮೇಶ್ ಗೆ ನಂತರದ ಅಧ್ಯಯನ ಕಷ್ಟಕರವಾಗಿತ್ತು. ಆದರೆ ಫಿನಿಕ್ಸ್ ನಂತೆ ಎದ್ದು ಬಂದ ಹಿರ್ವೆ ಇಂಗ್ಲಿಷ್ ಭಾಷೆಯೊಂದಿಗೆ ಉತ್ತಮ ಫಲಿತಾಂಶವನ್ನು ತೆಗೆದಿದ್ದರು. ಅದನ್ನೇ ಮುಂದುವರಿಸಿಕೊಂಡು ಬಂದು ಕಷ್ಟದಲ್ಲೇ ವಿದ್ಯಾಭ್ಯಾಸ ಮಾಡಿದರು.

ಇನ್ನು ಮನೆಯವರು ಪ್ರಥಮೇಶ್ ಗೆ ಕಲಾ ವಿಭಾಗಕ್ಕೆ ಸೇರಿಸಬೇಕು ಎಂದು ಸೂಚಿಸಿದ್ದಾಗ, ನಿರಾಕರಿಸಿದ ಹಿರ್ವೆ ಏನೇ ಕಷ್ಟವಾದರೂ ಪರವಾಗಿಲ್ಲ ನಾನು ಎಂಜಿನಿಯರ್ ಆಗಬೇಕು ಎಂದು ನಿರ್ಧರಿಸಿ, ವಿಜ್ಞಾನ ವಿಭಾಗ ಸೇರಿಕೊಂಡರು. ಇದೀಗ ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರಲ್ಲಿ ಆಯ್ಕೆಯಾದ 9 ಜನರಲ್ಲಿ ಪ್ರಥಮೇಶ್ ಒಬ್ಬರು ಎಂಬುದು ವಿಶೇಷ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search