• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂಬೈ ಸ್ಲಂ ಯುವಕ ಇಸ್ರೋ ವಿಜ್ಞಾನಿಯಾದ ಕಥೆ ಕೇಳಿ

TNN Correspondent Posted On February 5, 2018
0


0
Shares
  • Share On Facebook
  • Tweet It

ಮುಂಬೈ: ಜೀವನದಲ್ಲಿ ಸಾಧಕನಿಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದಕ್ಕೆ ಮುಂಬೈ ನಗರದ ಪ್ರಥಮೇಶ ಹಿರ್ವೆ ಸಾಕ್ಷಿಯಾಗಿದ್ದಾರೆ. ಸ್ಲಂ ನಲ್ಲಿ, ಕಡುಬಡತನದಲ್ಲಿ ಬೆಳೆದ ಯುವಕ ಪ್ರಥಮೇಶ್ ಇದೀಗ ಇಸ್ರೋ ವಿಜ್ಞಾನಿಯಾಗಿ ನೇಮಕವಾಗಿದ್ದಾರೆ.

ಮುಂಬೈನ ಸ್ಲಂ ಪ್ರದೇಶ ಪೋವೈ ಪ್ರದೇಶದ ಫಿಲ್ಟರ್ ಪಾಡದಿಂದ ಬಂದಿರುವ ಪ್ರಥಮೇಶ ಮುಂಬೈನಿಂದ ಇಸ್ರೋ ವಿಜ್ಞಾನಿಯಾಗಿ ನೇಮಕವಾದ ಪ್ರಥಮ ವ್ಯಕ್ತಿ. ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರ ಮಧ್ಯೆ ಆಯ್ಕೆಯಾಗುವ ಮೂಲಕ ಸಾಧನೆಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾನೆ. ಇಸ್ರೋನಲ್ಲಿ ಎಲೆಕ್ಟ್ರಿಕಲ್ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಲಿದ್ದಾನೆ.

ಮುಂಬೈನ್ ಪೊವೈ ಫಿಲ್ಟರ್ ಪಾಡಾ ಸ್ಲಂ ನಲ್ಲಿ ಬಾಲ್ಯದಲ್ಲಿ ಕೇವಲ 10*10 ಅಡಿ ಮನೆಯಲ್ಲಿ ಜೀವನ ನಡೆಸಿದ್ದ ಹಿರ್ವೆ. ಆದರೆ ಹಿರ್ವೆ ಬಡತನವನ್ನು ಕಡೆಗಣಿಸಿ ಓದಿನತ್ತ ಚಿತ್ತ ಹರಿಸಿದ್ದರ ಫಲದಿಂದ ಇದೀಗ ಇಸ್ರೋ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾನೆ.

10ನೇ ತರಗತಿಯವರೆಗೆ ಮರಾಠಿಯಲ್ಲೇ ಅಧ್ಯಯನ ಮಾಡಿದ್ದ ಪ್ರಥಮೇಶ್ ಗೆ ನಂತರದ ಅಧ್ಯಯನ ಕಷ್ಟಕರವಾಗಿತ್ತು. ಆದರೆ ಫಿನಿಕ್ಸ್ ನಂತೆ ಎದ್ದು ಬಂದ ಹಿರ್ವೆ ಇಂಗ್ಲಿಷ್ ಭಾಷೆಯೊಂದಿಗೆ ಉತ್ತಮ ಫಲಿತಾಂಶವನ್ನು ತೆಗೆದಿದ್ದರು. ಅದನ್ನೇ ಮುಂದುವರಿಸಿಕೊಂಡು ಬಂದು ಕಷ್ಟದಲ್ಲೇ ವಿದ್ಯಾಭ್ಯಾಸ ಮಾಡಿದರು.

ಇನ್ನು ಮನೆಯವರು ಪ್ರಥಮೇಶ್ ಗೆ ಕಲಾ ವಿಭಾಗಕ್ಕೆ ಸೇರಿಸಬೇಕು ಎಂದು ಸೂಚಿಸಿದ್ದಾಗ, ನಿರಾಕರಿಸಿದ ಹಿರ್ವೆ ಏನೇ ಕಷ್ಟವಾದರೂ ಪರವಾಗಿಲ್ಲ ನಾನು ಎಂಜಿನಿಯರ್ ಆಗಬೇಕು ಎಂದು ನಿರ್ಧರಿಸಿ, ವಿಜ್ಞಾನ ವಿಭಾಗ ಸೇರಿಕೊಂಡರು. ಇದೀಗ ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರಲ್ಲಿ ಆಯ್ಕೆಯಾದ 9 ಜನರಲ್ಲಿ ಪ್ರಥಮೇಶ್ ಒಬ್ಬರು ಎಂಬುದು ವಿಶೇಷ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search