• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂಬೈ ಸ್ಲಂ ಯುವಕ ಇಸ್ರೋ ವಿಜ್ಞಾನಿಯಾದ ಕಥೆ ಕೇಳಿ

TNN Correspondent Posted On February 5, 2018
0


0
Shares
  • Share On Facebook
  • Tweet It

ಮುಂಬೈ: ಜೀವನದಲ್ಲಿ ಸಾಧಕನಿಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದಕ್ಕೆ ಮುಂಬೈ ನಗರದ ಪ್ರಥಮೇಶ ಹಿರ್ವೆ ಸಾಕ್ಷಿಯಾಗಿದ್ದಾರೆ. ಸ್ಲಂ ನಲ್ಲಿ, ಕಡುಬಡತನದಲ್ಲಿ ಬೆಳೆದ ಯುವಕ ಪ್ರಥಮೇಶ್ ಇದೀಗ ಇಸ್ರೋ ವಿಜ್ಞಾನಿಯಾಗಿ ನೇಮಕವಾಗಿದ್ದಾರೆ.

ಮುಂಬೈನ ಸ್ಲಂ ಪ್ರದೇಶ ಪೋವೈ ಪ್ರದೇಶದ ಫಿಲ್ಟರ್ ಪಾಡದಿಂದ ಬಂದಿರುವ ಪ್ರಥಮೇಶ ಮುಂಬೈನಿಂದ ಇಸ್ರೋ ವಿಜ್ಞಾನಿಯಾಗಿ ನೇಮಕವಾದ ಪ್ರಥಮ ವ್ಯಕ್ತಿ. ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರ ಮಧ್ಯೆ ಆಯ್ಕೆಯಾಗುವ ಮೂಲಕ ಸಾಧನೆಗೆ ಬಡತನ ಅಡ್ಡಿ ಬರುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾನೆ. ಇಸ್ರೋನಲ್ಲಿ ಎಲೆಕ್ಟ್ರಿಕಲ್ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಲಿದ್ದಾನೆ.

ಮುಂಬೈನ್ ಪೊವೈ ಫಿಲ್ಟರ್ ಪಾಡಾ ಸ್ಲಂ ನಲ್ಲಿ ಬಾಲ್ಯದಲ್ಲಿ ಕೇವಲ 10*10 ಅಡಿ ಮನೆಯಲ್ಲಿ ಜೀವನ ನಡೆಸಿದ್ದ ಹಿರ್ವೆ. ಆದರೆ ಹಿರ್ವೆ ಬಡತನವನ್ನು ಕಡೆಗಣಿಸಿ ಓದಿನತ್ತ ಚಿತ್ತ ಹರಿಸಿದ್ದರ ಫಲದಿಂದ ಇದೀಗ ಇಸ್ರೋ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾನೆ.

10ನೇ ತರಗತಿಯವರೆಗೆ ಮರಾಠಿಯಲ್ಲೇ ಅಧ್ಯಯನ ಮಾಡಿದ್ದ ಪ್ರಥಮೇಶ್ ಗೆ ನಂತರದ ಅಧ್ಯಯನ ಕಷ್ಟಕರವಾಗಿತ್ತು. ಆದರೆ ಫಿನಿಕ್ಸ್ ನಂತೆ ಎದ್ದು ಬಂದ ಹಿರ್ವೆ ಇಂಗ್ಲಿಷ್ ಭಾಷೆಯೊಂದಿಗೆ ಉತ್ತಮ ಫಲಿತಾಂಶವನ್ನು ತೆಗೆದಿದ್ದರು. ಅದನ್ನೇ ಮುಂದುವರಿಸಿಕೊಂಡು ಬಂದು ಕಷ್ಟದಲ್ಲೇ ವಿದ್ಯಾಭ್ಯಾಸ ಮಾಡಿದರು.

ಇನ್ನು ಮನೆಯವರು ಪ್ರಥಮೇಶ್ ಗೆ ಕಲಾ ವಿಭಾಗಕ್ಕೆ ಸೇರಿಸಬೇಕು ಎಂದು ಸೂಚಿಸಿದ್ದಾಗ, ನಿರಾಕರಿಸಿದ ಹಿರ್ವೆ ಏನೇ ಕಷ್ಟವಾದರೂ ಪರವಾಗಿಲ್ಲ ನಾನು ಎಂಜಿನಿಯರ್ ಆಗಬೇಕು ಎಂದು ನಿರ್ಧರಿಸಿ, ವಿಜ್ಞಾನ ವಿಭಾಗ ಸೇರಿಕೊಂಡರು. ಇದೀಗ ಇಸ್ರೋಗೆ ಅರ್ಜಿ ಸಲ್ಲಿಸಿದ 16,000 ಜನರಲ್ಲಿ ಆಯ್ಕೆಯಾದ 9 ಜನರಲ್ಲಿ ಪ್ರಥಮೇಶ್ ಒಬ್ಬರು ಎಂಬುದು ವಿಶೇಷ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search