• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರದಿಂದ ಔಷಧಿ ತಯಾರಿಸಲು ಮುಂದಾದ ಯೋಗಿ ಸರ್ಕಾರ

TNN Correspondent Posted On February 5, 2018
0


0
Shares
  • Share On Facebook
  • Tweet It

ಲಖನೌ: ಹಲವು ರೋಗಗಳಿಗೆ ರಾಮಬಾಣವಾಗಿರುವ ಗೋಮೂತ್ರದ ಮೂಲಕ ಔಷಧ ತಯಾರಿಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ನಾನಾ ರೋಗಗಳಿಗೆ ಚಿಕಿತ್ಸೆ ನೀಡುವ ಎಂಟು ಔಷಧಗಳನ್ನು ಈಗಾಗಲೇ ಯೋಗಿ ಸರ್ಕಾರ ಸಿದ್ಧಪಡಿಸಿದೆ. ದೇಶದ ಹಲವು ಖಾಸಗಿ ಸಂಸ್ಥೆಗಳು ಮತ್ತು ಫಾರ್ಮಸಿಗಳು ಗೋಮೂತ್ರದಿಂದ ಔಷಧ ತಯಾರಿಸುತ್ತಿವೆಯಾದರೂ ಸರಕಾರವೇ  ಪ್ರೋತ್ಸಾಹಿಸುತ್ತಿರುವುದು ಇದೇ ಮೊದಲು.

ಆಯುಷ್ ಇಲಾಖೆ ನಿರ್ದೇಶಕ ಡಾ. ಆರ್‌.ಆರ್‌. ಚೌಧರಿ ಮಾತಾಡಿ, ಆರಂಭದಲ್ಲಿ ಗೋಮೂತ್ರದಿಂದ ಸ್ವಚ್ಛತೆ ಮಾಡುವ ವಸ್ತುಗಳನ್ನು ತಯಾರಿಸುವ ಪ್ರಸ್ತಾವನೆ ಹೊಂದಲಾಗಿತ್ತು. ಆದರೆ ನಂತರ ಔಷಧಗಳನ್ನು ಸಿದ್ಧಡಿಸಲು ಮುಂಎದಾಗಿದೆ ಎಂದು ತಿಳಿಸಿದ್ದಾರೆ. ಆಯುರ್ವೇದ ಇಲಾಖೆಯು ಲಖನೌ ಮತ್ತು ಪಿಲಿಭಿತ್‌ನಲ್ಲಿರುವ ಎರಡು ಸರಕಾರಿ ಫಾರ್ಮಸಿ ಮತ್ತು ಖಾಸಗಿ ಘಟಕಗಳ ಸಹಯೋಗದಲ್ಲಿ ಔಷಧಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ಧಾರೆ.

ಬಾಂಡಾ, ಝಾನ್ಸಿ, ಮುಜಫ್ಫರ್‌ ನಗರ, ಅಲಹಾಬಾದ್‌, ವಾರಾಣಸಿ, ಬರೇಲಿ, ಲಖನೌ ಮತ್ತು ಪಿಲಿಭಿತ್‌ಗಳಲ್ಲಿ ರುವ ಎಂಟು ಮೆಡಿಕಲ್‌ ಕಾಲೇಜುಗಳಲ್ಲಿ ಆಯುರ್ವೇದ ಕೋರ್ಸ್‌ ಆರಂಭಿಸಲಾಗಿದ್ದು, ಇಲ್ಲಿಗೆ ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆ ಬರುತ್ತಾರೆ. ಲೌಖನೌ ಆಸ್ಪತ್ರೆಯಗೆ ನಿತ್ಯ 700 ಜನರು ಔಷಧ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದುವರೆಗೆ ಲಿವರ್‌ ಸಮಸ್ಯೆ, ಗಂಟು ನೋವು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ 8 ಔಷಧ ತಯಾರಿಸಿದ್ದೇವೆ. ಇತರ ಸಮಸ್ಯೆ ಮತ್ತು ರೋಗಗಳಿಗೆ ಗೋಮೂತ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಆರ್‌.ಆರ್‌. ಚೌಧರಿ ತಿಳಿಸಿದ್ದಾರೆ.

ಆದಿತ್ಯನಾಥ ಸರಕಾರ ಏಳು ಜಿಲ್ಲೆಗಳು ಮತ್ತು 16 ನಗರ ಪ್ರದೇಶಗಳಲ್ಲಿ ತಲಾ 1000 ಸಾಮರ್ಥ್ಯ‌ದ ಗೋಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮುಂದೆ ಪ್ರತಿ ಬ್ಲಾಕ್‌ನಲ್ಲಿ ಒಂದು ಗೋಶಾಲೆ ನಿರ್ಮಾಣವಾಗಲಿದೆ. ಸರಕಾರಿ ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಿ ಗೋಶಾಲೆಗೆ ನೀಡಲು ಆದಿತ್ಯನಾಥ್ ಸರಕಾರ ಚಿಂತಿಸುತ್ತಿದೆ.

 

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search