• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೋಮೂತ್ರದಿಂದ ಔಷಧಿ ತಯಾರಿಸಲು ಮುಂದಾದ ಯೋಗಿ ಸರ್ಕಾರ

TNN Correspondent Posted On February 5, 2018


  • Share On Facebook
  • Tweet It

ಲಖನೌ: ಹಲವು ರೋಗಗಳಿಗೆ ರಾಮಬಾಣವಾಗಿರುವ ಗೋಮೂತ್ರದ ಮೂಲಕ ಔಷಧ ತಯಾರಿಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ನಾನಾ ರೋಗಗಳಿಗೆ ಚಿಕಿತ್ಸೆ ನೀಡುವ ಎಂಟು ಔಷಧಗಳನ್ನು ಈಗಾಗಲೇ ಯೋಗಿ ಸರ್ಕಾರ ಸಿದ್ಧಪಡಿಸಿದೆ. ದೇಶದ ಹಲವು ಖಾಸಗಿ ಸಂಸ್ಥೆಗಳು ಮತ್ತು ಫಾರ್ಮಸಿಗಳು ಗೋಮೂತ್ರದಿಂದ ಔಷಧ ತಯಾರಿಸುತ್ತಿವೆಯಾದರೂ ಸರಕಾರವೇ  ಪ್ರೋತ್ಸಾಹಿಸುತ್ತಿರುವುದು ಇದೇ ಮೊದಲು.

ಆಯುಷ್ ಇಲಾಖೆ ನಿರ್ದೇಶಕ ಡಾ. ಆರ್‌.ಆರ್‌. ಚೌಧರಿ ಮಾತಾಡಿ, ಆರಂಭದಲ್ಲಿ ಗೋಮೂತ್ರದಿಂದ ಸ್ವಚ್ಛತೆ ಮಾಡುವ ವಸ್ತುಗಳನ್ನು ತಯಾರಿಸುವ ಪ್ರಸ್ತಾವನೆ ಹೊಂದಲಾಗಿತ್ತು. ಆದರೆ ನಂತರ ಔಷಧಗಳನ್ನು ಸಿದ್ಧಡಿಸಲು ಮುಂಎದಾಗಿದೆ ಎಂದು ತಿಳಿಸಿದ್ದಾರೆ. ಆಯುರ್ವೇದ ಇಲಾಖೆಯು ಲಖನೌ ಮತ್ತು ಪಿಲಿಭಿತ್‌ನಲ್ಲಿರುವ ಎರಡು ಸರಕಾರಿ ಫಾರ್ಮಸಿ ಮತ್ತು ಖಾಸಗಿ ಘಟಕಗಳ ಸಹಯೋಗದಲ್ಲಿ ಔಷಧಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ಧಾರೆ.

ಬಾಂಡಾ, ಝಾನ್ಸಿ, ಮುಜಫ್ಫರ್‌ ನಗರ, ಅಲಹಾಬಾದ್‌, ವಾರಾಣಸಿ, ಬರೇಲಿ, ಲಖನೌ ಮತ್ತು ಪಿಲಿಭಿತ್‌ಗಳಲ್ಲಿ ರುವ ಎಂಟು ಮೆಡಿಕಲ್‌ ಕಾಲೇಜುಗಳಲ್ಲಿ ಆಯುರ್ವೇದ ಕೋರ್ಸ್‌ ಆರಂಭಿಸಲಾಗಿದ್ದು, ಇಲ್ಲಿಗೆ ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆ ಬರುತ್ತಾರೆ. ಲೌಖನೌ ಆಸ್ಪತ್ರೆಯಗೆ ನಿತ್ಯ 700 ಜನರು ಔಷಧ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದುವರೆಗೆ ಲಿವರ್‌ ಸಮಸ್ಯೆ, ಗಂಟು ನೋವು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ 8 ಔಷಧ ತಯಾರಿಸಿದ್ದೇವೆ. ಇತರ ಸಮಸ್ಯೆ ಮತ್ತು ರೋಗಗಳಿಗೆ ಗೋಮೂತ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಆರ್‌.ಆರ್‌. ಚೌಧರಿ ತಿಳಿಸಿದ್ದಾರೆ.

ಆದಿತ್ಯನಾಥ ಸರಕಾರ ಏಳು ಜಿಲ್ಲೆಗಳು ಮತ್ತು 16 ನಗರ ಪ್ರದೇಶಗಳಲ್ಲಿ ತಲಾ 1000 ಸಾಮರ್ಥ್ಯ‌ದ ಗೋಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮುಂದೆ ಪ್ರತಿ ಬ್ಲಾಕ್‌ನಲ್ಲಿ ಒಂದು ಗೋಶಾಲೆ ನಿರ್ಮಾಣವಾಗಲಿದೆ. ಸರಕಾರಿ ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಿ ಗೋಶಾಲೆಗೆ ನೀಡಲು ಆದಿತ್ಯನಾಥ್ ಸರಕಾರ ಚಿಂತಿಸುತ್ತಿದೆ.

 

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search