• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರದಿಂದ ಔಷಧಿ ತಯಾರಿಸಲು ಮುಂದಾದ ಯೋಗಿ ಸರ್ಕಾರ

TNN Correspondent Posted On February 5, 2018
0


0
Shares
  • Share On Facebook
  • Tweet It

ಲಖನೌ: ಹಲವು ರೋಗಗಳಿಗೆ ರಾಮಬಾಣವಾಗಿರುವ ಗೋಮೂತ್ರದ ಮೂಲಕ ಔಷಧ ತಯಾರಿಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ನಾನಾ ರೋಗಗಳಿಗೆ ಚಿಕಿತ್ಸೆ ನೀಡುವ ಎಂಟು ಔಷಧಗಳನ್ನು ಈಗಾಗಲೇ ಯೋಗಿ ಸರ್ಕಾರ ಸಿದ್ಧಪಡಿಸಿದೆ. ದೇಶದ ಹಲವು ಖಾಸಗಿ ಸಂಸ್ಥೆಗಳು ಮತ್ತು ಫಾರ್ಮಸಿಗಳು ಗೋಮೂತ್ರದಿಂದ ಔಷಧ ತಯಾರಿಸುತ್ತಿವೆಯಾದರೂ ಸರಕಾರವೇ  ಪ್ರೋತ್ಸಾಹಿಸುತ್ತಿರುವುದು ಇದೇ ಮೊದಲು.

ಆಯುಷ್ ಇಲಾಖೆ ನಿರ್ದೇಶಕ ಡಾ. ಆರ್‌.ಆರ್‌. ಚೌಧರಿ ಮಾತಾಡಿ, ಆರಂಭದಲ್ಲಿ ಗೋಮೂತ್ರದಿಂದ ಸ್ವಚ್ಛತೆ ಮಾಡುವ ವಸ್ತುಗಳನ್ನು ತಯಾರಿಸುವ ಪ್ರಸ್ತಾವನೆ ಹೊಂದಲಾಗಿತ್ತು. ಆದರೆ ನಂತರ ಔಷಧಗಳನ್ನು ಸಿದ್ಧಡಿಸಲು ಮುಂಎದಾಗಿದೆ ಎಂದು ತಿಳಿಸಿದ್ದಾರೆ. ಆಯುರ್ವೇದ ಇಲಾಖೆಯು ಲಖನೌ ಮತ್ತು ಪಿಲಿಭಿತ್‌ನಲ್ಲಿರುವ ಎರಡು ಸರಕಾರಿ ಫಾರ್ಮಸಿ ಮತ್ತು ಖಾಸಗಿ ಘಟಕಗಳ ಸಹಯೋಗದಲ್ಲಿ ಔಷಧಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ಧಾರೆ.

ಬಾಂಡಾ, ಝಾನ್ಸಿ, ಮುಜಫ್ಫರ್‌ ನಗರ, ಅಲಹಾಬಾದ್‌, ವಾರಾಣಸಿ, ಬರೇಲಿ, ಲಖನೌ ಮತ್ತು ಪಿಲಿಭಿತ್‌ಗಳಲ್ಲಿ ರುವ ಎಂಟು ಮೆಡಿಕಲ್‌ ಕಾಲೇಜುಗಳಲ್ಲಿ ಆಯುರ್ವೇದ ಕೋರ್ಸ್‌ ಆರಂಭಿಸಲಾಗಿದ್ದು, ಇಲ್ಲಿಗೆ ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆ ಬರುತ್ತಾರೆ. ಲೌಖನೌ ಆಸ್ಪತ್ರೆಯಗೆ ನಿತ್ಯ 700 ಜನರು ಔಷಧ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದುವರೆಗೆ ಲಿವರ್‌ ಸಮಸ್ಯೆ, ಗಂಟು ನೋವು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ 8 ಔಷಧ ತಯಾರಿಸಿದ್ದೇವೆ. ಇತರ ಸಮಸ್ಯೆ ಮತ್ತು ರೋಗಗಳಿಗೆ ಗೋಮೂತ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಆರ್‌.ಆರ್‌. ಚೌಧರಿ ತಿಳಿಸಿದ್ದಾರೆ.

ಆದಿತ್ಯನಾಥ ಸರಕಾರ ಏಳು ಜಿಲ್ಲೆಗಳು ಮತ್ತು 16 ನಗರ ಪ್ರದೇಶಗಳಲ್ಲಿ ತಲಾ 1000 ಸಾಮರ್ಥ್ಯ‌ದ ಗೋಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮುಂದೆ ಪ್ರತಿ ಬ್ಲಾಕ್‌ನಲ್ಲಿ ಒಂದು ಗೋಶಾಲೆ ನಿರ್ಮಾಣವಾಗಲಿದೆ. ಸರಕಾರಿ ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಿ ಗೋಶಾಲೆಗೆ ನೀಡಲು ಆದಿತ್ಯನಾಥ್ ಸರಕಾರ ಚಿಂತಿಸುತ್ತಿದೆ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search