• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರದಿಂದ ಔಷಧಿ ತಯಾರಿಸಲು ಮುಂದಾದ ಯೋಗಿ ಸರ್ಕಾರ

TNN Correspondent Posted On February 5, 2018
0


0
Shares
  • Share On Facebook
  • Tweet It

ಲಖನೌ: ಹಲವು ರೋಗಗಳಿಗೆ ರಾಮಬಾಣವಾಗಿರುವ ಗೋಮೂತ್ರದ ಮೂಲಕ ಔಷಧ ತಯಾರಿಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ನಾನಾ ರೋಗಗಳಿಗೆ ಚಿಕಿತ್ಸೆ ನೀಡುವ ಎಂಟು ಔಷಧಗಳನ್ನು ಈಗಾಗಲೇ ಯೋಗಿ ಸರ್ಕಾರ ಸಿದ್ಧಪಡಿಸಿದೆ. ದೇಶದ ಹಲವು ಖಾಸಗಿ ಸಂಸ್ಥೆಗಳು ಮತ್ತು ಫಾರ್ಮಸಿಗಳು ಗೋಮೂತ್ರದಿಂದ ಔಷಧ ತಯಾರಿಸುತ್ತಿವೆಯಾದರೂ ಸರಕಾರವೇ  ಪ್ರೋತ್ಸಾಹಿಸುತ್ತಿರುವುದು ಇದೇ ಮೊದಲು.

ಆಯುಷ್ ಇಲಾಖೆ ನಿರ್ದೇಶಕ ಡಾ. ಆರ್‌.ಆರ್‌. ಚೌಧರಿ ಮಾತಾಡಿ, ಆರಂಭದಲ್ಲಿ ಗೋಮೂತ್ರದಿಂದ ಸ್ವಚ್ಛತೆ ಮಾಡುವ ವಸ್ತುಗಳನ್ನು ತಯಾರಿಸುವ ಪ್ರಸ್ತಾವನೆ ಹೊಂದಲಾಗಿತ್ತು. ಆದರೆ ನಂತರ ಔಷಧಗಳನ್ನು ಸಿದ್ಧಡಿಸಲು ಮುಂಎದಾಗಿದೆ ಎಂದು ತಿಳಿಸಿದ್ದಾರೆ. ಆಯುರ್ವೇದ ಇಲಾಖೆಯು ಲಖನೌ ಮತ್ತು ಪಿಲಿಭಿತ್‌ನಲ್ಲಿರುವ ಎರಡು ಸರಕಾರಿ ಫಾರ್ಮಸಿ ಮತ್ತು ಖಾಸಗಿ ಘಟಕಗಳ ಸಹಯೋಗದಲ್ಲಿ ಔಷಧಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ಧಾರೆ.

ಬಾಂಡಾ, ಝಾನ್ಸಿ, ಮುಜಫ್ಫರ್‌ ನಗರ, ಅಲಹಾಬಾದ್‌, ವಾರಾಣಸಿ, ಬರೇಲಿ, ಲಖನೌ ಮತ್ತು ಪಿಲಿಭಿತ್‌ಗಳಲ್ಲಿ ರುವ ಎಂಟು ಮೆಡಿಕಲ್‌ ಕಾಲೇಜುಗಳಲ್ಲಿ ಆಯುರ್ವೇದ ಕೋರ್ಸ್‌ ಆರಂಭಿಸಲಾಗಿದ್ದು, ಇಲ್ಲಿಗೆ ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆ ಬರುತ್ತಾರೆ. ಲೌಖನೌ ಆಸ್ಪತ್ರೆಯಗೆ ನಿತ್ಯ 700 ಜನರು ಔಷಧ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದುವರೆಗೆ ಲಿವರ್‌ ಸಮಸ್ಯೆ, ಗಂಟು ನೋವು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ 8 ಔಷಧ ತಯಾರಿಸಿದ್ದೇವೆ. ಇತರ ಸಮಸ್ಯೆ ಮತ್ತು ರೋಗಗಳಿಗೆ ಗೋಮೂತ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಆರ್‌.ಆರ್‌. ಚೌಧರಿ ತಿಳಿಸಿದ್ದಾರೆ.

ಆದಿತ್ಯನಾಥ ಸರಕಾರ ಏಳು ಜಿಲ್ಲೆಗಳು ಮತ್ತು 16 ನಗರ ಪ್ರದೇಶಗಳಲ್ಲಿ ತಲಾ 1000 ಸಾಮರ್ಥ್ಯ‌ದ ಗೋಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮುಂದೆ ಪ್ರತಿ ಬ್ಲಾಕ್‌ನಲ್ಲಿ ಒಂದು ಗೋಶಾಲೆ ನಿರ್ಮಾಣವಾಗಲಿದೆ. ಸರಕಾರಿ ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಿ ಗೋಶಾಲೆಗೆ ನೀಡಲು ಆದಿತ್ಯನಾಥ್ ಸರಕಾರ ಚಿಂತಿಸುತ್ತಿದೆ.

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search