• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದ್ದೇ ಎಂದ ಹುತಾತ್ಮ ಯೋಧನ ತಾಯಿ

TNN Correspondent Posted On February 6, 2018
0


0
Shares
  • Share On Facebook
  • Tweet It

ಗುರುಗ್ರಾಮ್: ನನಗೆ ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದೆ ಎಂದು ಹೇಳುವ ಮೂಲಕ ಜಮ್ಮು ಕಾಶ್ಮೀರದ ಪಾಕಿಸ್ತಾನದ ಅಪ್ರಚೋಧಿತ ಸೆಲ್ ದಾಳಿಗೆ ಹುತಾತ್ಮರಾದ ಕ್ಯಾಪ್ಟನ್ ಕಪಿಲ್ ಖಂಡು ತಾಯಿ ಸೈನಿಕರ ಕುಟುಂಬದ ದೇಶಭಕ್ತಿಯನ್ನು ಅನಾವರಣಗೊಳಿಸಿದ್ದಾರೆ.

ತನ್ನ ಮಗನನ್ನು ಕಳೆದುಕೊಂಡರೂ ದೃತಿಗೆಡದ 52 ವರ್ಷದ ಸುನಿತಾ ಖಂಡು ಅವರು ‘ನನ್ನ ಮಗ ಯಾವಾಗಲೂ ದೇಶಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದ. ಸೈನ್ಯಕ್ಕೆ ಸೇರಿದ್ದರಿಂದ ಖುಷಿಯಾಗಿದ್ದ. ಕಪೀಲ್ ನಮ್ಮ ಜೀವನ ಸಾರ್ಥಕವಾಗಬೇಕು ಎನ್ನುತ್ತಿದ್ದ. ಧೈರ್ಯವಂತನಾಗಿದ್ದ. ದೇಶದ ರಕ್ಷಣೆಗಾಗಿ ಹೋರಾಡಿದವನ ತಾಯಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಎನಿಸುತ್ತದೆ.

ಕಪಿಲ್ ಜೀವನ ಸಾಹಸದಿಂದ ಕೂಡಿರಬೇಕು ಎಂದು ಬಯಸುತ್ತಿದ್ದ. ದೇಶಭಕ್ತಿಯನ್ನು ಕವನ ರಚಿಸುವ ಮೂಲಕ ವ್ಯಕ್ತಪಡಿಸುತ್ತಿದ್ದ. ನಿಸರ್ಗವನ್ನು ಪ್ರೀತಿಸುತ್ತಿದ್ದ. ದೇಶವೇ ನನ್ನ ಮೊದಲ ಆದ್ಯತೆ ಎಂದು ಹೇಳುತ್ತಿದ್ದ. ಅಂತಹ ಮಗನನ್ನು ಕಳೆದುಕೊಂಡಿದ್ದು ದುಖಃವೆನ್ನಿಸುತ್ತಿದೆ.

ಪಾಕ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಆಗಲಿ

ನಿತ್ಯ ದೇಶಕ್ಕೆ ಕಂಟಕವಾಗಿರುವ ಪಾಕಿಸ್ತಾನದ ವಿರುದ್ಧ ಸರ್ಕಾರ ಸೇಡು ತೀರಿಸಿಕೊಳ್ಳಬೇಕು. ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಂತಹ ಕಾರ್ಯಾಚರಣೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಮೂಲಕ ಹುತಾತ್ಮ ಸೈನಿಕರ ಆತ್ಮಕ್ಕೆ ಗೌರವ ಸಲ್ಲಿಸಬೇಕು. ನನ್ನ ಮಗ ಇನ್ನು 15-20 ವರ್ಷವಿದ್ದರೇ ದೇಶಕ್ಕೆ ಅವನು ಹೆಚ್ಚಿನ ಕೊಡುಗೆ ನೀಡುತ್ತಿದ್ದ ಎಂದು ಹೇಳುವ ಮೂಲಕ ಸುನಿತಾ ಖಂಡು ಮಾದರಿಯಾಗಿದ್ದಾರೆ. ಹರ್ಯಾಣದ ಗುರುಗ್ರಾಮ್ ನಿಂದ  ಪಟೌಡಿ ಸಮೀಪದ ರನ್ಸಿಕಾ ಗ್ರಾಮದಲ್ಲಿ ಕ್ಯಾಪ್ಟನ್ ಕಪಿಲ್ ಖಂಡು ಕುಟುಂಬ ಜೀವನ ಸಾಗಿಸುತ್ತಿದೆ.

ಫೆ.10ಕ್ಕೆ ಜನ್ಮದಿನ

ಕಪಿಲ್ ಖಂಡು ಫೆ.10ರಂದು 23ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುವ ಸಂಭ್ರಮದಲ್ಲಿದ್ದರು. ಇತ್ತೀಚೆಗೆ ಮನಗೆ ಫೋನ್ ಮಾಡಿದಾಗ ‘ಶೀಘ್ರದಲ್ಲಿ ಮನೆಗೆ ಬರುವೆ. ಇಲ್ಲಿ ಎಲ್ಲವೂ ಚೆನ್ನಾಗಿದೆ. ನನ್ನ ಜನ್ಮದಿನದಂದು ಭೇಟಿ ನೀಡಿ ತಾಯಿಗೆ ಅಚ್ಚರಿ ಮೂಡಿಸುವೆ ಎಂದು ಹೇಳಿದ್ದರು ಎಂದು ಕಪಿಲ್ ಸಹೋದರಿ ಸೊನಿಯಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search