• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದ್ದೇ ಎಂದ ಹುತಾತ್ಮ ಯೋಧನ ತಾಯಿ

TNN Correspondent Posted On February 6, 2018
0


0
Shares
  • Share On Facebook
  • Tweet It

ಗುರುಗ್ರಾಮ್: ನನಗೆ ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದೆ ಎಂದು ಹೇಳುವ ಮೂಲಕ ಜಮ್ಮು ಕಾಶ್ಮೀರದ ಪಾಕಿಸ್ತಾನದ ಅಪ್ರಚೋಧಿತ ಸೆಲ್ ದಾಳಿಗೆ ಹುತಾತ್ಮರಾದ ಕ್ಯಾಪ್ಟನ್ ಕಪಿಲ್ ಖಂಡು ತಾಯಿ ಸೈನಿಕರ ಕುಟುಂಬದ ದೇಶಭಕ್ತಿಯನ್ನು ಅನಾವರಣಗೊಳಿಸಿದ್ದಾರೆ.

ತನ್ನ ಮಗನನ್ನು ಕಳೆದುಕೊಂಡರೂ ದೃತಿಗೆಡದ 52 ವರ್ಷದ ಸುನಿತಾ ಖಂಡು ಅವರು ‘ನನ್ನ ಮಗ ಯಾವಾಗಲೂ ದೇಶಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದ. ಸೈನ್ಯಕ್ಕೆ ಸೇರಿದ್ದರಿಂದ ಖುಷಿಯಾಗಿದ್ದ. ಕಪೀಲ್ ನಮ್ಮ ಜೀವನ ಸಾರ್ಥಕವಾಗಬೇಕು ಎನ್ನುತ್ತಿದ್ದ. ಧೈರ್ಯವಂತನಾಗಿದ್ದ. ದೇಶದ ರಕ್ಷಣೆಗಾಗಿ ಹೋರಾಡಿದವನ ತಾಯಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಎನಿಸುತ್ತದೆ.

ಕಪಿಲ್ ಜೀವನ ಸಾಹಸದಿಂದ ಕೂಡಿರಬೇಕು ಎಂದು ಬಯಸುತ್ತಿದ್ದ. ದೇಶಭಕ್ತಿಯನ್ನು ಕವನ ರಚಿಸುವ ಮೂಲಕ ವ್ಯಕ್ತಪಡಿಸುತ್ತಿದ್ದ. ನಿಸರ್ಗವನ್ನು ಪ್ರೀತಿಸುತ್ತಿದ್ದ. ದೇಶವೇ ನನ್ನ ಮೊದಲ ಆದ್ಯತೆ ಎಂದು ಹೇಳುತ್ತಿದ್ದ. ಅಂತಹ ಮಗನನ್ನು ಕಳೆದುಕೊಂಡಿದ್ದು ದುಖಃವೆನ್ನಿಸುತ್ತಿದೆ.

ಪಾಕ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಆಗಲಿ

ನಿತ್ಯ ದೇಶಕ್ಕೆ ಕಂಟಕವಾಗಿರುವ ಪಾಕಿಸ್ತಾನದ ವಿರುದ್ಧ ಸರ್ಕಾರ ಸೇಡು ತೀರಿಸಿಕೊಳ್ಳಬೇಕು. ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಂತಹ ಕಾರ್ಯಾಚರಣೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಮೂಲಕ ಹುತಾತ್ಮ ಸೈನಿಕರ ಆತ್ಮಕ್ಕೆ ಗೌರವ ಸಲ್ಲಿಸಬೇಕು. ನನ್ನ ಮಗ ಇನ್ನು 15-20 ವರ್ಷವಿದ್ದರೇ ದೇಶಕ್ಕೆ ಅವನು ಹೆಚ್ಚಿನ ಕೊಡುಗೆ ನೀಡುತ್ತಿದ್ದ ಎಂದು ಹೇಳುವ ಮೂಲಕ ಸುನಿತಾ ಖಂಡು ಮಾದರಿಯಾಗಿದ್ದಾರೆ. ಹರ್ಯಾಣದ ಗುರುಗ್ರಾಮ್ ನಿಂದ  ಪಟೌಡಿ ಸಮೀಪದ ರನ್ಸಿಕಾ ಗ್ರಾಮದಲ್ಲಿ ಕ್ಯಾಪ್ಟನ್ ಕಪಿಲ್ ಖಂಡು ಕುಟುಂಬ ಜೀವನ ಸಾಗಿಸುತ್ತಿದೆ.

ಫೆ.10ಕ್ಕೆ ಜನ್ಮದಿನ

ಕಪಿಲ್ ಖಂಡು ಫೆ.10ರಂದು 23ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುವ ಸಂಭ್ರಮದಲ್ಲಿದ್ದರು. ಇತ್ತೀಚೆಗೆ ಮನಗೆ ಫೋನ್ ಮಾಡಿದಾಗ ‘ಶೀಘ್ರದಲ್ಲಿ ಮನೆಗೆ ಬರುವೆ. ಇಲ್ಲಿ ಎಲ್ಲವೂ ಚೆನ್ನಾಗಿದೆ. ನನ್ನ ಜನ್ಮದಿನದಂದು ಭೇಟಿ ನೀಡಿ ತಾಯಿಗೆ ಅಚ್ಚರಿ ಮೂಡಿಸುವೆ ಎಂದು ಹೇಳಿದ್ದರು ಎಂದು ಕಪಿಲ್ ಸಹೋದರಿ ಸೊನಿಯಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search