• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

35 ದಿನದಲ್ಲೇ 240 ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಪಿ ಪಾಕಿಸ್ತಾನ!

TNN Correspondent Posted On February 6, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವ ಹಾಗೂ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಬೆಂಬಲದಿಂದ ಪಿಡಿಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಉಗ್ರರ ಸಂಹಾರವಾಗುತ್ತಿದೆ ಎನ್ನುತ್ತಿರುವ ಬೆನ್ನಲ್ಲೇ ಪಾಕಿಸ್ತಾನ ತನ್ನ ಎಂದಿನ ಕುತುಂತ್ರ ಬುದ್ಧಿಯನ್ನು ಮುಂದುವರಿಸಿದೆ.

ಹೌದು, ಕಳೆದ 35 ದಿನಗಳಲ್ಲಿ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಇನ್ನಿಲ್ಲದ ಕುತಂತ್ರ ಮಾಡುತ್ತಿದ್ದು, ಈ ಕಿರು ಅವಧಿಯಲ್ಲೇ ಸುಮಾರು 240 ಬಾರಿ ಕದನ ವಿರಾಮ ಉಲ್ಲಂಘಿಸಿ ಭಾರತದೊಳಕ್ಕೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.

ಇದು ಕಳೆದ ವರ್ಷಗಳಲ್ಲೇ ಅತಿ ಕಡಿಮೆ ಅವಧಿಯಲ್ಲೇ ಹೆಚ್ಚು ಬಾರಿ ಪಾಕಿಸ್ತಾನ ಅಂತರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದೆ ಎಂದು ದಾಖಲಾಗಿದೆ. 2016ರಲ್ಲಿ ಪಾಕಿಸ್ತಾನ 228 ಬಾರಿ ಹಾಗೂ 2017ರಲ್ಲಿ ಬರೊಬ್ಬರಿ 860 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ಅಂದರೆ, ಈ 35 ದಿನದಲ್ಲೇ ಪಾಕಿಸ್ತಾನ 240 ಬಾರಿ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಮೆರೆದಿದೆ ಎಂದು ತಿಳಿದುಬಂದಿದೆ.

ಆದರೂ ಭಾರತೀಯ ಸೈನ್ಯ ಪಾಕಿಸ್ತಾನದ ಯಾವ ದಾಳಿಗೂ ಜಗ್ಗದೇ ಪ್ರತಿ ದಾಳಿ ಮಾಡುತ್ತಿದ್ದು, ಮುಂದೆ ಮಾಡುವ ಯಾವ ದಾಳಿಯನ್ನೂ ನಾವು ಹಿಮ್ಮೆಟ್ಟಿಸದೆ ಬಿಡುವುದಿಲ್ಲ ಎಂದು ಸೇನೆಯ ಲೆಫ್ಟಿನೆಂಟ್ ಜನರಲ್ ಶರತ್ ಚಂದ್ರ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕದನ ವಿರಾಮ ಉಲ್ಲಂಘಿಸಿ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಮಾಡಿದ್ದ ದಾಳಿಯಲ್ಲಿ ಭಾರತದ ನಾಲ್ವರು ಯೋಧರು ಹುತಾತ್ಮರಾಗಿದ್ದರು. 2017ರಲ್ಲಿ ಭಾರತ 209ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರನ್ನು ಹತ್ಯೆ ಮಾಡಿದೆ. ಇಷ್ಟಾದರೂ ಪಾಕಿಸ್ತಾನ ಪಾಠ ಕಲಿತಿಲ್ಲ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search