• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾಳಿಯಲ್ಲಿ ಕಾಲು ಕಳೆದುಕೊಂಡರೂ ಸೈನ್ಯಕ್ಕೆ ಮರಳಿದ ಯೋಧನ ದೇಶಪ್ರೇಮ ಎಂಥಾದ್ದು

TNN Correspondent Posted On February 6, 2018
0


0
Shares
  • Share On Facebook
  • Tweet It

ರಾಯಪುರ್: ನಮ್ಮ  ಸೈನಿಕರಿಗೆ ದೇಶದ ಮೇಲಿರುವ ಅಪಾರ ಶ್ರದ್ಧೆಯೇ ಅಂತದ್ದೂ. ತಮ್ಮ ಜೀವ ಆಪತ್ತಿನಲ್ಲಿದೆ, ಜೀವಕ್ಕೆ ಕುತ್ತು ಬರುತ್ತಿದೆ ಎಂದು ಗೊತ್ತಿದ್ದರೂ ಅವರು ಎಂದಿಗೂ ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಸಾಕ್ಷಿ ಸಿಆರ್ ಫಿಎಫ್ ಯೋಧ ಭೋಗಡೆ ರಾಮದಾಸ್ ಬಾಹು.

ಯೋಧ ಬೋಗಡೆ ರಾಮದಾಸ್ ಬಾಹು ಜೀವನ ಗಾಥೆಯೇ ಅಂತಹದ್ದು. ನಕ್ಸಲರೊಂದಿಗೆ ಹೋರಾಟದಲ್ಲಿ ನಡೆದ ಬ್ಲಾಸ್ಟ್ ನಲ್ಲಿ  ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ಇದೀಗ ಸೂಕ್ತ ಚಿಕಿತ್ಸೆ ಪಡೆದುಕೊಂಡು ಮರಳಿ ಸೈನಿಕ ಶಿಬಿರಕ್ಕೆ ಕೆಲಸಕ್ಕೆ ಹಾಜರಾಗಿ, ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕೋಬ್ರಾ ಕಮಾಂಡೋ ಆಗಿರುವ ರಾಮದಾಸ್ ಅವರು 2017ರಲ್ಲಿ ಛತ್ತಿಡಗಡದ ಸುಕ್ಮಾ ಜಿಲ್ಲೆಯ ನಕ್ಸಲರು ನಡೆಸಿದ ಬ್ಲಾಸ್ಟ್ ನಲ್ಲಿ ಗಾಯಗೊಂಡಿದ್ದರು. 208 ಬಟಾಲಿಯನ್, ಸಿಆರ್ ಫಿಎಫ್ ಮತ್ತು ಜಿಲ್ಲಾ ಪೊಲೀಸ್ ದಳ ಜಂಟಿಯಾಗಿ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಈ ವೇಳೆ ಅರಣ್ಯದಲ್ಲಿರುವ ಕಸರಾಮ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ರಾಮದಾಸ್ ಐಇಡಿ ಬ್ಲಾಸ್ಟ್ ನಿಂದ ಗಂಭೀರವಾಗಿ ಗಾಯಗೊಂಡಿದ್ದರು.

2017 ನವೆಂಬರ್ 29ರಂದು ರಾಮದಾಸ್ ಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಗಂಭಿರವಾಗಿ ಗಾಯಗೊಂಡಿದ್ದರಿಂದ         ರಾಮದಾಸ್ ಅವರ ಕಾಲನ್ನು ಮೊಳಕಾಲಿಗಿಂತ ಮೇಲೆ ತುಂಡರಿಸಲಾಗಿತ್ತು. ಮತ್ತು ಎಡಗೈಗೆ ಗಂಭೀರ ಗಾಯಗಳಾಗಿದ್ದವು. ಇದೀಗ ರಾಮದಾಸ್ ಚಿಕಿತ್ಸೆಯಿಂದ ಗುಣಮುಖರಾಗಿದ್ದು, 208 ಕೋಬ್ರಾ ಪಡೆಯಲ್ಲಿ ಕಾರ್ಯ ನಿರ್ವಹಿಸಲು ಮರಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search