• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಛತ್ತೀಸ್ ಗಡದ ನಕ್ಸಲ್ ಪೀಡಿತ ಪ್ರದೇಶದ ಮಕ್ಕಳಿಗೆ ಉಚಿತ ಪಾಠ ಮಾಡುವ ಸಿಆರ್ ಪಿಎಫ್ ಯೋಧರಿಗೆ ಸಲಾಂ!

TNN Correspondent Posted On February 6, 2018
0


0
Shares
  • Share On Facebook
  • Tweet It

ರಾಯಪುರ: ಛತ್ತೀಸ್ ಗಡ ಎಂದರೇನೆ ಹಾಗೆ. ಅದು ನಕ್ಸಲ್ ಪೀಡಿತ ಪ್ರದೇಶ. ಹಲವು ಪ್ರದೇಶಗಳಂತೂ ನಕ್ಸಲರ ಹಾವಳಿಯಿಂದ ಅಭಿವೃದ್ಧಿ ಮೆರೆತಿವೆ. ಜನರಿಗೆ ಊಟ-ತಿಂಡಿ, ಶಾಲೆ, ವಸತಿ… ಹೂಂ ಹೂಂ. ಯಾವ ಸೌಲಭ್ಯವೂ ಇಲ್ಲ. ಜತೆಗೆ ನೆಮ್ಮದಿಯಾದರೂ ಇದೆಯಾ ಅದೂ ಇಲ್ಲ.

ಏಕೆಂದರೆ, ಕೆಂಪು ಉಗ್ರರು ಅಭಿವೃದ್ಧಿ ಕುಂಠಿತಗೊಳಿಸುವ ಜತೆಗೆ ಜನರ ಬಡತನವನ್ನೇ ಬಂಡವಾಳವನ್ನಾಗಿಸಿಕೊಂಡು ಅವರನ್ನೂ ಕೆಂಪು ಉಗ್ರರನ್ನಾಗಿ ಮಾಡುತ್ತಾರೆ. ತರಬೇತಿ ನೀಡಿ, ಮನವೊಲಿಸಿ ಅವರನ್ನು ನಕ್ಸಲರನ್ನಾಗಿ ಮಾಡುತ್ತಾರೆ.

ಆದರೆ, ಇದನ್ನು ಮನಗಂಡ ನಮ್ಮ ಹೆಮ್ಮೆಯ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ ಯೋಧರು ನಕ್ಸಲ್ ಪೀಡಿತ ಗ್ರಾಮವೊಂದರಲ್ಲಿ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲು, ದಿನಾಲೂ ತರಗತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆ ಮೂಲಕ ಜನರನ್ನು ಕಾಯುವ ಯೋಧರು, ಜನರ ಏಳಿಗೆಗೂ ಕಾರಣವಾಗುತ್ತಿದ್ದಾರೆ.

ಹೌದು, ಬಿಜಾಪುರದಿಂದ 8 ಕಿಲೋಮೀಟರ್ ದೂರದಲ್ಲಿರುವ, ನಕ್ಸಲರ ಅಟ್ಟಹಾಸಕ್ಕೆ ಸುದ್ದಿಯಾಗುವ ಚೆರ್ಪಾಲ್ ಎಂಬಲ್ಲಿ 85ನೇ ಬೆಟಾಲಿಯನ್ ನ ಯೋಧರು ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಸೇನೆಯ ನೆಲೆಯೇ ಪಾಠಶಾಲೆಯಾಗಿದ್ದು, ಪ್ರತಿದಿನ ಸುಮಾರು 40 ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿದ್ದಾರೆ.

ಬರೀ ಪಾಠವೊಂದನ್ನೇ ಮಾಡುತ್ತಿಲ್ಲ. ನಾವು ಸಮಾಜಮುಖಿಗಳಾಗಿ ಕೆಲಸ ಮಾಡುತ್ತಿದ್ದೇವೆ. ಈ ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಜ್ಞಾನ ಸಂಪಾದಿಸುತ್ತಾರೆ ಎಂಬ ವಿಶ್ವಾಸವಿದೆ. ಇವರೆಗೆ ಪ್ರೊಜೆಕ್ಟರ್ ಮೂಲಕ ಸ್ಫೂರ್ತಿ ತುಂಬುವ ಸಿನಿಮಾ ಸಹ ತೋರಿಸಿ ಪಾಠದತ್ತ ಸೆಳೆಯುತ್ತಿದ್ದೇವೆ ಎಂದು ಸಹಾಯಕ ಕಮಾಂಡಂಟ್ ಅವಿನಾಶ್ ತಿಳಿಸಿದ್ದಾರೆ.

ನಾನು ಕಠಿಣ ಪರಿಶ್ರಮದಿಂದ ಓದಿ ಮುಂದೊಂದು ದಿನ ಸಿಆರ್ ಪಿಎಫ್ ಯೋಧರ ಹಾಗೆ ಶಿಕ್ಷಕನಾಗುತ್ತೇನೆ. ನಮ್ಮ ರೀತಿಯೇ ಪಕ್ಕದ ಗ್ರಾಮಗಳ ವಿದ್ಯಾರ್ಥಿಗಳೂ ಶಾಲೆಗೆ ಹೋಗಬೇಕು ಎಂಬುದೇ ನನ್ನಾಸೆ ಎನ್ನುತ್ತಾನೆ 14 ವರ್ಷದ ಬಾಲಕನೊಬ್ಬ.

ಒಟ್ಟಿನಲ್ಲಿ ದೇಶ ಕಾಯುವ ಯೋಧರು ಸಮಾಜವನ್ನೂ ಕಾಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಯೋಧರ ಶ್ರಮ ಫಲ ನೀಡಲಿ, ಮಕ್ಕಳು ಶಿಕ್ಷಣವಂತರಾಗಿ ನಕ್ಸಲಿಸಂ ತೊಲಗಿಸಲಿ. ಎಂಬುದೇ ನಮ್ಮ ಆಶಯ. ಯೋಧರ ಶ್ರಮಕ್ಕೊಂದು ಸಲಾಂ ಇರಲಿ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search