• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಅವರೇ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ವಿಳಾಸ ಬೇಕಿದ್ದರೆ ಈ ಸುದ್ದಿ ಓದಿ ಸ್ವಾಮಿ!

TNN Correspondent Posted On February 7, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುತ್ತಲೇ ಅದು ಮೇಲ್ವರ್ಗದವರ ಪರ ಇರುವ ಸರ್ಕಾರ, ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ನೀಡದ ಸರ್ಕಾರ ಎಂದೆಲ್ಲ ಪ್ರಾದೇಶಿಕ ಹಾಗೂ ಕಾಂಗ್ರೆಸ್ ಪಕ್ಷ ಟೀಕಿಸುತ್ತವೆ. ಆದರೆ ಮೋದಿ ಅವರು ಮಾತ್ರ ತಮ್ಮ ಬಗ್ಗೆ ಯಾರೇ ಪೂರ್ವಾಗ್ರಹ ಪೀಡಿತರಾದರೂ, ಅದನ್ನು ಸುಳ್ಳು ಮಾಡುವಲ್ಲಿ ನಿಸ್ಸೀಮರು.

ಈಗ ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಡಿ ಇಟ್ಟಿದ್ದು, ಆ ಸರ್ಕಾರ, ಈ ಸರ್ಕಾರ ಎನ್ನದೆ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಬರೋಬ್ಬರಿ 65 ಸಾವಿರ ಕೋಟಿ ರುಪಾಯಿ ಬಿಡುಗಡೆಗೊಳಿಸಿದೆ.

ಈ ಕುರಿತು ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಲೋಕಸಭೆಗೆ ಲಿಖಿತವಾಗಿ ಉತ್ತರ ನೀಡಿದ್ದು, ಜನವರಿ ಅಂತ್ಯದ ವೇಳೆಗೆ “2017-18ರ ಪರಿಶಿಷ್ಟ ಜಾತಿಗಾಗಿ ಜಾರಿಗೊಳಿಸಿದ ಕೇಂದ್ರ ವಿಶೇಷ ಸಹಾಯಧನದ ಉಪಯೋಜನೆಯಡಿ 65,003 ಕೋಟಿ ರು. ಬಿಡುಗಡೆಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಕಲ್ಯಾಣ ಸಚಿವಾಲಯದಿಂದ ಹಣ ಬಿಡುಗಡೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ 80 ಸಾವಿರ ಕೋಟಿ ರು. ನೀಡುವುದಾಗಿ ತಿಳಿಸಿದೆ. ಅದರಲ್ಲಿ ಈಗ ಬಿಡುಗಡೆಯಾಗಿರುವ ಹಣ ಶೇ.80ಕ್ಕಿಂತ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಹಣವನ್ನು ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ಸಮರ್ಪಕವಾಗಿ ಬಳಸಬೇಕು. ದುರುಪಯೋಗವಾಗುತ್ತಿರುವ ಕುರಿತು ದೂರುಗಳಿದ್ದು, ಈ ಬಾರಿ ನೀಡಿದ ಹಣದಲ್ಲಿ ದುರುಪಯೋಗವಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಹ ಎಚ್ಚರಿಸಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ತತ್ವದಡಿ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಇಷ್ಟು ದೊಡ್ಡ ಮೊತ್ತದ ಹಣ ಬಿಡುಗಡೆ ಮಾಡಿದೆ. ಆ ಮೂಲಕ ತಾನು ಆಡಿದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮಾತನ್ನು ಉಳಿಸಿಕೊಂಡಿದೆ. ಒಂದು ಸರ್ಕಾರದ ಪ್ರಮುಖ ಗುಣಲಕ್ಷಣ ಎಂದರೆ ಇದೇ ಅಲ್ಲವೇ?

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search