• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಅವರೇ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ವಿಳಾಸ ಬೇಕಿದ್ದರೆ ಈ ಸುದ್ದಿ ಓದಿ ಸ್ವಾಮಿ!

TNN Correspondent Posted On February 7, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುತ್ತಲೇ ಅದು ಮೇಲ್ವರ್ಗದವರ ಪರ ಇರುವ ಸರ್ಕಾರ, ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ನೀಡದ ಸರ್ಕಾರ ಎಂದೆಲ್ಲ ಪ್ರಾದೇಶಿಕ ಹಾಗೂ ಕಾಂಗ್ರೆಸ್ ಪಕ್ಷ ಟೀಕಿಸುತ್ತವೆ. ಆದರೆ ಮೋದಿ ಅವರು ಮಾತ್ರ ತಮ್ಮ ಬಗ್ಗೆ ಯಾರೇ ಪೂರ್ವಾಗ್ರಹ ಪೀಡಿತರಾದರೂ, ಅದನ್ನು ಸುಳ್ಳು ಮಾಡುವಲ್ಲಿ ನಿಸ್ಸೀಮರು.

ಈಗ ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಡಿ ಇಟ್ಟಿದ್ದು, ಆ ಸರ್ಕಾರ, ಈ ಸರ್ಕಾರ ಎನ್ನದೆ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಬರೋಬ್ಬರಿ 65 ಸಾವಿರ ಕೋಟಿ ರುಪಾಯಿ ಬಿಡುಗಡೆಗೊಳಿಸಿದೆ.

ಈ ಕುರಿತು ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಲೋಕಸಭೆಗೆ ಲಿಖಿತವಾಗಿ ಉತ್ತರ ನೀಡಿದ್ದು, ಜನವರಿ ಅಂತ್ಯದ ವೇಳೆಗೆ “2017-18ರ ಪರಿಶಿಷ್ಟ ಜಾತಿಗಾಗಿ ಜಾರಿಗೊಳಿಸಿದ ಕೇಂದ್ರ ವಿಶೇಷ ಸಹಾಯಧನದ ಉಪಯೋಜನೆಯಡಿ 65,003 ಕೋಟಿ ರು. ಬಿಡುಗಡೆಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಕಲ್ಯಾಣ ಸಚಿವಾಲಯದಿಂದ ಹಣ ಬಿಡುಗಡೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ 80 ಸಾವಿರ ಕೋಟಿ ರು. ನೀಡುವುದಾಗಿ ತಿಳಿಸಿದೆ. ಅದರಲ್ಲಿ ಈಗ ಬಿಡುಗಡೆಯಾಗಿರುವ ಹಣ ಶೇ.80ಕ್ಕಿಂತ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಹಣವನ್ನು ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ಸಮರ್ಪಕವಾಗಿ ಬಳಸಬೇಕು. ದುರುಪಯೋಗವಾಗುತ್ತಿರುವ ಕುರಿತು ದೂರುಗಳಿದ್ದು, ಈ ಬಾರಿ ನೀಡಿದ ಹಣದಲ್ಲಿ ದುರುಪಯೋಗವಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಹ ಎಚ್ಚರಿಸಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ತತ್ವದಡಿ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಇಷ್ಟು ದೊಡ್ಡ ಮೊತ್ತದ ಹಣ ಬಿಡುಗಡೆ ಮಾಡಿದೆ. ಆ ಮೂಲಕ ತಾನು ಆಡಿದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮಾತನ್ನು ಉಳಿಸಿಕೊಂಡಿದೆ. ಒಂದು ಸರ್ಕಾರದ ಪ್ರಮುಖ ಗುಣಲಕ್ಷಣ ಎಂದರೆ ಇದೇ ಅಲ್ಲವೇ?

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search