• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಅವರೇ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ವಿಳಾಸ ಬೇಕಿದ್ದರೆ ಈ ಸುದ್ದಿ ಓದಿ ಸ್ವಾಮಿ!

TNN Correspondent Posted On February 7, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುತ್ತಲೇ ಅದು ಮೇಲ್ವರ್ಗದವರ ಪರ ಇರುವ ಸರ್ಕಾರ, ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ನೀಡದ ಸರ್ಕಾರ ಎಂದೆಲ್ಲ ಪ್ರಾದೇಶಿಕ ಹಾಗೂ ಕಾಂಗ್ರೆಸ್ ಪಕ್ಷ ಟೀಕಿಸುತ್ತವೆ. ಆದರೆ ಮೋದಿ ಅವರು ಮಾತ್ರ ತಮ್ಮ ಬಗ್ಗೆ ಯಾರೇ ಪೂರ್ವಾಗ್ರಹ ಪೀಡಿತರಾದರೂ, ಅದನ್ನು ಸುಳ್ಳು ಮಾಡುವಲ್ಲಿ ನಿಸ್ಸೀಮರು.

ಈಗ ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಡಿ ಇಟ್ಟಿದ್ದು, ಆ ಸರ್ಕಾರ, ಈ ಸರ್ಕಾರ ಎನ್ನದೆ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಬರೋಬ್ಬರಿ 65 ಸಾವಿರ ಕೋಟಿ ರುಪಾಯಿ ಬಿಡುಗಡೆಗೊಳಿಸಿದೆ.

ಈ ಕುರಿತು ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಲೋಕಸಭೆಗೆ ಲಿಖಿತವಾಗಿ ಉತ್ತರ ನೀಡಿದ್ದು, ಜನವರಿ ಅಂತ್ಯದ ವೇಳೆಗೆ “2017-18ರ ಪರಿಶಿಷ್ಟ ಜಾತಿಗಾಗಿ ಜಾರಿಗೊಳಿಸಿದ ಕೇಂದ್ರ ವಿಶೇಷ ಸಹಾಯಧನದ ಉಪಯೋಜನೆಯಡಿ 65,003 ಕೋಟಿ ರು. ಬಿಡುಗಡೆಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಕಲ್ಯಾಣ ಸಚಿವಾಲಯದಿಂದ ಹಣ ಬಿಡುಗಡೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ 80 ಸಾವಿರ ಕೋಟಿ ರು. ನೀಡುವುದಾಗಿ ತಿಳಿಸಿದೆ. ಅದರಲ್ಲಿ ಈಗ ಬಿಡುಗಡೆಯಾಗಿರುವ ಹಣ ಶೇ.80ಕ್ಕಿಂತ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಹಣವನ್ನು ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ಸಮರ್ಪಕವಾಗಿ ಬಳಸಬೇಕು. ದುರುಪಯೋಗವಾಗುತ್ತಿರುವ ಕುರಿತು ದೂರುಗಳಿದ್ದು, ಈ ಬಾರಿ ನೀಡಿದ ಹಣದಲ್ಲಿ ದುರುಪಯೋಗವಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಹ ಎಚ್ಚರಿಸಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ತತ್ವದಡಿ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಇಷ್ಟು ದೊಡ್ಡ ಮೊತ್ತದ ಹಣ ಬಿಡುಗಡೆ ಮಾಡಿದೆ. ಆ ಮೂಲಕ ತಾನು ಆಡಿದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮಾತನ್ನು ಉಳಿಸಿಕೊಂಡಿದೆ. ಒಂದು ಸರ್ಕಾರದ ಪ್ರಮುಖ ಗುಣಲಕ್ಷಣ ಎಂದರೆ ಇದೇ ಅಲ್ಲವೇ?

0
Shares
  • Share On Facebook
  • Tweet It




Trending Now
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
  • Popular Posts

    • 1
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 2
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 3
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 4
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 5
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ

  • Privacy Policy
  • Contact
© Tulunadu Infomedia.

Press enter/return to begin your search