• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಅವರೇ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ವಿಳಾಸ ಬೇಕಿದ್ದರೆ ಈ ಸುದ್ದಿ ಓದಿ ಸ್ವಾಮಿ!

TNN Correspondent Posted On February 7, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುತ್ತಲೇ ಅದು ಮೇಲ್ವರ್ಗದವರ ಪರ ಇರುವ ಸರ್ಕಾರ, ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ನೀಡದ ಸರ್ಕಾರ ಎಂದೆಲ್ಲ ಪ್ರಾದೇಶಿಕ ಹಾಗೂ ಕಾಂಗ್ರೆಸ್ ಪಕ್ಷ ಟೀಕಿಸುತ್ತವೆ. ಆದರೆ ಮೋದಿ ಅವರು ಮಾತ್ರ ತಮ್ಮ ಬಗ್ಗೆ ಯಾರೇ ಪೂರ್ವಾಗ್ರಹ ಪೀಡಿತರಾದರೂ, ಅದನ್ನು ಸುಳ್ಳು ಮಾಡುವಲ್ಲಿ ನಿಸ್ಸೀಮರು.

ಈಗ ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಡಿ ಇಟ್ಟಿದ್ದು, ಆ ಸರ್ಕಾರ, ಈ ಸರ್ಕಾರ ಎನ್ನದೆ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಬರೋಬ್ಬರಿ 65 ಸಾವಿರ ಕೋಟಿ ರುಪಾಯಿ ಬಿಡುಗಡೆಗೊಳಿಸಿದೆ.

ಈ ಕುರಿತು ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಲೋಕಸಭೆಗೆ ಲಿಖಿತವಾಗಿ ಉತ್ತರ ನೀಡಿದ್ದು, ಜನವರಿ ಅಂತ್ಯದ ವೇಳೆಗೆ “2017-18ರ ಪರಿಶಿಷ್ಟ ಜಾತಿಗಾಗಿ ಜಾರಿಗೊಳಿಸಿದ ಕೇಂದ್ರ ವಿಶೇಷ ಸಹಾಯಧನದ ಉಪಯೋಜನೆಯಡಿ 65,003 ಕೋಟಿ ರು. ಬಿಡುಗಡೆಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಕಲ್ಯಾಣ ಸಚಿವಾಲಯದಿಂದ ಹಣ ಬಿಡುಗಡೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ 80 ಸಾವಿರ ಕೋಟಿ ರು. ನೀಡುವುದಾಗಿ ತಿಳಿಸಿದೆ. ಅದರಲ್ಲಿ ಈಗ ಬಿಡುಗಡೆಯಾಗಿರುವ ಹಣ ಶೇ.80ಕ್ಕಿಂತ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಹಣವನ್ನು ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ಸಮರ್ಪಕವಾಗಿ ಬಳಸಬೇಕು. ದುರುಪಯೋಗವಾಗುತ್ತಿರುವ ಕುರಿತು ದೂರುಗಳಿದ್ದು, ಈ ಬಾರಿ ನೀಡಿದ ಹಣದಲ್ಲಿ ದುರುಪಯೋಗವಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಹ ಎಚ್ಚರಿಸಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ತತ್ವದಡಿ ಎಲ್ಲ ರಾಜ್ಯಗಳ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಇಷ್ಟು ದೊಡ್ಡ ಮೊತ್ತದ ಹಣ ಬಿಡುಗಡೆ ಮಾಡಿದೆ. ಆ ಮೂಲಕ ತಾನು ಆಡಿದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮಾತನ್ನು ಉಳಿಸಿಕೊಂಡಿದೆ. ಒಂದು ಸರ್ಕಾರದ ಪ್ರಮುಖ ಗುಣಲಕ್ಷಣ ಎಂದರೆ ಇದೇ ಅಲ್ಲವೇ?

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search