• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿರುವ ಈ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯನವರಿಗೊಂದಿಷ್ಟು ಪ್ರಶ್ನೆಗಳು…

ವಿಶಾಲ್ ಗೌಡ ಕುಶಾಲನಗರ Posted On February 7, 2018
0


0
Shares
  • Share On Facebook
  • Tweet It

ದೇಶದ 19 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ಕರ್ನಾಟಕದಲ್ಲಾದರೂ ಅಸ್ತಿತ್ವ ಉಳಿಸಿಕೊಳ್ಳುವ ತವಕ, ಧಾವಂತದಲ್ಲಿರುವ ಕಾಂಗ್ರೆಸ್, ಅಮಿತ್ ಷಾ ಕರ್ನಾಟಕಕ್ಕೆ ಬರುತ್ತಾರೆ ಎಂದು ಗೊತ್ತಾದ ಕೂಡಲೇ ಮಹದಾಯಿ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ನೀಡಿದ್ದ ಬಂದ್ ಕರೆಯನ್ನು ಜನವರಿ 27ರಿಂದ 25ಕ್ಕೆ ಇಳಿಸಿತು.

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಾರೆ ಎಂಬುದನ್ನು ಅರಿತ ಕಾಂಗ್ರೆಸ್ ಭೀತಿಗೊಳಗಾಗಿ ಹಲವು ತಡೆಯೊಡ್ಡಲು ಮುಂದಾಯಿತು. ಆದರೇನಂತೆ ಪ್ರಧಾನಿ ಮೋದಿ ಅವರ ಅಲೆ ಕಾಂಗ್ರೆಸ್ ತಂತ್ರಗಳನ್ನು ಕೊಚ್ಚಿಹೋಗುವಂತೆ ಮಾಡಿತು. ಲಕ್ಷಾಂತರ ಜನ ಮೋದಿ ಭಾಷಣಕ್ಕೆ ಸಾಕ್ಷಿಯಾದರು.

ಇದರಿಂದ ಮತ್ತೂ ಆತಂಕಕ್ಕೊಳಗಾದ ಕಾಂಗ್ರೆಸ್ ಮೋದಿ ಅವರು ಮಹದಾಯಿ ವಿಚಾರ ಪ್ರಸ್ತಾಪಿಸಲಿಲ್ಲ ಎಂಬ ರಾಗ ಶುರುವಿಟ್ಟುಕೊಂಡಿತು. ಆದರೆ ಈಗ, ಅಂದರೆ ಫೆಬ್ರವರಿ 10ರಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಪ್ರವಾಸ ಆರಂಭಿಸಲಿದ್ದಾರೆ. ಈ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒಂದಷ್ಟು ಪ್ರಶ್ನೆಗಳಿವೆ.

  • ಮಹದಾಯಿ ವಿಚಾರದಲ್ಲಿ ಎಂದಿಗೂ ಪ್ರಧಾನಿಯವರನ್ನೇ ಟೀಕಿಸುವ ಸಿದ್ದರಾಮಯ್ಯನರೇ, ರಾಹುಲ್ ಗಾಂಧಿ ಭೇಟಿ ವೇಳೆ ಮಹದಾಯಿ ವಿಚಾರ ಪ್ರಸ್ತಾಪಿಸುವಂತೆ ಮಾಡುವಿರಾ?
  • ಹಾಗೊಂದು ವೇಳೆ ರಾಹುಲ್ ಗಾಂಧಿಯವರು ಮಹದಾಯಿ ವಿಚಾರದ ಕುರಿತು ರ್ಯಾಲಿ, ಸಮಾರಂಭಗಳಲ್ಲಿ ಮಾತನಾಡದಿದ್ದರೆ, ರಾಹುಲ್ ಗಾಂಧಿ ರೈತ ವಿರೋಧಿ ಎಂದು ಷರಾ ಬರೆಯುವಿರಾ?
  • ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದಾಗ, ಅವರನ್ನು ಸ್ವಾಗತಿಸುವ ಬದಲು ಖಾಸಗಿ ಕಾರ್ಯಕ್ರಮದ ನೆಪವೊಡಿ ತಪ್ಪಿಸಿಕೊಂಡಿರಲ್ಲ, ರಾಹುಲ್ ಬಂದಾಗಲೂ ಹಾಗೆಯೇ ಮಾಡುತ್ತೀರಾ?
  • ಮಹದಾಯಿ ವಿಚಾರದಲ್ಲಿ ನಾವು ರೈತರ ಪರ ಎನ್ನುವ ಮುಖ್ಯಮಂತ್ರಿಯವರು ಗೋವಾ ಕಾಂಗ್ರೆಸ್ ಒಪ್ಪಿಸುವ ಕುರಿತು ರಾಹುಲ್ ಗಾಂಧಿ ಜತೆ ಮಾತನಾಡುವಿರಾ?
  • ಅಥವಾ ಗೋವಾ ಕಾಂಗ್ರೆಸ್ಸಿಗೂ ಕರ್ನಾಟಕ ಕಾಂಗ್ರೆಸ್ಸಿಗೂ ಸಂಬಂಧ ಇಲ್ಲ ಎಂದು ಜಾರಿಕೊಂಡತೆ, ರಾಷ್ಟ್ರೀಯ ಕಾಂಗ್ರೆಸ್ಸಿಗೂ , ನಮಗೂ ಸಂಬಂಧವಿಲ್ಲ ಎಂದು ಹೇಳುವಿರಾ?
  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬಂದಾಗ, ರಾಜ್ಯದ ಲೆಕ್ಕ ಕೇಳಲು, ನಮ್ಮ ವಿರುದ್ಧ ಮಾತನಾಡಲು ಅವರ್ಯಾರು ಎಂಬಂತೆ ಮಾತನಾಡಿದ್ದರು ಸಿಎಂ ಸಾಹೇಬ್ರು. ಈಗ ಕಾಂಗ್ರೆಸ್ ಅಧ್ಯಕ್ಷ ಬಂದಾಗ ಮೋದಿ ಅವರನ್ನು ತೆಗಳದೆ, ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನಷ್ಟೇ ಚರ್ಚೆ ಮಾಡುತ್ತೀರಾ?
  • ಜನವರಿ 27ರಂದು ನಿಗದಿಯಾಗಿದ್ದ ರಾಜ್ಯ ಬಂದ್ 25ಕ್ಕೆ ಮಾಡಿ ಎಂದು ಹೇಳಿದಂತೆ, ಒಂದು ವೇಳೆ ಕನ್ನಡ ಪರ ಸಂಘಟನೆಗಳು ಫೆ.10ರಂದೇ ಕರ್ನಾಟಕ ಬಂದ್ ಮಾಡುವುದಾಗಿ ತಿಳಿಸಿದರೆ ನಿಮ್ಮ ಅಭಿಪ್ರಾಯ ಏನು? ಒಪ್ಪಿಗೆ ಸೂಚಿಸುವಿರಾ?
  • ಇದುವರೆಗೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮಹದಾಯಿ ವಿವಾದದ ಕುರಿತು ಮಾತನಾಡಿಲ್ಲ. ಈ ಪ್ರವಾಸದ ವೇಳೆ ಮಾತನಾಡಲೇಬೇಕು, ಸಮಸ್ಯೆ ಬಗೆಹರಿಸಲೇಬೇಕು ಎಂದು ರಾಹುಲ್ ಗಾಂಧಿಯವರನ್ನು ಒತ್ತಾಯಿಸುವಿರಾ? ಸೋನಿಯಾ ಗಾಂಧಿ ಅವರಿಗೂ ಇದೇ ಮಾತು ಹೇಳುವಿರಾ?

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಕಳೆದ ನಾಲ್ಕೂವರೆ ವರ್ಷದಲ್ಲಿ ನೀವು ಎಷ್ಟರಮಟ್ಟಿಗೆ ರೈತರ ಪರ ಎಂಬುದು 3500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಅರಿತಾಗಲೇ ಸ್ಪಷ್ಟವಾಗುತ್ತದೆ. ಆದರೂ ರೈತರ ಪರ ಎನ್ನುವ ನೀವು ರಾಹುಲ್ ಗಾಂಧಿ ಬೇಟಿ ವೇಳೆ ಈ ವಿಚಾರ ಎತ್ತುವಿರಾ ಎಂಬುದನ್ನು ಸ್ಪಷ್ಟಪಡಿಸಿ. ಆಮೇಲೆ ರಾಗಾ ರಾಜ್ಯದಿಂದ ಹೊರಟು ಹೋದ ಮೇಲೆ ಅದೇ “ರಾಗ” ಹಾಡಬೇಡಿ ಮತ್ತೆ. ಉತ್ತರಿಸಿ.

 

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
ವಿಶಾಲ್ ಗೌಡ ಕುಶಾಲನಗರ July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
ವಿಶಾಲ್ ಗೌಡ ಕುಶಾಲನಗರ July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search