• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತರೇ ಜಾಸ್ತಿ ಇರುವ ಉತ್ತರ ಪ್ರದೇಶದ ಗೌತಮ್ ನಗರ ಆಗುತ್ತಿದೆ ಇಸ್ಲಾಂ ನಗರ, ಎಲ್ಲಿದ್ದಾರೆ ದಲಿತ ಹೋರಾಟಗಾರರು?

TNN Correspondent Posted On February 7, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶ ಸೇರಿ ಇತ್ತೀಚೆಗೆ ದಲಿತ ಮಹಿಳೆಯರ ಮೇಲೆ ಅತ್ಯಾಚಾರ, ಬಲವಂತದ ಮತಾಂತರ ಸೇರಿ ಹಲವು ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶದ ಗೌತಮ್ ನಗರ ಎಂಬುದನ್ನು ಇಸ್ಲಾಂ ನಗರ ಎಂದು ಅಂಗಡಿಗಳ ಬೋರ್ಡ್, ಮನೆಗಳ ವಿಳಾಸದಲ್ಲಿ ಮುಸ್ಲಿಮರು ಬಳಸುತ್ತಿದ್ದು, ಜನರನ್ನು ಬೆಚ್ಚಿಬೀಳಿಸುತ್ತಿದೆ.

ಹೌದು, ಮೊದಲಿನಿಂದಲೂ ಗೌತಮ್ ನಗರ ಎಂದೇ ಕರೆಯುತ್ತಿದ್ದು, 12 ಲಕ್ಷ ಜನರಿರುವ ನಗರದಲ್ಲಿ ಶೇ.42ರಷ್ಟು ಜನ ಮುಸ್ಲಿಮರಿದ್ದಾರೆ. ಶೇ.21ರಂದು ಜನ ದಲಿತರಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಮುಸ್ಲಿಮರು ತಮ್ಮ ಅಂಗಡಿಗಳ ವಿಳಾಸದಲ್ಲಿ ಗೌತಮ್ ನಗರವನ್ನು ಇಸ್ಲಾಂ ನಗರ ಎಂದೇ ಮುದ್ರಿಸುತ್ತಿದ್ದಾರೆ, ಬೋರ್ಡ್ ಮೇಲೆ ಬರೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಜನರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದು, ಸುಮಾರು 1500ಕ್ಕೂ ಹೆಚ್ಚು ದಲಿತರಿಗೆ ಮತಾಂತರಗೊಳ್ಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಗೌತಮ್ ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮುಸ್ಲಿಮರ ಅಂಗಡಿಗಳಿವೆ. ಮುಸ್ಲಿಮರೇ ಜಾಸ್ತಿ ಇದ್ದಾರೆ. ಹಾಗಾಗಿ ಅವರು ನಗರವನ್ನು ಇಸ್ಲಾಂ ನಗರ ಎಂದು ಮರುನಾಮಕರಣ ಮಾಡಲು ಬಯಸುತ್ತಿದ್ದು, 20-25 ಅಂಗಡಿಗಳ ವಿಳಾಸದಲ್ಲಿ ಇಸ್ಲಾಂ ನಗರ ಎಂದೇ ಬರೆಸಲಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ನಗರದ ಹೆಸರು ಬದಲಾವಣೆ ಹಾಗೂ ಬಲವಂತದ ಮತದಾನಕ್ಕೆ ಯತ್ನಿಸುತ್ತಿರುವ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಒಟ್ಟಿನಲ್ಲಿ ಬಡ ದಲಿತರು, ದಲಿತ ಮಹಿಳೆಯರು ಇಸ್ಲಾಮಿಕ್ ಮೂಲಭೂತವಾದಕ್ಕೆ ಕುತ್ತಾಗುವ ಎಲ್ಲ ಲಕ್ಷಣಗಳಿದ್ದು, ಇಷ್ಟಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ತುಟಿ ಬಿಚ್ಚದೇ ಇರುವುದು ದುರಂತ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search