• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡೋಂಗಿ ಸಮಾಜವಾದಿ ಸಿದ್ದರಾಮಯ್ಯ ಜಿಲ್ಲೆಯಲ್ಲೇ ದಲಿತರಿಗೆ ಎಂಥಾ ದುರ್ಗತಿ..!

TNN Correspondent Posted On February 7, 2018


  • Share On Facebook
  • Tweet It

ಮೈಸೂರು: ನಾನು ಸಮಾಜವಾದಿ, ಅಹಿಂದ, ದಲಿತರ ಏಳಿಗೆಗೆ ಸದಾ ಶ್ರಮಿಸುವವನು ಎಂದು ಸದಾ ತಮ್ಮ ನ್ನು ತಾವೇ ಹೊಗಳಿ ಅಟ್ಟಕೇರುವ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೇ ದಲಿತರ ಸ್ಥಿತಿ ಯಾವ ಮಟ್ಟಕ್ಕೆ ಇಳಿದಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮೈಸೂರಿನ ನಂಜನಗೂಡು ತಾಲೂಕಿನ ತರದೆಲೆ ಗ್ರಾಮದಲ್ಲಿ ದಲಿತರಿಗೆ ಸವರ್ಣಿಯರು ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ.

ಗ್ರಾಮದಲ್ಲಿರುವ ಸವರ್ಣಿಯರ ಅಂಗಡಿಯಲ್ಲಿ ದಲಿತರು ಸಾಮಾಗ್ರಿ ಖರೀದಿಸುವಂತಿಲ್ಲ, ಅಲ್ಲದೇ ದಲಿತರಿಗೆ ಯಾರು ಕೆಲಸ ನೀಡಬಾರದು ಒಂದು ವೇಳೆ ನೀಡಿದರೆ ಅಂತವರಿಗೆ ಒಂದು ಸಾವಿರ ದಂಡ ವಿಧಿಸಲಾಗುತ್ತಿದೆ ಎಂದು ದಲಿತರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಮೂರು ವರ್ಷದ ಹಿಂದೆ ದಲಿತರು ಮತ್ತು ಸವರ್ಣಿಯರ ಮಧ್ಯೆ ಊರ ಹಬ್ಬದ ವೇಳೆ ವಾಗ್ವಾದ ನಡೆದಿತ್ತು. ಆದ್ದರಿಂದ ಇದೀಗ ಸವರ್ಣಿಯರು ದಲಿತರಿಗೆ ಬಹಿಷ್ಕಾರ ಹಾಕಿ ಊರ ಹಬ್ಬ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯಾತೀತವಾದಿ, ಸಮಾಜವಾದಿ ಎಂದು ಬೊಗಳೇ ಬಿಡುವುದನ್ನು ಬಿಟ್ಟು ಸರ್ಕಾರದ ಮೂಲಕ ಸಮಾನತೆ ಸಾಧಿಸುವ ಕೆಲಸ ಮಾಡಬೇಕಿದೆ. ಗುಜರಾತ್ ನಲ್ಲಿ ದಲಿತರ ಮೇಲೆ ಹಲ್ಲೆಯಾದಾಗ ಬಾಯಿ ಬಡೆದುಕೊಳ್ಳುವ ಸಿದ್ದರಾಮಯ್ಯ ತಮ್ಮದೇ ಜಿಲ್ಲೆಯಲ್ಲಿ ದಲಿತರಿಗೆ ಬಹಿಷ್ಕಾರ ಹಾಕುವಂತ ಪರಿಸ್ಥಿತಿ ಇದ್ದರೂ ಕೇಳದಿರುವುದು ದುರಂಥವಲ್ಲವೇ..? ದಲಿತರ ಮೇಲಿನ ಹಲ್ಲೆಗಳನ್ನು, ಅಸ್ಪೃಷ್ಯತೆಯಂತ ಹೀನ ಪದ್ಧತಿಯನ್ನು ತಡೆಯುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂಬುದು ಪದೇ ಪದೆ ಸಾಬೀತಾಗುತ್ತಿದೆ.

ದಲಿತ ನಾಯಕರನ್ನು ತುಳಿದ ಸಿದ್ದರಾಮಯ್ಯ

ಜಿ.ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ ತಮ್ಮ ಆಪ್ತ ಶ್ರೀನಿವಾಸ್ ಅವರನ್ನು ತುಳಿದು ತಾವು ಸಿಎಂ ಗಾಧಿ ಅಲಂಕರಿಸಿಕೊಂಡವರು ಸಿಎಂ ಸಿದ್ದರಾಮಯ್ಯ ಎಂಬ ಆರೋಪ ಸಿದ್ದರಾಮಯ್ಯ ಮೇಲೆ ಇದೆ. ಸದಾಶಿವ ಆಯೋಗ ಜಾರಿ ಕುರಿತು ಎಡಬಿಡಂಗಿ ನೀತಿಯನ್ನು ಅನುಸರಿಸುತ್ತ ದಲಿತರನ್ನು ಗೊಂದಲಕ್ಕೀಡು ಮಾಡಿದ್ದು ಸಿದ್ದರಾಮಯ್ಯ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search