• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೋಂಗಿ ಸಮಾಜವಾದಿ ಸಿದ್ದರಾಮಯ್ಯ ಜಿಲ್ಲೆಯಲ್ಲೇ ದಲಿತರಿಗೆ ಎಂಥಾ ದುರ್ಗತಿ..!

TNN Correspondent Posted On February 7, 2018
0


0
Shares
  • Share On Facebook
  • Tweet It

ಮೈಸೂರು: ನಾನು ಸಮಾಜವಾದಿ, ಅಹಿಂದ, ದಲಿತರ ಏಳಿಗೆಗೆ ಸದಾ ಶ್ರಮಿಸುವವನು ಎಂದು ಸದಾ ತಮ್ಮ ನ್ನು ತಾವೇ ಹೊಗಳಿ ಅಟ್ಟಕೇರುವ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೇ ದಲಿತರ ಸ್ಥಿತಿ ಯಾವ ಮಟ್ಟಕ್ಕೆ ಇಳಿದಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮೈಸೂರಿನ ನಂಜನಗೂಡು ತಾಲೂಕಿನ ತರದೆಲೆ ಗ್ರಾಮದಲ್ಲಿ ದಲಿತರಿಗೆ ಸವರ್ಣಿಯರು ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ.

ಗ್ರಾಮದಲ್ಲಿರುವ ಸವರ್ಣಿಯರ ಅಂಗಡಿಯಲ್ಲಿ ದಲಿತರು ಸಾಮಾಗ್ರಿ ಖರೀದಿಸುವಂತಿಲ್ಲ, ಅಲ್ಲದೇ ದಲಿತರಿಗೆ ಯಾರು ಕೆಲಸ ನೀಡಬಾರದು ಒಂದು ವೇಳೆ ನೀಡಿದರೆ ಅಂತವರಿಗೆ ಒಂದು ಸಾವಿರ ದಂಡ ವಿಧಿಸಲಾಗುತ್ತಿದೆ ಎಂದು ದಲಿತರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಮೂರು ವರ್ಷದ ಹಿಂದೆ ದಲಿತರು ಮತ್ತು ಸವರ್ಣಿಯರ ಮಧ್ಯೆ ಊರ ಹಬ್ಬದ ವೇಳೆ ವಾಗ್ವಾದ ನಡೆದಿತ್ತು. ಆದ್ದರಿಂದ ಇದೀಗ ಸವರ್ಣಿಯರು ದಲಿತರಿಗೆ ಬಹಿಷ್ಕಾರ ಹಾಕಿ ಊರ ಹಬ್ಬ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯಾತೀತವಾದಿ, ಸಮಾಜವಾದಿ ಎಂದು ಬೊಗಳೇ ಬಿಡುವುದನ್ನು ಬಿಟ್ಟು ಸರ್ಕಾರದ ಮೂಲಕ ಸಮಾನತೆ ಸಾಧಿಸುವ ಕೆಲಸ ಮಾಡಬೇಕಿದೆ. ಗುಜರಾತ್ ನಲ್ಲಿ ದಲಿತರ ಮೇಲೆ ಹಲ್ಲೆಯಾದಾಗ ಬಾಯಿ ಬಡೆದುಕೊಳ್ಳುವ ಸಿದ್ದರಾಮಯ್ಯ ತಮ್ಮದೇ ಜಿಲ್ಲೆಯಲ್ಲಿ ದಲಿತರಿಗೆ ಬಹಿಷ್ಕಾರ ಹಾಕುವಂತ ಪರಿಸ್ಥಿತಿ ಇದ್ದರೂ ಕೇಳದಿರುವುದು ದುರಂಥವಲ್ಲವೇ..? ದಲಿತರ ಮೇಲಿನ ಹಲ್ಲೆಗಳನ್ನು, ಅಸ್ಪೃಷ್ಯತೆಯಂತ ಹೀನ ಪದ್ಧತಿಯನ್ನು ತಡೆಯುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂಬುದು ಪದೇ ಪದೆ ಸಾಬೀತಾಗುತ್ತಿದೆ.

ದಲಿತ ನಾಯಕರನ್ನು ತುಳಿದ ಸಿದ್ದರಾಮಯ್ಯ

ಜಿ.ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ ತಮ್ಮ ಆಪ್ತ ಶ್ರೀನಿವಾಸ್ ಅವರನ್ನು ತುಳಿದು ತಾವು ಸಿಎಂ ಗಾಧಿ ಅಲಂಕರಿಸಿಕೊಂಡವರು ಸಿಎಂ ಸಿದ್ದರಾಮಯ್ಯ ಎಂಬ ಆರೋಪ ಸಿದ್ದರಾಮಯ್ಯ ಮೇಲೆ ಇದೆ. ಸದಾಶಿವ ಆಯೋಗ ಜಾರಿ ಕುರಿತು ಎಡಬಿಡಂಗಿ ನೀತಿಯನ್ನು ಅನುಸರಿಸುತ್ತ ದಲಿತರನ್ನು ಗೊಂದಲಕ್ಕೀಡು ಮಾಡಿದ್ದು ಸಿದ್ದರಾಮಯ್ಯ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search