• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸುಷ್ಮಾ ಸ್ವರಾಜ್ ರಾಜತಾಂತ್ರಿಕ ನೈಪುಣ್ಯ, 22 ಭಾರತೀಯರ ರಕ್ಷಣೆ

TNN Correspondent Posted On February 7, 2018
0


0
Shares
  • Share On Facebook
  • Tweet It

ದೆಹಲಿ: ಬಲಿಷ್ಠ ಮತ್ತು ಸೌಹಾರ್ದಯುತ ವಿದೇಶಾಂಗ ನೀತಿಗಳ ಮೂಲಕ ವಿಶ್ವದ ಗಮನ ಸೆಳೆಯುತ್ತಿರುವ ಭಾರತಕ್ಕೆ ವಿಶ್ವ ಸಮುದಾಯದಲ್ಲಿ ನಿರಂತರ ಯಶಸ್ಸು ದೊರೆಯುತ್ತಿದೆ. ಭಾರತೀಯರು ಯಾವುದೇ ರಾಷ್ಟ್ರದಲ್ಲೂ ಸ್ವಾತಂತ್ರ್ಯವಾಗಿ ಜೀವಿಸಬಹುದು ಎಂಬ ಭಾವನೆಗೆ ಬಲ ಬರುತ್ತಿದೆ. ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜತಾಂತ್ರಿಕ ನೈಪುಣ್ಯಗಳನ್ನು ಮೆರೆಯುತ್ತಿದ್ದಾರೆ. ಇದೀಗ ಸುಷ್ಮಾ ಸ್ವರಾಜ್  ಆಫ್ರಿಕಾ ಬೆನಿನ್ ಕರಾವಳಿಯಿಂದ ಅಪಹರಣಗೊಂಡಿದ್ದ ಇಂಧನ ಹಡಗಿನಲ್ಲಿದ್ದ 22 ಭಾರತೀಯರನ್ನು ಯಶಸ್ವಿಯಾಗಿ ರಕ್ಷಣೆ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದಾರೆ.

ಫೆ.1 ರಂದು ಪಶ್ಚಿಮ ಆಫ್ರಿಕಾ ಕರಾವಳಿಯಿಂದ ಹಡಗು ನಾಪತ್ತೆಯಾಗಿತ್ತು.  ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ನನಗೆ ತುಂಬಾ ಸಂತೋಷವಾಗುತ್ತಿದೆ. 22 ಭಾರತೀಯ ಪ್ರಜೆಗಳಿದ್ದ ಹಡಗನ್ನು ಅಪಹರಣಕಾರರು ಬಿಡುಗಡೆ ಮಾಡಿದ್ದಾರೆ. ಸಹಾಯ ಮಾಡಿದ ನೈಜೇರಿಯಾ ಹಾಗೂ ಬಿನಿನ್ ಗೆ ಧನ್ಯವಾದಗಳನ್ನು ಹೇಳಿದ್ದಾರೆ.

ನೈಜೀರಿಯಾ ವಿದೇಶಾಂಗ ಇಲಾಖೆಯೊಂದಿಗೆ ಸಂಪರ್ಕ ಮಾಡಿದ್ದು, ಅವರು ಸಹಕಾರ ನೀಡುವುದಾಗಿ ತಿಳಿಸಿದ್ದರು ಎಂದು ಇತ್ತೀಚೆಗೆ ಸುಷ್ಮಾ ಸ್ವರಾಜ್ ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದರು,

13,500 ಟನ್ ಗ್ಯಾಸೋಲಿನ್ ಹೊಂದಿದ್ದ ಹಡಗನ್ನು ಹೈಜಾಕ್ ಮಾಡಲಾಗಿತ್ತು. ಇದಕ್ಕೂ ಮುನ್ನ ಹಡಗಿನ ಎಲ್ಲಾ ಸಂವಹನ ವ್ಯವಸ್ಥೆಗಳನ್ನು ಕಡಿತಗೊಳಿಸಿದ್ದರು. ಹಡಗನ್ನು ಗಲ್ಫ್ ನ ಬೆನಿನ್ ಗಿನಿಯ ಪ್ರದೇಶದಲ್ಲಿ ನಿಲ್ಲಿಸಿದ್ದರು ಎಂದು ತಿಳಿದುಬಂದಿದೆ.

ಮುಂಬೈ ಮೂಲದ ಆಂಗ್ಲೋ ಇಸ್ಟ್ರನ್ ಕಂಪನಿ ಮಾಲೀಕತ್ವದ ಇಂಧನ ಹಡಗು ಕಾಣೆಯಾಗಿರುವ ಶಂಕೆ ಇತ್ತು. ಆದರೆ ನಂತರ ಅಪಹರಣವಾಗರುವುದು ದೃಢಪಟ್ಟಿತ್ತು. ಹಡಗು ಶೋಧಕ್ಕೆ ಸಹಾಯ ಮಾಡುವಂತೆ ಹಡಗು ಮಾಲೀಕರು ಮುಂಬೈನ ನೌಕ ಮಹಾನಿರ್ದೇಶನಾಲಯಕ್ಕೆ ಮನವಿ ಮಾಡಿದ್ದರು.  ಭಾರತೀಯ ವಿದೇಶಾಂಗ ಇಲಾಖೆ ನೈಜೀರಿಯಾ ದೇಶದ ಸಹಾಯ ಪಡೆದು ಪತ್ತೆ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜತಾಂತ್ರಿಕ ನೈಪುಣ್ಯತೆ ಮೆರೆದಿದ್ದು, ನೇರವಾಗಿ ನೈಜೇರಿಯಾದ ಅಧಿಕಾರಿಗಳೊಂದಿಗೆ ಮಾತನಾಡಿ, ಹಡಗು ಬಿಡುಗಡೆಯಲ್ಲಿ ಯಶಸ್ವಿಯಾಗಿ 22 ಭಾರತೀಯರ ಜೀವ ಉಳಿಸಿದ್ದಾರೆ.

I am happy to inform that Merchant Ship Marine Express with 22 Indian nationals on board has been released.

— Sushma Swaraj (@SushmaSwaraj) February 6, 2018

We are delighted to report that the MT Marine Express, which was hijacked by pirates on Feb 1, is now back under the command of the captain & crew since ~04:00 SG time today. All crew members are reported to be safe & well & the cargo intact. We thank you all for your well wishes

— Anglo-Eastern (@angloeasterngrp) February 6, 2018

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search