• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ತುಷ್ಟೀಕರಣ ರಾಜಕೀಯ, ಧರ್ಮ ಒಡೆದ ಸಿದ್ದರಾಮಯ್ಯರಿಂದ ಮಠಗಳ ನಿಯಂತ್ರಣಕ್ಕೆ ಷಡ್ಯಂತ್ರ

TNN Correspondent Posted On February 7, 2018
0


0
Shares
  • Share On Facebook
  • Tweet It

ಬೆಂಗಳೂರು: ಹಿಂದೂ ಧರ್ಮದಲ್ಲೇ ಇರುವ ವೀರಶೈವ ಸಮುದಾಯವನ್ನು ಒಡೆದು ಆಳುವ ಮೂಲಕ ತಮ್ಮ ಹೇಸಿಕೆ ರಾಜಕೀಯ ಮಾಡಿದ ಸಿದ್ದರಾಮಯ್ಯ ಇದೀಗ ರಾಜ್ಯದಲ್ಲಿ ಶೈಕ್ಷಣಿಕ, ಸಾಮಾಜಿಕ ಸೇವೆಗಳನ್ನು ಮಾಡುತ್ತಿರುವ ಮಠಗಳ ಮೇಲೆ ಕಣ್ಣಿಟ್ಟಿದ್ದು, ಮಠಗಳ ನಿಯಂತ್ರಣಕ್ಕೆ ಷಡ್ಯಂತ್ರ ರೂಪಿಸಿದ್ದಾರೆ.

ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಹಿಂದೂ ಸಮುದಾಯದ ಮಠ, ಮಾನ್ಯಗಳನ್ನು ಸೇರಿಸಿಕೊಳ್ಳಬೇಕು ಎಂಬ ಪ್ರಸ್ತಾವನೆಯನ್ನು      ಸಲ್ಲಿಸಿದ್ದು, ಈ ಕುರಿತು ಮಠಾಧಿಪತಿಗಳು, ಧರ್ಮಗುರುಗಳು, ಸಾರ್ವನಿಕರು ಸಲಹೆ ಸೂಚನೆ ನೀಡಬೇಕು ಎಂದು ಹೇಳುವ ಮೂಲಕ ಹಿಂದೂಗಳ ಶ್ರದ್ಧಾಕೇಂದ್ರಗಳನ್ನು ತಮ್ಮ ಮೂಗಿನ ನೇರಕ್ಕೆ ಇಟ್ಟುಕೊಳ್ಳುವ ಹುನ್ನಾರವನ್ನು ರಾಜ್ಯ ಸರ್ಕಾರ ಹೂಡಿರುವುದು ಸ್ಪಷ್ಟವಾಗಿದೆ.

ಧಾರ್ಮಿಕ ದತ್ತಿ ಕಾಯ್ದೆ ವ್ಯಾಪ್ತಿಗೆ ಮಠಗಳು, ಮಠಗಳಿಗೆ ಸೇರಿದ ದೇವಸ್ಥಾನಗಳು, ಧಾರ್ಮಿಕ ಸಂಸ್ಥೆಗಳನ್ನು ಒಳಪಡಿಸಬೇಕೇ ಬೇಡವೇ ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ಮುಸ್ಲಿಂ, ಕ್ರಿಶ್ಚಿಯನ್ ಬಿಟ್ಟು ಉಳಿದೆಲ್ಲ ಧರ್ಮಗಳ ಪ್ರಸ್ತಾಪ

ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ನೂತನ ಕಾಯಿದೆ ಕರಡು ಸಮಿತಿ ಕೇಂದ್ರ ಸ್ಥಾನಿಕ ಸಹಾಯಕ ಜಯಪ್ರಕಾಶ್ ಹೆಸರಿನಲ್ಲಿ ಹೊರಡಿಸಿರುವ ಸಾರ್ವಜನಿಕ ಪ್ರಕಟಣೆಯಲ್ಲಿ ಹಿಂದೂ ಮಠಗಳು, ಮಠಗಳಿಗೆ ಸೇರಿದ ದೇವಸ್ಥಾನಗಳು ಮತ್ತು ಜೈನ್, ಬೌದ್ಧ, ಸಿಖ್ ಜನಾಂಗಗಳಿಗೆ ಒಳಪಟ್ಟ ಧಾರ್ಮಿಕ ಸಂಸ್ಥೆಗಳನ್ನು ಒಳಪಡಿಸಬೇಕೆ ಇಲ್ಲವೇ ಎಂದು ಪ್ರಶ್ನೆ ಕೇಳಲಾಗಿದೆ. ಆದರೆ ಇಡೀ ಪ್ರಕಟಣೆಯಲ್ಲಿ ಒಂದು ಕಡೆಯೂ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳನ್ನು ಉಲ್ಲೇಖಿಸದೇ ತಮ್ಮ, ತುಷ್ಠೀಕರಣ ರಾಜಕೀಯ ಮುಂದುವರಿಸಿದ್ದಾರೆ.

ಸದಾ ಹಿಂದೂ ವಿರೋಧಿ ನೀತಿ

ನಾನು ಹಿಂದೂ ಎನ್ನುತ್ತಲೇ ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಾ, ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವುದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ. ರಾಜ್ಯದಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆಯಾದರೂ ಸ್ಪಂದಿಸದೇ, ಇದೀಗ ಹಿಂದೂಗಳ ಶ್ರದ್ಧಾಕೇಂದ್ರಗಳನ್ನು ನಿಯಂತ್ರಿಸುವ ಹುನ್ನಾರ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search