• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಹಿಂದೂಗಳ ಮತಕ್ಕಾಗಿ ರಾಹುಲ್ ಗಾಂಧಿ ಹೂಡಿದ ತಂತ್ರ ತಿಳಿಯರಿ, ಡೋಂಗಿ ಹಿಂದುತ್ವವಾದಕ್ಕೆ ಮರುಳಾಗಿದಿರಿ

TNN Correspondent Posted On February 8, 2018
0


0
Shares
  • Share On Facebook
  • Tweet It

ಬೆಂಗಳೂರು: ಈ ಕಾಂಗ್ರೆಸ್ಸಿನವರೇ ಹಾಗೆ. ಯಾವುದೇ ರಾಜದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಲವು ತಂತ್ರ ಹೆಣೆಯಲು ಶುರುವಿಟ್ಟುಕೊಳ್ಳುತ್ತದೆ. ಇದರಲ್ಲಿ ಗುಜರಾತ್ ಚುನಾವಣೆ ವೇಳೆ ರಾಹುಲ್ ಗಾಂಧಿ ಹಿಂದೂಗಳ ಮತ ಸೆಳೆಯಲು ಪದೇ ಪದೇ ದೇವಾಲಯಗಳಿಗೆ ಭೇಟಿ ನೀಡಿ ಹಿಂದೂಗಳ ಮರುಳು ಮಾಡಲು ಮುಂದಾದರು. ಆದರೇನಾಯಿತು? ಕೊನೆಗೂ ಜನ ಬಿಜೆಪಿಯನ್ನೇ ಗೆಲ್ಲಿಸಿದರು.

ಇಂತಹ ಡೋಂಗಿ ಹಿಂದುತ್ವ ಪ್ರತಿಪಾದಿಸುವ ರಾಹುಲ್ ಗಾಂಧಿ, ಗುಜರಾತಿನ ವರಸೆಯನ್ನೇ ಕರ್ನಾಟಕದಲ್ಲಿ ಆರಂಭಿಸಲು ಹೊರಟಿದ್ದಾರ. ಫೆ.10ರಿಂದ ಕರ್ನಾಟಕದಲ್ಲಿ ಅವರು ಚುನಾವಣಾ ಪ್ರವಾಸ ಆರಂಭಿಸಿದ್ದು, ಅದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಹಿಂದೂಗಳ ಮತ ಸೆಳೆಯಲು ತಂತ್ರ ಹೂಡಿದ್ದಾರೆ.

ಹೌದು, ಫೆ.10ರಿಂದ 13ರವರೆಗೆ ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಈ ಭಾಗದಲ್ಲಿ ಲಿಂಗಾಯತರು ಜಾಸ್ತಿ ಇದ್ದಾರೆ ಎಂಬುದು ಧಾರ್ಮಿಕ ಅಂಶವಾಗಿದ್ದು, ಸಾಫ್ಟ್ ಹಿಂದುತ್ವ ಪ್ರತಿಪಾದಿಸುವ ಹುನ್ನಾರ ನಡೆಸಿದ್ದಾರೆ. ಈ ಜಿಲ್ಲೆಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದು ರಾಹುಲ್ ಉದ್ದೇಶ.

ಇದರ ಭಾಗವಾಗಿ ರಾಹುಲ್ ಗಾಂಧಿ ಮೊದಲಿಗೆ ಕೊಪ್ಪಳ ಜಿಲ್ಲೆ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ ಇದೇ ಜಿಲ್ಲೆಯ, ಸುಮಾರು 800 ವರ್ಷಗಳ ಇತಿಹಾಸವಿರುವ ಹಾಗೂ ಅಪಾರ ಲಿಂಗಾಯತ ಅನುಯಾಯಿಗಳನ್ನು ಹೊಂದಿರುವ ಗವಿಸಿದ್ದೇಶ್ವರ ಮಠಕ್ಕೆ ರಾಹುಲ್ ಎರಡನೇ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇನ್ನು ಬರೀ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದರೆ ಮುಸ್ಲಿಮರು ಮುನಿಸಿಕೊಳ್ಳುತ್ತಾರಲ್ಲ? ಅದೇ ಕಾರಣಕ್ಕಾಗಿ ರಾಹುಲ್ ಗಾಂಧಿ ಮೂರನೇ ಧಾರ್ಮಿಕ ಸ್ಥಳದ ಭೇಟಿಗಾಗಿ ಕಲಬುರಗಿಯ ಪ್ರಸಿದ್ಧ ಖಾಜಾ ಬಂದೇನವಾಜ್ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ.

ನಾಲ್ಕನೇ ಹಾಗೂ ಕೊನೆಯ ಧಾರ್ಮಿಕ ಸ್ಥಳವಾಗಿ ಬೀದರ್ ಜಿಲ್ಲೆ ಬಸವ ಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದು, ಈ ಭಾಗದ ಬಸವಣ್ಣನ ಅನುಯಾಯಿಗಳನ್ನು ಸೆಳೆಯುವ ಹುನ್ನಾರ ರಾಹುಲ್ ಗಾಂಧಿಯವರದ್ದು.

ಒಟ್ಟಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಿಂದೂ ಪರ ಎಂದು ಡೋಂಗಿತನ ಮೆರೆಯಲು ಆರಂಭಿಸಿದ್ದಾರೆ. ಇದುವರೆಗೆ ರಾಜ್ಯಕ್ಕೆ ಬಂದರೂ ರ್ಯಾಲಿ ನಡೆಸಿಯೋ, ಕಾರ್ಯಕರ್ತರನ್ನು ಭೇಟಿಯಾಗಿಯೋ ಹೋಗುತ್ತಿದ್ದ ರಾಹುಲ್ ಗಾಂಧಿ ಈಗ ಹಿಂದೂಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಕುತಂತ್ರ ಮೆರೆಯಲು ಮುಂದಾಗಿದ್ದಾರೆ. ಆದರೆ ಹಿಂದೂಗಳು ಇಂತಹ ಡೋಂಗಿ ಹಿಂದುತ್ವಕ್ಕೆ ಮರುಳಾಗಬಾರದು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search