• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಹಿಂದೂಗಳ ಮತಕ್ಕಾಗಿ ರಾಹುಲ್ ಗಾಂಧಿ ಹೂಡಿದ ತಂತ್ರ ತಿಳಿಯರಿ, ಡೋಂಗಿ ಹಿಂದುತ್ವವಾದಕ್ಕೆ ಮರುಳಾಗಿದಿರಿ

TNN Correspondent Posted On February 8, 2018
0


0
Shares
  • Share On Facebook
  • Tweet It

ಬೆಂಗಳೂರು: ಈ ಕಾಂಗ್ರೆಸ್ಸಿನವರೇ ಹಾಗೆ. ಯಾವುದೇ ರಾಜದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಲವು ತಂತ್ರ ಹೆಣೆಯಲು ಶುರುವಿಟ್ಟುಕೊಳ್ಳುತ್ತದೆ. ಇದರಲ್ಲಿ ಗುಜರಾತ್ ಚುನಾವಣೆ ವೇಳೆ ರಾಹುಲ್ ಗಾಂಧಿ ಹಿಂದೂಗಳ ಮತ ಸೆಳೆಯಲು ಪದೇ ಪದೇ ದೇವಾಲಯಗಳಿಗೆ ಭೇಟಿ ನೀಡಿ ಹಿಂದೂಗಳ ಮರುಳು ಮಾಡಲು ಮುಂದಾದರು. ಆದರೇನಾಯಿತು? ಕೊನೆಗೂ ಜನ ಬಿಜೆಪಿಯನ್ನೇ ಗೆಲ್ಲಿಸಿದರು.

ಇಂತಹ ಡೋಂಗಿ ಹಿಂದುತ್ವ ಪ್ರತಿಪಾದಿಸುವ ರಾಹುಲ್ ಗಾಂಧಿ, ಗುಜರಾತಿನ ವರಸೆಯನ್ನೇ ಕರ್ನಾಟಕದಲ್ಲಿ ಆರಂಭಿಸಲು ಹೊರಟಿದ್ದಾರ. ಫೆ.10ರಿಂದ ಕರ್ನಾಟಕದಲ್ಲಿ ಅವರು ಚುನಾವಣಾ ಪ್ರವಾಸ ಆರಂಭಿಸಿದ್ದು, ಅದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಹಿಂದೂಗಳ ಮತ ಸೆಳೆಯಲು ತಂತ್ರ ಹೂಡಿದ್ದಾರೆ.

ಹೌದು, ಫೆ.10ರಿಂದ 13ರವರೆಗೆ ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಈ ಭಾಗದಲ್ಲಿ ಲಿಂಗಾಯತರು ಜಾಸ್ತಿ ಇದ್ದಾರೆ ಎಂಬುದು ಧಾರ್ಮಿಕ ಅಂಶವಾಗಿದ್ದು, ಸಾಫ್ಟ್ ಹಿಂದುತ್ವ ಪ್ರತಿಪಾದಿಸುವ ಹುನ್ನಾರ ನಡೆಸಿದ್ದಾರೆ. ಈ ಜಿಲ್ಲೆಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದು ರಾಹುಲ್ ಉದ್ದೇಶ.

ಇದರ ಭಾಗವಾಗಿ ರಾಹುಲ್ ಗಾಂಧಿ ಮೊದಲಿಗೆ ಕೊಪ್ಪಳ ಜಿಲ್ಲೆ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ ಇದೇ ಜಿಲ್ಲೆಯ, ಸುಮಾರು 800 ವರ್ಷಗಳ ಇತಿಹಾಸವಿರುವ ಹಾಗೂ ಅಪಾರ ಲಿಂಗಾಯತ ಅನುಯಾಯಿಗಳನ್ನು ಹೊಂದಿರುವ ಗವಿಸಿದ್ದೇಶ್ವರ ಮಠಕ್ಕೆ ರಾಹುಲ್ ಎರಡನೇ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇನ್ನು ಬರೀ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದರೆ ಮುಸ್ಲಿಮರು ಮುನಿಸಿಕೊಳ್ಳುತ್ತಾರಲ್ಲ? ಅದೇ ಕಾರಣಕ್ಕಾಗಿ ರಾಹುಲ್ ಗಾಂಧಿ ಮೂರನೇ ಧಾರ್ಮಿಕ ಸ್ಥಳದ ಭೇಟಿಗಾಗಿ ಕಲಬುರಗಿಯ ಪ್ರಸಿದ್ಧ ಖಾಜಾ ಬಂದೇನವಾಜ್ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ.

ನಾಲ್ಕನೇ ಹಾಗೂ ಕೊನೆಯ ಧಾರ್ಮಿಕ ಸ್ಥಳವಾಗಿ ಬೀದರ್ ಜಿಲ್ಲೆ ಬಸವ ಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದು, ಈ ಭಾಗದ ಬಸವಣ್ಣನ ಅನುಯಾಯಿಗಳನ್ನು ಸೆಳೆಯುವ ಹುನ್ನಾರ ರಾಹುಲ್ ಗಾಂಧಿಯವರದ್ದು.

ಒಟ್ಟಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಿಂದೂ ಪರ ಎಂದು ಡೋಂಗಿತನ ಮೆರೆಯಲು ಆರಂಭಿಸಿದ್ದಾರೆ. ಇದುವರೆಗೆ ರಾಜ್ಯಕ್ಕೆ ಬಂದರೂ ರ್ಯಾಲಿ ನಡೆಸಿಯೋ, ಕಾರ್ಯಕರ್ತರನ್ನು ಭೇಟಿಯಾಗಿಯೋ ಹೋಗುತ್ತಿದ್ದ ರಾಹುಲ್ ಗಾಂಧಿ ಈಗ ಹಿಂದೂಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಕುತಂತ್ರ ಮೆರೆಯಲು ಮುಂದಾಗಿದ್ದಾರೆ. ಆದರೆ ಹಿಂದೂಗಳು ಇಂತಹ ಡೋಂಗಿ ಹಿಂದುತ್ವಕ್ಕೆ ಮರುಳಾಗಬಾರದು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search