• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕರ್ನಾಟಕದ ಹಿಂದೂಗಳ ಮತಕ್ಕಾಗಿ ರಾಹುಲ್ ಗಾಂಧಿ ಹೂಡಿದ ತಂತ್ರ ತಿಳಿಯರಿ, ಡೋಂಗಿ ಹಿಂದುತ್ವವಾದಕ್ಕೆ ಮರುಳಾಗಿದಿರಿ

TNN Correspondent Posted On February 8, 2018


  • Share On Facebook
  • Tweet It

ಬೆಂಗಳೂರು: ಈ ಕಾಂಗ್ರೆಸ್ಸಿನವರೇ ಹಾಗೆ. ಯಾವುದೇ ರಾಜದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಲವು ತಂತ್ರ ಹೆಣೆಯಲು ಶುರುವಿಟ್ಟುಕೊಳ್ಳುತ್ತದೆ. ಇದರಲ್ಲಿ ಗುಜರಾತ್ ಚುನಾವಣೆ ವೇಳೆ ರಾಹುಲ್ ಗಾಂಧಿ ಹಿಂದೂಗಳ ಮತ ಸೆಳೆಯಲು ಪದೇ ಪದೇ ದೇವಾಲಯಗಳಿಗೆ ಭೇಟಿ ನೀಡಿ ಹಿಂದೂಗಳ ಮರುಳು ಮಾಡಲು ಮುಂದಾದರು. ಆದರೇನಾಯಿತು? ಕೊನೆಗೂ ಜನ ಬಿಜೆಪಿಯನ್ನೇ ಗೆಲ್ಲಿಸಿದರು.

ಇಂತಹ ಡೋಂಗಿ ಹಿಂದುತ್ವ ಪ್ರತಿಪಾದಿಸುವ ರಾಹುಲ್ ಗಾಂಧಿ, ಗುಜರಾತಿನ ವರಸೆಯನ್ನೇ ಕರ್ನಾಟಕದಲ್ಲಿ ಆರಂಭಿಸಲು ಹೊರಟಿದ್ದಾರ. ಫೆ.10ರಿಂದ ಕರ್ನಾಟಕದಲ್ಲಿ ಅವರು ಚುನಾವಣಾ ಪ್ರವಾಸ ಆರಂಭಿಸಿದ್ದು, ಅದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಹಿಂದೂಗಳ ಮತ ಸೆಳೆಯಲು ತಂತ್ರ ಹೂಡಿದ್ದಾರೆ.

ಹೌದು, ಫೆ.10ರಿಂದ 13ರವರೆಗೆ ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಈ ಭಾಗದಲ್ಲಿ ಲಿಂಗಾಯತರು ಜಾಸ್ತಿ ಇದ್ದಾರೆ ಎಂಬುದು ಧಾರ್ಮಿಕ ಅಂಶವಾಗಿದ್ದು, ಸಾಫ್ಟ್ ಹಿಂದುತ್ವ ಪ್ರತಿಪಾದಿಸುವ ಹುನ್ನಾರ ನಡೆಸಿದ್ದಾರೆ. ಈ ಜಿಲ್ಲೆಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದು ರಾಹುಲ್ ಉದ್ದೇಶ.

ಇದರ ಭಾಗವಾಗಿ ರಾಹುಲ್ ಗಾಂಧಿ ಮೊದಲಿಗೆ ಕೊಪ್ಪಳ ಜಿಲ್ಲೆ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ ಇದೇ ಜಿಲ್ಲೆಯ, ಸುಮಾರು 800 ವರ್ಷಗಳ ಇತಿಹಾಸವಿರುವ ಹಾಗೂ ಅಪಾರ ಲಿಂಗಾಯತ ಅನುಯಾಯಿಗಳನ್ನು ಹೊಂದಿರುವ ಗವಿಸಿದ್ದೇಶ್ವರ ಮಠಕ್ಕೆ ರಾಹುಲ್ ಎರಡನೇ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇನ್ನು ಬರೀ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದರೆ ಮುಸ್ಲಿಮರು ಮುನಿಸಿಕೊಳ್ಳುತ್ತಾರಲ್ಲ? ಅದೇ ಕಾರಣಕ್ಕಾಗಿ ರಾಹುಲ್ ಗಾಂಧಿ ಮೂರನೇ ಧಾರ್ಮಿಕ ಸ್ಥಳದ ಭೇಟಿಗಾಗಿ ಕಲಬುರಗಿಯ ಪ್ರಸಿದ್ಧ ಖಾಜಾ ಬಂದೇನವಾಜ್ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ.

ನಾಲ್ಕನೇ ಹಾಗೂ ಕೊನೆಯ ಧಾರ್ಮಿಕ ಸ್ಥಳವಾಗಿ ಬೀದರ್ ಜಿಲ್ಲೆ ಬಸವ ಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದು, ಈ ಭಾಗದ ಬಸವಣ್ಣನ ಅನುಯಾಯಿಗಳನ್ನು ಸೆಳೆಯುವ ಹುನ್ನಾರ ರಾಹುಲ್ ಗಾಂಧಿಯವರದ್ದು.

ಒಟ್ಟಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಿಂದೂ ಪರ ಎಂದು ಡೋಂಗಿತನ ಮೆರೆಯಲು ಆರಂಭಿಸಿದ್ದಾರೆ. ಇದುವರೆಗೆ ರಾಜ್ಯಕ್ಕೆ ಬಂದರೂ ರ್ಯಾಲಿ ನಡೆಸಿಯೋ, ಕಾರ್ಯಕರ್ತರನ್ನು ಭೇಟಿಯಾಗಿಯೋ ಹೋಗುತ್ತಿದ್ದ ರಾಹುಲ್ ಗಾಂಧಿ ಈಗ ಹಿಂದೂಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಕುತಂತ್ರ ಮೆರೆಯಲು ಮುಂದಾಗಿದ್ದಾರೆ. ಆದರೆ ಹಿಂದೂಗಳು ಇಂತಹ ಡೋಂಗಿ ಹಿಂದುತ್ವಕ್ಕೆ ಮರುಳಾಗಬಾರದು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search