• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಭಾರತದಲ್ಲಿದ್ದೂ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮುಸ್ಲಿಮರಿಗೆ ಏನು ಮಾಡಬೇಕು ಅಸಾದುದ್ದೀನ್ ಓವೈಸಿ?

ನವೀನ್ ಶೆಟ್ಟಿ ಮಂಗಳೂರು Posted On February 8, 2018
0


0
Shares
  • Share On Facebook
  • Tweet It

ಎಐಎಂಐಎಮ್ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿಗೆ ಮುಸ್ಲಿಮರು ಎಳೆದು ತಂದು ರಾಜಕೀಯ ಮಾಡದಿದ್ದರೆ ತಿಂದ ಅನ್ನ ಕರಗುವುದಿಲ್ಲ ಅಂತ ಕಾಣುತ್ತದೆ. ಅದೇ ಕಾರಣಕ್ಕೇ ಏನೋ, ಯಾವಾಗಲೂ ಮುಸ್ಲಿಮರು ಎಳೆದು ತಂದೋ, ಹಿಂದೂಗಳ ವಿರುದ್ಧ ಮಾತನಾಡಿಯೋ ರಾಜಕೀಯ ಮಾಡುತ್ತಾರೆ.

ಈಗ ಓವೈಸಿ ಅಂಥಾದ್ದೇ ಹೇಳಿಕೆ ನೀಡಿದ್ದು, ಭಾರತೀಯ ಮುಸ್ಲಿಮರನ್ನು ಯಾರಾದರೂ “ಪಾಕಿಸ್ತಾನಿ” ಎಂದು ಕರೆದರೆ ಅವರನ್ನು ಮೂರು ವರ್ಷ ಜೈಲಿಗೆ ಕಳುಹಿಸಬೇಕು ಎಂದು ಓವೈಸಿ ಹೇಳಿದ್ದಾರೆ.

ಹಾಗಾದರೆ ಏನು ಅವರ ಮಾತಿನ ಅರ್ಥ? ಭಾರತೀಯ ಮುಸ್ಲಿಮರು ಪಾಕಿಸ್ತಾನಿಯರು ಎಂದವರು ಯಾರು? ಖಂಡಿತವಾಗಿಯೂ ಭಾರತೀಯ ಮುಸ್ಲಿಮರೆಲ್ಲರೂ ಪಾಕಿಸ್ತಾನಿಯರು ಎಂದು ಕರೆಯಿಸಿಕೊಳ್ಳಲು ಅರ್ಹರೇ? ಅಥವಾ ಅರ್ಹರಲ್ಲವೇ?

ಖಂಡಿತವಾಗಿಯೂ ಓವೈಸಿ ಹೇಳಿದುದರಲ್ಲಿ ಅರ್ಥವಿದೆ. ಭಾರತದಲ್ಲಿ ಇರುವ ಎಲ್ಲ ಮುಸ್ಲಿಮರೂ ಪಾಕಿಸ್ತಾನಿಯರು ಎಂದು ಕರೆಸಿಕೊಳ್ಳುವ ಅರ್ಹತೆ ಹೊಂದಿಲ್ಲ. ಮುಸ್ಲಿಮರಲ್ಲೂ ಅನೇಕ ಜನ ಭಾರತವನ್ನು ಪ್ರೀತಿಸುವ, ಗೌರವಿಸುವ ಗುಣ ಹೊಂದಿದ್ದಾರೆ. ನಮ್ಮ ಜಹೀರ್ ಖಾನ್ ಶಾಹೀದ್ ಅಫ್ರಿದಿ ವಿಕೆಟ್ ತೆಗೆದರೂ ಭಾರತದ ಪರ ಮಾತನಾಡುವವರಿದ್ದಾರೆ.

ಆದರೆ ಭಾರತದಲ್ಲಿದ್ದೂ ಪಾಕಿಸ್ತಾನವನ್ನು ಬೆಂಬಲಿಸುವ, ಕ್ರಿಕೆಟ್ ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಾಗ ಬೈಕ್ ರ್ಯಾಲಿ ಮಾಡಿ (ಕರ್ನಾಟಕದಲ್ಲಿ ವಿಜಯಪುರ ಇಂಥ ಘಟನೆಗಳಿಗೆ ಫೇಮಸ್ಸು) ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಮುಸ್ಲಿಮರನ್ನು ಏನೆಂದು ಕರೆಯಬೇಕು ಅಸಾದುದ್ದೀನ್ ಓವೈಸಿ? ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಪಾಕಿಸ್ತಾನಿ ಎನ್ನದೆ ಹಿಂದೂ ಸ್ತಾನಿ ಎನ್ನಬೇಕೆ?

ಭಾರತ ಕ್ರಿಕೆಟ್ಟಿನಲ್ಲಿ ಗೆದ್ದಾಗ ಬಿಡಿ, ಮುಸ್ಲಿಮರ ಅನೇಕ ರ್ಯಾಲಿಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿಬರುತ್ತವೆ. ಅಫ್ಜಲ್ ಗುರುವಿನ ಗಲ್ಲಿಗೇರಿಸಿದ ದಿನವನ್ನು ಕರಾಳ ದಿನವನ್ನಾಗಿ ಅಚರಿಸಿ, ಆತನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. 2016ರಲ್ಲು ಮೊರಾದಾಬಾದ್, 2017ರ ನವೆಂಬರ್ ನಲ್ಲಿ ಪಂಜಾಬ್, ಜಮ್ಮು ಕಾಶ್ಮೀರದಲ್ಲಿ ಗೋ ಬ್ಯಾಕ್ ಇಂಡಿಯಾ ಎನ್ನುವ ಮುಸ್ಲಿಂ ಪ್ರತ್ಯೇಕತಾವಾದಿಗಳು. ಹೇಳಿ ಓವೈಸಿ ಇವರನ್ನೆಲ್ಲ ಏನು ಮಾಡಬೇಕು?

ಭಾರತದೊಳಗಿದ್ದೂ, ಭಾರತದ ಅನ್ನ ತಿಂದು, ನೀರು ಕುಡಿದು, ಇಲ್ಲಿಯ ಸರ್ಕಾರದ ಸೌಲಭ್ಯಗಳನ್ನೇ ಪಡೆದುಕೊಂಡು ಪಾಕಿಸ್ತಾನಕ್ಕೆ ಜೈ, ಜಿಂದಾಬಾದ್ ಎನ್ನದೆ ಪಾಕಿಸ್ತಾನಿಯರು ಎನ್ನದೆ ಏನೆನ್ನಬೇಕು ಓವೈಸಿ?

ಅಷ್ಟಕ್ಕೂ, ಭಾರತೀಯ ಹಿಂದೂಗಳು ಸೇರಿ ಯಾವುದೇ ಮುಸ್ಲಿಮರು ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಮಾತ್ರ ಅವರನ್ನು ಪಾಕಿಸ್ತಾನಿಯರು, ಭಾರತದ ವಿರುದ್ಧ ಮಾತನಾಡುವವರಿಗೆ ಪಾಕಿಸ್ತಾನಿಯರು ಎಂದಿದ್ದೇ ಹೊರತು, ನಮ್ಮ ಹೆಮ್ಮೆಯ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ, ಜಹೀರ್ ಖಾನ್, ಇರ್ಫಾನ್ ಪಠಾಣ್, ಸಾನಿಯಾ ಮಿರ್ಜಾ, ಶೈಕ್ಷಣಿಕ ಕ್ರಾಂತಿಯ ಅಜೀಂ ಪ್ರೇಮ್ ಜೀ ಅವರಿಗೆ ಅಂದಿಲ್ಲ. ನೆನಪಿರಲಿ.

ಈ ವೀಡಿಯೋ ನೋಡಿ

videoplayback (1)

 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
ನವೀನ್ ಶೆಟ್ಟಿ ಮಂಗಳೂರು February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
ನವೀನ್ ಶೆಟ್ಟಿ ಮಂಗಳೂರು February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search