• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದರೆ ಮಾರುಕಟ್ಟೆ ವ್ಯಾಪಾರಿಗಳು ಬೀದಿಗೆ ಬರಬೇಕಾಯ್ತಲ್ಲ!

TNN Correspondent Posted On February 8, 2018


  • Share On Facebook
  • Tweet It

ಕೊಪ್ಪಳ: ಯಾವುದೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆ ಪಕ್ಷದ ಮುಖಂಡರು ರ್ಯಾಲಿ, ಸಮಾವೇಶ ಮಾಡುವುದು ಸಾಮಾನ್ಯ. ಅವರು ಪಕ್ಷದ ದುಡ್ಡಿನಲ್ಲಿ ಮೈದಾನದಲ್ಲೋ, ಬಯಲು ಪ್ರದೇಶದಲ್ಲೋ ಮಾಡಿ, ತಮ್ಮ ಬೆಂಬಲಿಗರನ್ನು ಕರೆಸಿ ಮಾತನಾಡುವುದು ಸಂಪ್ರದಾಯ.

ಆದರೆ ಕಾಂಗ್ರೆಸ್ ಮಾತ್ರ ತಮ್ಮ ಪಕ್ಷದ ಸಮಾವೇಶಕ್ಕಾಗಿ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿದ್ದ ವ್ಯಾಪಾರಿಗಳನ್ನು ಬೀದಿಗೆ ತಂದಿದೆ.

ಹೌದು, ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಸಾರ್ವಜನಿಕ ಮೈದಾನದಲ್ಲಿ ಸಮಾವೇಶ ಏರ್ಪಡಿಸಿದ್ದು, ಮೈದಾನದಲ್ಲಿದ್ದ ವ್ಯಾಪಾರಿಗಳ ಅಂಗಡಿಗಳನ್ನು ಸರ್ಕಾರ ಏಕಾಏಕಿ ತೆರವುಗೊಳಿಸಿದೆ. ಹೊಸ ಮಾರುಕಟ್ಟೆ ಸಿದ್ಧವಾಗಿದ್ದರೂ ಹರಾಜು ಪ್ರಕ್ರಿಯೆ ಮಾಡದ ಕಾರಣ ಈಗ ವ್ಯಾಪಾರಿಗಳು ಬೀದಿಯಲ್ಲಿ ನಿಂತು ವ್ಯಾಪಾರ ಮಾಡುವಂತಾಗಿದೆ.

ಒಂದು ವೇಳೆ ಸರ್ಕಾರಕ್ಕೆ ಸಾರ್ವಜನಿಕ ಮೈದಾನದಲ್ಲೇ ಸಮಾವೇಶ ಮಾಡಬೇಕು ಎಂದಿದ್ದರೆ ವ್ಯಾಪಾರಿಗಳಿಗೆ ಮೊದಲೇ ತಿಳಿಸಬೇಕಿತ್ತು. ಅವರಿಗೆ ಬೇರೆ ಮಾರುಕಟ್ಟೆ ಸಿದ್ಧಗೊಳಿಸಿ, ಹರಾಜು ಪ್ರಕ್ರಿಯೆ ನಡೆಸಿ ಅವರಿಗೆ ಪರ್ಯಾಯ ಸೌಲಭ್ಯ ಮಾಡಬೇಕಿತ್ತು. ಆದರೆ ಮಂಗಳವಾರ ತಿಳಿಸಿ, ಬುಧವಾರ ತೆರವುಗೊಳಿಸಿದರೆ ಆ ಬಡ ವ್ಯಾಪಾರಿಗಳು ಏನು ಮಾಡಬೇಕು? ಇದು ಅವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವಲ್ಲವೇ? ಸಿದ್ದರಾಮಯ್ಯನವರಿಗೆ ಇದು ತಿಳಿಯುವುದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಷ್ಟೇ ಅಲ್ಲ ಇತ್ತೀಚೆಗಷ್ಟೇ ನವೀಕರಣಗೊಂಡಿದ್ದ ಕೊಪ್ಪಳದ ಕುಕನೂರು ಹೊರವಲಯದ ಪರಿವೀಕ್ಷಣಾ ಮಂದಿರವನ್ನು ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಈಗ ಮತ್ತೆ ನವೀಕರಣಗೊಳಿಸಿದ್ದು, ಅದಕ್ಕಾಗಿ ಸರ್ಕಾರದಿಂದ ಲಕ್ಷಾಂತರ ರೂ ಖರ್ಚು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಸಿ ನವೀಕರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಹ ಸಾರ್ವಜನಿಕರಲ್ಲಿ ಮೂಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search