• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದರೆ ಮಾರುಕಟ್ಟೆ ವ್ಯಾಪಾರಿಗಳು ಬೀದಿಗೆ ಬರಬೇಕಾಯ್ತಲ್ಲ!

TNN Correspondent Posted On February 8, 2018
0


0
Shares
  • Share On Facebook
  • Tweet It

ಕೊಪ್ಪಳ: ಯಾವುದೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆ ಪಕ್ಷದ ಮುಖಂಡರು ರ್ಯಾಲಿ, ಸಮಾವೇಶ ಮಾಡುವುದು ಸಾಮಾನ್ಯ. ಅವರು ಪಕ್ಷದ ದುಡ್ಡಿನಲ್ಲಿ ಮೈದಾನದಲ್ಲೋ, ಬಯಲು ಪ್ರದೇಶದಲ್ಲೋ ಮಾಡಿ, ತಮ್ಮ ಬೆಂಬಲಿಗರನ್ನು ಕರೆಸಿ ಮಾತನಾಡುವುದು ಸಂಪ್ರದಾಯ.

ಆದರೆ ಕಾಂಗ್ರೆಸ್ ಮಾತ್ರ ತಮ್ಮ ಪಕ್ಷದ ಸಮಾವೇಶಕ್ಕಾಗಿ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿದ್ದ ವ್ಯಾಪಾರಿಗಳನ್ನು ಬೀದಿಗೆ ತಂದಿದೆ.

ಹೌದು, ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಸಾರ್ವಜನಿಕ ಮೈದಾನದಲ್ಲಿ ಸಮಾವೇಶ ಏರ್ಪಡಿಸಿದ್ದು, ಮೈದಾನದಲ್ಲಿದ್ದ ವ್ಯಾಪಾರಿಗಳ ಅಂಗಡಿಗಳನ್ನು ಸರ್ಕಾರ ಏಕಾಏಕಿ ತೆರವುಗೊಳಿಸಿದೆ. ಹೊಸ ಮಾರುಕಟ್ಟೆ ಸಿದ್ಧವಾಗಿದ್ದರೂ ಹರಾಜು ಪ್ರಕ್ರಿಯೆ ಮಾಡದ ಕಾರಣ ಈಗ ವ್ಯಾಪಾರಿಗಳು ಬೀದಿಯಲ್ಲಿ ನಿಂತು ವ್ಯಾಪಾರ ಮಾಡುವಂತಾಗಿದೆ.

ಒಂದು ವೇಳೆ ಸರ್ಕಾರಕ್ಕೆ ಸಾರ್ವಜನಿಕ ಮೈದಾನದಲ್ಲೇ ಸಮಾವೇಶ ಮಾಡಬೇಕು ಎಂದಿದ್ದರೆ ವ್ಯಾಪಾರಿಗಳಿಗೆ ಮೊದಲೇ ತಿಳಿಸಬೇಕಿತ್ತು. ಅವರಿಗೆ ಬೇರೆ ಮಾರುಕಟ್ಟೆ ಸಿದ್ಧಗೊಳಿಸಿ, ಹರಾಜು ಪ್ರಕ್ರಿಯೆ ನಡೆಸಿ ಅವರಿಗೆ ಪರ್ಯಾಯ ಸೌಲಭ್ಯ ಮಾಡಬೇಕಿತ್ತು. ಆದರೆ ಮಂಗಳವಾರ ತಿಳಿಸಿ, ಬುಧವಾರ ತೆರವುಗೊಳಿಸಿದರೆ ಆ ಬಡ ವ್ಯಾಪಾರಿಗಳು ಏನು ಮಾಡಬೇಕು? ಇದು ಅವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವಲ್ಲವೇ? ಸಿದ್ದರಾಮಯ್ಯನವರಿಗೆ ಇದು ತಿಳಿಯುವುದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಷ್ಟೇ ಅಲ್ಲ ಇತ್ತೀಚೆಗಷ್ಟೇ ನವೀಕರಣಗೊಂಡಿದ್ದ ಕೊಪ್ಪಳದ ಕುಕನೂರು ಹೊರವಲಯದ ಪರಿವೀಕ್ಷಣಾ ಮಂದಿರವನ್ನು ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಈಗ ಮತ್ತೆ ನವೀಕರಣಗೊಳಿಸಿದ್ದು, ಅದಕ್ಕಾಗಿ ಸರ್ಕಾರದಿಂದ ಲಕ್ಷಾಂತರ ರೂ ಖರ್ಚು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಸಿ ನವೀಕರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಹ ಸಾರ್ವಜನಿಕರಲ್ಲಿ ಮೂಡಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search