• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದರೆ ಮಾರುಕಟ್ಟೆ ವ್ಯಾಪಾರಿಗಳು ಬೀದಿಗೆ ಬರಬೇಕಾಯ್ತಲ್ಲ!

TNN Correspondent Posted On February 8, 2018
0


0
Shares
  • Share On Facebook
  • Tweet It

ಕೊಪ್ಪಳ: ಯಾವುದೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆ ಪಕ್ಷದ ಮುಖಂಡರು ರ್ಯಾಲಿ, ಸಮಾವೇಶ ಮಾಡುವುದು ಸಾಮಾನ್ಯ. ಅವರು ಪಕ್ಷದ ದುಡ್ಡಿನಲ್ಲಿ ಮೈದಾನದಲ್ಲೋ, ಬಯಲು ಪ್ರದೇಶದಲ್ಲೋ ಮಾಡಿ, ತಮ್ಮ ಬೆಂಬಲಿಗರನ್ನು ಕರೆಸಿ ಮಾತನಾಡುವುದು ಸಂಪ್ರದಾಯ.

ಆದರೆ ಕಾಂಗ್ರೆಸ್ ಮಾತ್ರ ತಮ್ಮ ಪಕ್ಷದ ಸಮಾವೇಶಕ್ಕಾಗಿ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿದ್ದ ವ್ಯಾಪಾರಿಗಳನ್ನು ಬೀದಿಗೆ ತಂದಿದೆ.

ಹೌದು, ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಸಾರ್ವಜನಿಕ ಮೈದಾನದಲ್ಲಿ ಸಮಾವೇಶ ಏರ್ಪಡಿಸಿದ್ದು, ಮೈದಾನದಲ್ಲಿದ್ದ ವ್ಯಾಪಾರಿಗಳ ಅಂಗಡಿಗಳನ್ನು ಸರ್ಕಾರ ಏಕಾಏಕಿ ತೆರವುಗೊಳಿಸಿದೆ. ಹೊಸ ಮಾರುಕಟ್ಟೆ ಸಿದ್ಧವಾಗಿದ್ದರೂ ಹರಾಜು ಪ್ರಕ್ರಿಯೆ ಮಾಡದ ಕಾರಣ ಈಗ ವ್ಯಾಪಾರಿಗಳು ಬೀದಿಯಲ್ಲಿ ನಿಂತು ವ್ಯಾಪಾರ ಮಾಡುವಂತಾಗಿದೆ.

ಒಂದು ವೇಳೆ ಸರ್ಕಾರಕ್ಕೆ ಸಾರ್ವಜನಿಕ ಮೈದಾನದಲ್ಲೇ ಸಮಾವೇಶ ಮಾಡಬೇಕು ಎಂದಿದ್ದರೆ ವ್ಯಾಪಾರಿಗಳಿಗೆ ಮೊದಲೇ ತಿಳಿಸಬೇಕಿತ್ತು. ಅವರಿಗೆ ಬೇರೆ ಮಾರುಕಟ್ಟೆ ಸಿದ್ಧಗೊಳಿಸಿ, ಹರಾಜು ಪ್ರಕ್ರಿಯೆ ನಡೆಸಿ ಅವರಿಗೆ ಪರ್ಯಾಯ ಸೌಲಭ್ಯ ಮಾಡಬೇಕಿತ್ತು. ಆದರೆ ಮಂಗಳವಾರ ತಿಳಿಸಿ, ಬುಧವಾರ ತೆರವುಗೊಳಿಸಿದರೆ ಆ ಬಡ ವ್ಯಾಪಾರಿಗಳು ಏನು ಮಾಡಬೇಕು? ಇದು ಅವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವಲ್ಲವೇ? ಸಿದ್ದರಾಮಯ್ಯನವರಿಗೆ ಇದು ತಿಳಿಯುವುದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಷ್ಟೇ ಅಲ್ಲ ಇತ್ತೀಚೆಗಷ್ಟೇ ನವೀಕರಣಗೊಂಡಿದ್ದ ಕೊಪ್ಪಳದ ಕುಕನೂರು ಹೊರವಲಯದ ಪರಿವೀಕ್ಷಣಾ ಮಂದಿರವನ್ನು ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಈಗ ಮತ್ತೆ ನವೀಕರಣಗೊಳಿಸಿದ್ದು, ಅದಕ್ಕಾಗಿ ಸರ್ಕಾರದಿಂದ ಲಕ್ಷಾಂತರ ರೂ ಖರ್ಚು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಸಿ ನವೀಕರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಹ ಸಾರ್ವಜನಿಕರಲ್ಲಿ ಮೂಡಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search