• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದರೆ ಮಾರುಕಟ್ಟೆ ವ್ಯಾಪಾರಿಗಳು ಬೀದಿಗೆ ಬರಬೇಕಾಯ್ತಲ್ಲ!

TNN Correspondent Posted On February 8, 2018


  • Share On Facebook
  • Tweet It

ಕೊಪ್ಪಳ: ಯಾವುದೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆ ಪಕ್ಷದ ಮುಖಂಡರು ರ್ಯಾಲಿ, ಸಮಾವೇಶ ಮಾಡುವುದು ಸಾಮಾನ್ಯ. ಅವರು ಪಕ್ಷದ ದುಡ್ಡಿನಲ್ಲಿ ಮೈದಾನದಲ್ಲೋ, ಬಯಲು ಪ್ರದೇಶದಲ್ಲೋ ಮಾಡಿ, ತಮ್ಮ ಬೆಂಬಲಿಗರನ್ನು ಕರೆಸಿ ಮಾತನಾಡುವುದು ಸಂಪ್ರದಾಯ.

ಆದರೆ ಕಾಂಗ್ರೆಸ್ ಮಾತ್ರ ತಮ್ಮ ಪಕ್ಷದ ಸಮಾವೇಶಕ್ಕಾಗಿ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿದ್ದ ವ್ಯಾಪಾರಿಗಳನ್ನು ಬೀದಿಗೆ ತಂದಿದೆ.

ಹೌದು, ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಸಾರ್ವಜನಿಕ ಮೈದಾನದಲ್ಲಿ ಸಮಾವೇಶ ಏರ್ಪಡಿಸಿದ್ದು, ಮೈದಾನದಲ್ಲಿದ್ದ ವ್ಯಾಪಾರಿಗಳ ಅಂಗಡಿಗಳನ್ನು ಸರ್ಕಾರ ಏಕಾಏಕಿ ತೆರವುಗೊಳಿಸಿದೆ. ಹೊಸ ಮಾರುಕಟ್ಟೆ ಸಿದ್ಧವಾಗಿದ್ದರೂ ಹರಾಜು ಪ್ರಕ್ರಿಯೆ ಮಾಡದ ಕಾರಣ ಈಗ ವ್ಯಾಪಾರಿಗಳು ಬೀದಿಯಲ್ಲಿ ನಿಂತು ವ್ಯಾಪಾರ ಮಾಡುವಂತಾಗಿದೆ.

ಒಂದು ವೇಳೆ ಸರ್ಕಾರಕ್ಕೆ ಸಾರ್ವಜನಿಕ ಮೈದಾನದಲ್ಲೇ ಸಮಾವೇಶ ಮಾಡಬೇಕು ಎಂದಿದ್ದರೆ ವ್ಯಾಪಾರಿಗಳಿಗೆ ಮೊದಲೇ ತಿಳಿಸಬೇಕಿತ್ತು. ಅವರಿಗೆ ಬೇರೆ ಮಾರುಕಟ್ಟೆ ಸಿದ್ಧಗೊಳಿಸಿ, ಹರಾಜು ಪ್ರಕ್ರಿಯೆ ನಡೆಸಿ ಅವರಿಗೆ ಪರ್ಯಾಯ ಸೌಲಭ್ಯ ಮಾಡಬೇಕಿತ್ತು. ಆದರೆ ಮಂಗಳವಾರ ತಿಳಿಸಿ, ಬುಧವಾರ ತೆರವುಗೊಳಿಸಿದರೆ ಆ ಬಡ ವ್ಯಾಪಾರಿಗಳು ಏನು ಮಾಡಬೇಕು? ಇದು ಅವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವಲ್ಲವೇ? ಸಿದ್ದರಾಮಯ್ಯನವರಿಗೆ ಇದು ತಿಳಿಯುವುದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಷ್ಟೇ ಅಲ್ಲ ಇತ್ತೀಚೆಗಷ್ಟೇ ನವೀಕರಣಗೊಂಡಿದ್ದ ಕೊಪ್ಪಳದ ಕುಕನೂರು ಹೊರವಲಯದ ಪರಿವೀಕ್ಷಣಾ ಮಂದಿರವನ್ನು ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಈಗ ಮತ್ತೆ ನವೀಕರಣಗೊಳಿಸಿದ್ದು, ಅದಕ್ಕಾಗಿ ಸರ್ಕಾರದಿಂದ ಲಕ್ಷಾಂತರ ರೂ ಖರ್ಚು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಸಿ ನವೀಕರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಹ ಸಾರ್ವಜನಿಕರಲ್ಲಿ ಮೂಡಿದೆ.

  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search