• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದರೆ ಮಾರುಕಟ್ಟೆ ವ್ಯಾಪಾರಿಗಳು ಬೀದಿಗೆ ಬರಬೇಕಾಯ್ತಲ್ಲ!

TNN Correspondent Posted On February 8, 2018
0


0
Shares
  • Share On Facebook
  • Tweet It

ಕೊಪ್ಪಳ: ಯಾವುದೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆ ಪಕ್ಷದ ಮುಖಂಡರು ರ್ಯಾಲಿ, ಸಮಾವೇಶ ಮಾಡುವುದು ಸಾಮಾನ್ಯ. ಅವರು ಪಕ್ಷದ ದುಡ್ಡಿನಲ್ಲಿ ಮೈದಾನದಲ್ಲೋ, ಬಯಲು ಪ್ರದೇಶದಲ್ಲೋ ಮಾಡಿ, ತಮ್ಮ ಬೆಂಬಲಿಗರನ್ನು ಕರೆಸಿ ಮಾತನಾಡುವುದು ಸಂಪ್ರದಾಯ.

ಆದರೆ ಕಾಂಗ್ರೆಸ್ ಮಾತ್ರ ತಮ್ಮ ಪಕ್ಷದ ಸಮಾವೇಶಕ್ಕಾಗಿ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿದ್ದ ವ್ಯಾಪಾರಿಗಳನ್ನು ಬೀದಿಗೆ ತಂದಿದೆ.

ಹೌದು, ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಸಾರ್ವಜನಿಕ ಮೈದಾನದಲ್ಲಿ ಸಮಾವೇಶ ಏರ್ಪಡಿಸಿದ್ದು, ಮೈದಾನದಲ್ಲಿದ್ದ ವ್ಯಾಪಾರಿಗಳ ಅಂಗಡಿಗಳನ್ನು ಸರ್ಕಾರ ಏಕಾಏಕಿ ತೆರವುಗೊಳಿಸಿದೆ. ಹೊಸ ಮಾರುಕಟ್ಟೆ ಸಿದ್ಧವಾಗಿದ್ದರೂ ಹರಾಜು ಪ್ರಕ್ರಿಯೆ ಮಾಡದ ಕಾರಣ ಈಗ ವ್ಯಾಪಾರಿಗಳು ಬೀದಿಯಲ್ಲಿ ನಿಂತು ವ್ಯಾಪಾರ ಮಾಡುವಂತಾಗಿದೆ.

ಒಂದು ವೇಳೆ ಸರ್ಕಾರಕ್ಕೆ ಸಾರ್ವಜನಿಕ ಮೈದಾನದಲ್ಲೇ ಸಮಾವೇಶ ಮಾಡಬೇಕು ಎಂದಿದ್ದರೆ ವ್ಯಾಪಾರಿಗಳಿಗೆ ಮೊದಲೇ ತಿಳಿಸಬೇಕಿತ್ತು. ಅವರಿಗೆ ಬೇರೆ ಮಾರುಕಟ್ಟೆ ಸಿದ್ಧಗೊಳಿಸಿ, ಹರಾಜು ಪ್ರಕ್ರಿಯೆ ನಡೆಸಿ ಅವರಿಗೆ ಪರ್ಯಾಯ ಸೌಲಭ್ಯ ಮಾಡಬೇಕಿತ್ತು. ಆದರೆ ಮಂಗಳವಾರ ತಿಳಿಸಿ, ಬುಧವಾರ ತೆರವುಗೊಳಿಸಿದರೆ ಆ ಬಡ ವ್ಯಾಪಾರಿಗಳು ಏನು ಮಾಡಬೇಕು? ಇದು ಅವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವಲ್ಲವೇ? ಸಿದ್ದರಾಮಯ್ಯನವರಿಗೆ ಇದು ತಿಳಿಯುವುದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಷ್ಟೇ ಅಲ್ಲ ಇತ್ತೀಚೆಗಷ್ಟೇ ನವೀಕರಣಗೊಂಡಿದ್ದ ಕೊಪ್ಪಳದ ಕುಕನೂರು ಹೊರವಲಯದ ಪರಿವೀಕ್ಷಣಾ ಮಂದಿರವನ್ನು ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಈಗ ಮತ್ತೆ ನವೀಕರಣಗೊಳಿಸಿದ್ದು, ಅದಕ್ಕಾಗಿ ಸರ್ಕಾರದಿಂದ ಲಕ್ಷಾಂತರ ರೂ ಖರ್ಚು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಸಿ ನವೀಕರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಹ ಸಾರ್ವಜನಿಕರಲ್ಲಿ ಮೂಡಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search