• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ಇಸ್ರೇಲ್ ಗೆ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅವಕಾಶ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಸಾಂಪ್ರದಾಯಿಕ, ವೈರಿರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಇಸ್ರೇಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಬದಲಾವಣೆಯ ಮುನ್ಸೂಚನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವನ್ನು ನೇರವಾಗಿ ಇಸ್ರೇಲ್ ಪ್ರವೇಶಿಸಲು ಸೌದಿ ಅರೇಬಿಯಾ ಅವಕಾಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ, ಸ್ಪಷ್ಟ ನಡೆಗಳು ಸೌದಿ ಅರೇಬಿಯಾದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಬದ್ಧ ವೈರಿ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ವಾಯು ಪ್ರದೇಶದ ಮೂಲಕ ಇಸ್ರೇಲ್ ಗೆ ವಿಮಾನ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಇಸ್ರೇಲ್ ಗೆ ಭಾರತದಿಂದ ವಿಮಾನ ಪ್ರಯಾಣಿಸಬೇಕಾದರೇ ಕೆಂಪು ಸಮುದ್ರದ ಮೂಲಕ ಸುಮಾರು 8 ಗಂಟೆ ಸಮಯ ಬೇಕಾಗುತ್ತದೆ. ಆದರೆ ಪ್ರಸ್ತುತ ಸೌದಿ ಅರೇಬಿಯಾದ ವಾಯುಪ್ರದೇಶದಿಂದ ಇಸ್ರೇಲ್ ನ ಟೆಲ್ ಅವೀವ್ ಗೆ ಪ್ರವೇಶಿಸಲು ಕೇವಲ 2 ರಿಂದ 2.50 ಗಂಟೆ ಬೇಕಾಗುತ್ತದೆ. ಈ ಮಹತ್ವದ ಪ್ರಯಾಣಕ್ಕೆ ಇಸ್ರೇಲ್ ವೈರಿ ರಾಷ್ಟ್ರ ಸೌದಿ ಅರೇಬಿಯಾ ಮೋದಿ ಪ್ರಯಾಣಕ್ಕೆ ವಿಶೇಷ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅವಕಾಶ ನೀಡಿರುವುದು ಇಸ್ರೇಲ್ ಮತ್ತು ಸೌದಿ ಅರೇಬಿಯಾದ ಸಂಬಂಧಗಳು ಉತ್ತಮವಾಗುವ ಲಕ್ಷಣಗಳು ಎಂದು ತಜ್ಞರು ವಿಶ್ಲೇಷಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ, ದಿಟ್ಟ, ಸ್ಪಷ್ಟ ರಾಜತಾಂತ್ರಿಕ ನಡೆಗಳು ಪೂರಕವಾಗಲಿವೆ ಎಂದು ವಿಶ್ಲೇಷಿಸಿದ್ದಾರೆ. ಮೋದಿ ವಿಶ್ವ ಸಮುದಾಯದ ಮನ ಪರಿವರ್ತಿಸುತ್ತಿದ್ದಾರೆ.

8 ಗಂಟೆ ಪ್ರಯಾಣವನ್ನು 2 ಗಂಟೆಗಿಳಿಸಿದ್ದರಿಂದ ಭಾರತಕ್ಕೆ ಹಣದ ಉಳಿತಾಯವೂ ಆಗುತ್ತೆ. ಸಣ್ಣ ಮೊತ್ತವಾದರೂ ಅದು ದೊಡ್ಡ ಸಂಬಂಧವೊಂದಕ್ಕೆ ಮುನ್ನುಡಿ ಬರೆಯಲಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search