• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಲೆಸೆಯುವರಿಂದ ಯೋಧರ ಮಾನವ ಹಕ್ಕುಗಳನ್ನು ರಕ್ಷಿಸಿ: ಆಯೋಗಕ್ಕೆ ಯೋಧರ ಮಕ್ಕಳ ಮನವಿ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳ ಮೇಲೆ ದಾಳಿ ಮಾಡಿ, ಮಾನವ ಹಕ್ಕು ಉಲ್ಲಂಘಿಸಲಾಗುತ್ತಿದೆ ಎಂದು ಬೊಬ್ಬೆ ಹೊಡೆಯುವ ಮಾನವ ಹಕ್ಕುಗಳ ಹೋರಾಟಗಾರರಿಗೆ ಯೋಧರ ಮಕ್ಕಳು ಮನವಿಯನ್ನು ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರ ಮೇಲಿನ ಪ್ರಕರಣಗಳನ್ನು ಹಿಂಪಡೆದಿರುವ ವಿಚಾರ ಚರ್ಚೆಯಲ್ಲಿರುವಾಗಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಮ್ಮ ಮೂಲಭೂತ ಹಕ್ಕುಗಳನ್ನು ರಕ್ಷಿಸಿ ಎಂದು ಯೋಧರ ಮಕ್ಕಳು ಮನವಿ ಮಾಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಿತ್ಯ ಸೈನಿಕರನ್ನು ಗುರಿಯಾಗಿಟ್ಟುಕೊಂಡು ಕಲ್ಲು ಎಸೆಯುವುದು, ವಿನಾಕಾರಣ ಕಿರುಕುಳ ನೀಡಲಾಗುತ್ತದೆ. ಅದರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡತಾಗುತ್ತಿದೆ. ಅವರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ರಕ್ಷಿಸಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

‘ಯುವ ಭಾರತೀಯರು, ದೇಶದ ಹೆಮ್ಮೆಯ ನಾಗರೀಕರು ಮತ್ತು ವಿಶೇಷವಾಗಿ ಯೋಧರ ಮಕ್ಕಳು. ನಾವು ದೇಶಕ್ಕಾಗಿ ನಿತ್ಯ ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಯೋಧರ ಬಗ್ಗೆ ನಾವು ಕಾಳಜಿ ವಹಿಸಬೇಕಾದ ಸಂದರ್ಭ ಎದುರಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಎಲ್ಲರ ಹಕ್ಕುಗಳನ್ನು ರಕ್ಷಿಸಬೇಕು. ದೇಶಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಯೋಧರ ಮೇಲೆ ಕಲ್ಲು ಎಸೆಯುವುದು ಸೇರಿ ನಾನಾ ಸಮಸ್ಯೆಗಳನ್ನು ಒಡ್ಡಲಾಗುತ್ತಿದೆ. ಆದ್ದರಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಇತರೇ ದೇಶಗಳಿಗೆ ಹೋಲಿಸಿದರೇ ಭಾರತದಲ್ಲಿ ಮಾನವ ಹಕ್ಕುಗಳ ಹೆಸರಲ್ಲಿ ತಡೆಯೊಡ್ಡಲಾಗುತ್ತಿದೆ. ಈ ಕುರಿತು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಯೋಧರ ರಕ್ಷಣೆಯ ಹಿತದೃಷ್ಟಿಯಿಂದ ಕೆಲವು ಕ್ರಮಗಳನ್ನು ಮಾನವ ಹಕ್ಕುಗಳ ಆಯೋಗ ಕೈಗೊಳ್ಳಬೇಕು. ಯೋಧರ ವಿರುದ್ಧ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆಯೂ ಯೋಚಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search