• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಲೆಸೆಯುವರಿಂದ ಯೋಧರ ಮಾನವ ಹಕ್ಕುಗಳನ್ನು ರಕ್ಷಿಸಿ: ಆಯೋಗಕ್ಕೆ ಯೋಧರ ಮಕ್ಕಳ ಮನವಿ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳ ಮೇಲೆ ದಾಳಿ ಮಾಡಿ, ಮಾನವ ಹಕ್ಕು ಉಲ್ಲಂಘಿಸಲಾಗುತ್ತಿದೆ ಎಂದು ಬೊಬ್ಬೆ ಹೊಡೆಯುವ ಮಾನವ ಹಕ್ಕುಗಳ ಹೋರಾಟಗಾರರಿಗೆ ಯೋಧರ ಮಕ್ಕಳು ಮನವಿಯನ್ನು ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರ ಮೇಲಿನ ಪ್ರಕರಣಗಳನ್ನು ಹಿಂಪಡೆದಿರುವ ವಿಚಾರ ಚರ್ಚೆಯಲ್ಲಿರುವಾಗಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಮ್ಮ ಮೂಲಭೂತ ಹಕ್ಕುಗಳನ್ನು ರಕ್ಷಿಸಿ ಎಂದು ಯೋಧರ ಮಕ್ಕಳು ಮನವಿ ಮಾಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಿತ್ಯ ಸೈನಿಕರನ್ನು ಗುರಿಯಾಗಿಟ್ಟುಕೊಂಡು ಕಲ್ಲು ಎಸೆಯುವುದು, ವಿನಾಕಾರಣ ಕಿರುಕುಳ ನೀಡಲಾಗುತ್ತದೆ. ಅದರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡತಾಗುತ್ತಿದೆ. ಅವರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ರಕ್ಷಿಸಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

‘ಯುವ ಭಾರತೀಯರು, ದೇಶದ ಹೆಮ್ಮೆಯ ನಾಗರೀಕರು ಮತ್ತು ವಿಶೇಷವಾಗಿ ಯೋಧರ ಮಕ್ಕಳು. ನಾವು ದೇಶಕ್ಕಾಗಿ ನಿತ್ಯ ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಯೋಧರ ಬಗ್ಗೆ ನಾವು ಕಾಳಜಿ ವಹಿಸಬೇಕಾದ ಸಂದರ್ಭ ಎದುರಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಎಲ್ಲರ ಹಕ್ಕುಗಳನ್ನು ರಕ್ಷಿಸಬೇಕು. ದೇಶಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಯೋಧರ ಮೇಲೆ ಕಲ್ಲು ಎಸೆಯುವುದು ಸೇರಿ ನಾನಾ ಸಮಸ್ಯೆಗಳನ್ನು ಒಡ್ಡಲಾಗುತ್ತಿದೆ. ಆದ್ದರಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಇತರೇ ದೇಶಗಳಿಗೆ ಹೋಲಿಸಿದರೇ ಭಾರತದಲ್ಲಿ ಮಾನವ ಹಕ್ಕುಗಳ ಹೆಸರಲ್ಲಿ ತಡೆಯೊಡ್ಡಲಾಗುತ್ತಿದೆ. ಈ ಕುರಿತು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಯೋಧರ ರಕ್ಷಣೆಯ ಹಿತದೃಷ್ಟಿಯಿಂದ ಕೆಲವು ಕ್ರಮಗಳನ್ನು ಮಾನವ ಹಕ್ಕುಗಳ ಆಯೋಗ ಕೈಗೊಳ್ಳಬೇಕು. ಯೋಧರ ವಿರುದ್ಧ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆಯೂ ಯೋಚಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search