• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಏಷಿಯಾದಲ್ಲೆ ಅರುಣಾಚಲದ ಭುಮ್ಜಾ ಗ್ರಾಮ ಶ್ರೀಮಂತ, ಮೋದಿಗೆ ಧನ್ಯವಾದ ಎಂದ ಜನ

TNN Correspondent Posted On February 8, 2018


  • Share On Facebook
  • Tweet It

ಗುವಾಹಟಿ: ಅರುಣಾಚಲ ಪ್ರದೇಶದ ಭುಮ್ಜಾ ಗ್ರಾಮ ಏಷಿಯಾದಲ್ಲೆ ಅತ್ಯಂತ ಶ್ರೀಮಂತ ರಾಷ್ಟ್ರವಾಗಿದ್ದು, ಭುಮ್ಜಾ ಗ್ರಾಮದ ಜನರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.

ಇತ್ತೀಚೆಗೆ ಭುಮ್ಜಾ ಗ್ರಾಮದ ಪ್ರದೇಶವನ್ನು ಸೈನಿಕ ನೆಲೆ ಸ್ಥಾಪಿಸಲು ರಕ್ಷಣಾ ಇಲಾಖೆಗೆ ಖರೀದಿಸಲಾಗಿತ್ತು. ಇದೀಗ ಇಡೀ ಗ್ರಾಮಕ್ಕೆ ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಇದರಿಂದ ಭುಮ್ಜಾ ಗ್ರಾಮ ಏಷಿಯಾದಲ್ಲೇ ಶ್ರೀಮಂತ ಗ್ರಾಮವಾಗಿ ಹೊರ ಹೊಮ್ಮಿದೆ.

ಗ್ರಾಮಕ್ಕೆ ಒಟ್ಟು 40,80,38,400 ರೂಪಾಯಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಭೂಮಿ ಕಳೆದುಕೊಂಡವರಿಗೆ ಸೂಕ್ತ ನೆಲೆ ಒದಗಿಸಿ, ಭೂಮಿಗೆ ತಕ್ಕ ಮತ್ತು ಭವಿಷ್ಯಕ್ಕೆ ಬೇಕಾದ ಸೂಕ್ತ ಸೌಲಭ್ಯಗಳನ್ನು ಪಡೆಯಲು ಅವಶ್ಯ  ಪರಿಹಾರ ಧನವನ್ನು ಕೇಂದ್ರ ಸರ್ಕಾರ ನೀಡಿದೆ.

ಭುಮ್ಜಾ ಗ್ರಾಮದ 31 ಕುಟುಂಬಗಳ 200.056 ಭೂಮಿಯನ್ನು ರಕ್ಷಣಾ ಇಲಾಖೆ ಖರೀದಿಸಿತ್ತು. ಇದೀಗ ಕೇಂದ್ರ ಸರ್ಕಾ-ರ ಹಣ ನೀಡಿರುವುದರಿಂದ ಗ್ರಾಮಸ್ಥರೆಲ್ಲರೂ ಕೋಟ್ಯಧೀಪತಿಗಳಾಗಿದ್ದಾರೆ. ಪ್ರತಿ ಕುಟುಂಬದ ಭೂಮಿಗೆ 2.44ಕೋಟಿ ಮತ್ತು ಹೆಚ್ಚುವರಿಯಾಗಿ 6.73 ಕೋಟಿಯ ಭಾರಿ ಮೊತ್ತವನ್ನು ಕೇಂದ್ರ ಸರ್ಕಾರ ಗ್ರಾಮಸ್ಥರಿಗೆ ನೀಡಿದೆ. ಇದೀಗ ಏಷಿಯಾದಲ್ಲೇ ಇಡೀ ಗ್ರಾಮದ ಪ್ರತಿಯೊಬ್ಬರು ಕೋಟ್ಯಧಿಪತಿಗಳಾಗಿರುವ ಗ್ರಾಮವಾಗಿ ಭುಮ್ಜಾ ಹೊರಹೊಮ್ಮಿದೆ.

ಪಡೆದ ಭೂಮಿಗೆ ತಕ್ಕ ಬೆಲೆ ನೀಡಿ, ರಾಜ್ಯದ ಅಭಿವೃದ್ಧಿ ಪೂರಕವಾಗುವಂತೆ ಕಾರ್ಯ ನಿರ್ವಹಿಸುತ್ತಿರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ಹೇಳಿದ್ದಾರೆ. ಅರುಣಾಚಲ ಮುಖ್ಯಮಂತ್ರಿ ಪ್ರೇಮ ಕಂಡು ಸೋಮವಾರ ಗ್ರಾಮಸ್ಥರು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ವಿತರಿಸಿದರು. ಅಲ್ಲದೇ ಕೇಂದ್ರ ಸರ್ಕಾರ ನೀಡಿದ ಮಾತಿಗೆ ತಕ್ಕಂತೆ ಹಣ ನೀಡಿದ್ದನ್ನು ಶ್ಲಾಘಿಸಿದರು.

 

  • Share On Facebook
  • Tweet It


- Advertisement -


Trending Now
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
Tulunadu News September 27, 2023
Leave A Reply

  • Recent Posts

    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
  • Popular Posts

    • 1
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 2
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 3
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 4
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 5
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search