• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿದ್ಯಾರ್ಥಿಗಳ ಪರೀಕ್ಷಾ ಭಯ ತೊಲಗಿಸಲು ಮೋದಿ ಅವರ ನೂತನ “ಪರೀಕ್ಷಾ ಪೆ ಚರ್ಚಾ”

TNN Correspondent Posted On February 9, 2018
0


0
Shares
  • Share On Facebook
  • Tweet It

ದೆಹಲಿ: ಬರೀ ಚುನಾವಣೆ, ರ್ಯಾಲಿ, ಸಂಸತ್ ಕಲಾಪ, ವಿದೇಶ ಪ್ರವಾಸ ಎಂದು ಪ್ರಧಾನಿ ಮೋದಿ ಅವರು ಕಾರ್ಯನಿರ್ತರಾಗಿರುವ ಮಧ್ಯೆಯೂ ಜನರತ್ತ ಹೋಗುವುದನ್ನು ಮಾತ್ರ ಮರೆಯುವುದಿಲ್ಲ. ಇದುವರೆಗೆ ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಜನರಿಗೆ ಹತ್ತಿರವಾಗಿದ್ದ ಪ್ರಧಾನಿ, ಇತ್ತೀಚೆಗೆ ಎಕ್ಸಾಂ ವಾರಿಯರ್ಸ್ ಎಂಬ ಪುಸ್ತಕ ಬರೆದು ವಿದ್ಯಾರ್ಥಿಗಳ ಆತಂಕ ತೊಲಗಿಸುವಲ್ಲಿ ಸಹಕಾರಿಯಾಗಿದ್ದರು.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ನರೇಂದ್ರ ಮೋದಿ ಅವರು, ಲಕ್ಷಾಂತರ ವಿದ್ಯಾರ್ಥಿಗಳೊಂದಿಗೆ “ಪರೀಕ್ಷಾ ಪೆ ಚರ್ಚೆ” ಎಂಬ ವಿನೂತನ ಹಾಗೂ ಎಲ್ಲ ರಾಜಕಾರಣಿಗಳಿಗೆ ಮಾದರಿಯಾಗುವ ಕಾರ್ಯಕ್ರಮ ಆಯೋಜಿಸಿದ್ದಾರೆ.

ಹೌದು, ದೇಶದ ಸಾವಿರಾರು ಶಾಲೆಗಳ ಲಕ್ಷಾಂತರ ವಿದ್ಯಾರ್ಥಿಗಳು ಫೆ.16ರಂದು ದೆಹಲಿಯ ತಲ್ಕಾತೋರಾ ಸ್ಟೇಡಿಯಂನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ವೀಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

ವಿದ್ಯಾರ್ಥಿಗಳ ಪರೀಕ್ಷಾ ಭಯ, ಇರುವ ಆತಂಕ, ಹೇಗೆ ಓದಬೇಕು ಎಂಬುದು ಸೇರಿ ಹಲವು ವಿಷಯಗಳ ಕುರಿತು ಮೋದಿ ಅವರು ಮಾತನಾಡಲಿದ್ದು, 6-12ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದೂರದರ್ಶನ, ಯೂ ಟ್ಯೂಬ್ ಮತ್ತು ಸರ್ಕಾರದ ಎಲ್ಲ ವೆಬ್ ಸೈಟ್ ಗಳಲ್ಲಿ ಮೋದಿ ಅವರ ಲೈವ್ ವೀಡಿಯೋ ಕಾನ್ಫರೆನ್ಸ್ ಪ್ರಸಾರವಾಗಲಿದೆ.

ವೀಡಿಯೋ ಕಾನ್ಫರೆನ್ಸ್ ಆದ ಮರುದಿನ, ಮೋದಿ ಅವರ ಪಾಠ ಕೇಳಿದ ಕುರಿತ ಫೋಟೋ ಅಥವಾ ಎರಡು ನಿಮಿಷದ ವೀಡಿಯೋ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಲಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search