• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಯುವಕನ ಅಪಹರಣ, ಹಣಕ್ಕಾಗಿ ಬೇಡಿಕೆ, ನೀಡದಕ್ಕೆ ಸಾಯಿಸಿಯೇ ಬಿಟ್ಟ ಮುಸ್ಲಿಂ ಯುವಕರು!

TNN Correspondent Posted On February 9, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಒಂದೆಡೆ ಲವ್ ಜಿಹಾದ್, ಇನ್ನೊಂದೆಡೆ ಬಲವಂತದ ಮತಾಂತರಕ್ಕೆ ಸಿಲುಕಿ ಹಿಂದೂಗಳು ಪರಿತಪಿಸುತ್ತಿದ್ದಾರೆ. ಇದರ ನಡುವೆಯೇ ಹಿಂದೂ ಯುವಕನನ್ನು ಅಪಹರಣ ಮಾಡಿದ್ದ ಮೂವರು ಮುಸ್ಲಿಂ ಯುವಕರು ಕುಟುಂಬಸ್ಥರು ಹಣ ನೀಡಲಿಲ್ಲ ಎಂದು ಯುವಕನನ್ನೇ ಕೊಂದಿದ್ದಾರೆ.

ಹೌದು, ಪಶ್ಚಿಮ ಬಂಗಾಳದ ಉತ್ತರ ಪರಗಣಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಜನವರಿ 20ರಿಂದ ನಾಪತ್ತೆಯಾಗಿದ್ದ 12ನೇ ತರಗತಿ ವಿದ್ಯಾರ್ಥಿಯ ಶವ ನೈಹಾತಿಯ ಜುಬಿಲಿ ಬ್ರಿಡ್ಜ್ ನದಿಯಲ್ಲಿ ಪತ್ತೆಯಾಗಿದೆ.

ಕುಟುಂಬಸ್ಥರ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ಮೂವರು ಮುಸ್ಲಿಮರನ್ನು ಬಂಧಿಸಿದ್ದು, ಅವರನ್ನು ಸರ್ಫರಾಜ್, ವಾಕಿಲ್ ಹಾಗೂ ಜಾಹೀದ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಲೆ ಮಾಡಿರುವುದಾಗಿ ಒಪ್ಪಿದ್ದಾರೆ.

ನನ್ನ ಸಹೋದರ ಟ್ಯೂಷನ್ಗೆ ಹೋಗಲು ತಯಾರಾಗುತ್ತಿದ್ದ. ಆಗ ಈ ಮೂವರು ಬಂದು ಆತನನ್ನು ಹೊರಗಡೆ ಕರೆದುಕೊಂಡು ಹೋದರು. ಆಗ ಸಂಜೆ ಸುಮಾರು 5 ಗಂಟೆಯಾಗಿತ್ತು. ಆದರೆ 8 ಗಂಟೆಯಾದರೂ ನನ್ನ ಅಣ್ಣ ಮನೆಗೆ ಬರಲಿಲ್ಲ. 8.45 ನಿಮಿಷಕ್ಕೆ ಮನೆಯ ಫೋನಿಗೆ ಕರೆ ಬಂತು. ನಿಮ್ಮ ಅಣ್ಣ ಅಭಿಷೇಕ್ ಚೌಬೇಯನ್ನು ಅಪಹರಿಸಿದ್ದು, ಆತ ಜೀವಂತವಾಗಿ ಬೇಕಿದ್ದರೆ 10 ಲಕ್ಷ ರೂ. ನೀಡಲು ಬೇಡಿಕೆ ಇಟ್ಟಿದ್ದರು ಎಂದು ಅಭಿಷೇಕ್ ಸಹೋದರಿ ಮಾಹಿತಿ ನೀಡಿದ್ದಾರೆ.

ಇದರಿಂದ ಭಯಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ಆರೋಪಿಗಳು ಮತ್ತೆ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಒಂದು ಸಲ ಅಭಿಷೇಕ್ ಜತೆ ಮಾತನಾಡಲು ಇಚ್ಛಿಸಿದ್ದಕ್ಕೆ ಹಣದ ಮೊತ್ತ 15 ಲಕ್ಷ ರೂಪಾಯಿಗೆ ಏರಿಕೆ ಮಾಡಿದ್ದಾರೆ. ಅದಕ್ಕೂ ಕುಟುಂಬಸ್ಥರು ಒಪ್ಪಿದ್ದರು ಎಂದು ತಿಳಿದುಬಂದಿದೆ.

ಏತನ್ಮಧ್ಯೆಯೇ ಕುಟುಂಬಸ್ಥರನ್ನು ಆ ಜಾಗಕ್ಕೆ ಬನ್ನಿ, ಇಲ್ಲಿಗೆ ದುಡ್ಡು ತೆಗೆದುಕೊಂಡು ಬನ್ನಿ ಎಂದು ವಿನಾಕಾರಣ ಅಲೆದಾಡಿಸಿದ್ದು, ಅಲ್ಲಿಗೆ ಹೋದರೆ ಯಾರೂ ಇರುತ್ತಿರಲಿಲ್ಲ. ಕೊನೆಗೆ ಮೊಬೈಲ್ ನೆಟ್ ವರ್ಕ್ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೊಲೆ ಮಾಡಿರುವುದಾಗಿಯೂ, ನದಿಗೆ ಬಿಸಾಕಿರುವುದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search