• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ಯುವಕನ ಅಪಹರಣ, ಹಣಕ್ಕಾಗಿ ಬೇಡಿಕೆ, ನೀಡದಕ್ಕೆ ಸಾಯಿಸಿಯೇ ಬಿಟ್ಟ ಮುಸ್ಲಿಂ ಯುವಕರು!

TNN Correspondent Posted On February 9, 2018


  • Share On Facebook
  • Tweet It

ಕೋಲ್ಕತ್ತಾ: ಒಂದೆಡೆ ಲವ್ ಜಿಹಾದ್, ಇನ್ನೊಂದೆಡೆ ಬಲವಂತದ ಮತಾಂತರಕ್ಕೆ ಸಿಲುಕಿ ಹಿಂದೂಗಳು ಪರಿತಪಿಸುತ್ತಿದ್ದಾರೆ. ಇದರ ನಡುವೆಯೇ ಹಿಂದೂ ಯುವಕನನ್ನು ಅಪಹರಣ ಮಾಡಿದ್ದ ಮೂವರು ಮುಸ್ಲಿಂ ಯುವಕರು ಕುಟುಂಬಸ್ಥರು ಹಣ ನೀಡಲಿಲ್ಲ ಎಂದು ಯುವಕನನ್ನೇ ಕೊಂದಿದ್ದಾರೆ.

ಹೌದು, ಪಶ್ಚಿಮ ಬಂಗಾಳದ ಉತ್ತರ ಪರಗಣಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಜನವರಿ 20ರಿಂದ ನಾಪತ್ತೆಯಾಗಿದ್ದ 12ನೇ ತರಗತಿ ವಿದ್ಯಾರ್ಥಿಯ ಶವ ನೈಹಾತಿಯ ಜುಬಿಲಿ ಬ್ರಿಡ್ಜ್ ನದಿಯಲ್ಲಿ ಪತ್ತೆಯಾಗಿದೆ.

ಕುಟುಂಬಸ್ಥರ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ಮೂವರು ಮುಸ್ಲಿಮರನ್ನು ಬಂಧಿಸಿದ್ದು, ಅವರನ್ನು ಸರ್ಫರಾಜ್, ವಾಕಿಲ್ ಹಾಗೂ ಜಾಹೀದ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಲೆ ಮಾಡಿರುವುದಾಗಿ ಒಪ್ಪಿದ್ದಾರೆ.

ನನ್ನ ಸಹೋದರ ಟ್ಯೂಷನ್ಗೆ ಹೋಗಲು ತಯಾರಾಗುತ್ತಿದ್ದ. ಆಗ ಈ ಮೂವರು ಬಂದು ಆತನನ್ನು ಹೊರಗಡೆ ಕರೆದುಕೊಂಡು ಹೋದರು. ಆಗ ಸಂಜೆ ಸುಮಾರು 5 ಗಂಟೆಯಾಗಿತ್ತು. ಆದರೆ 8 ಗಂಟೆಯಾದರೂ ನನ್ನ ಅಣ್ಣ ಮನೆಗೆ ಬರಲಿಲ್ಲ. 8.45 ನಿಮಿಷಕ್ಕೆ ಮನೆಯ ಫೋನಿಗೆ ಕರೆ ಬಂತು. ನಿಮ್ಮ ಅಣ್ಣ ಅಭಿಷೇಕ್ ಚೌಬೇಯನ್ನು ಅಪಹರಿಸಿದ್ದು, ಆತ ಜೀವಂತವಾಗಿ ಬೇಕಿದ್ದರೆ 10 ಲಕ್ಷ ರೂ. ನೀಡಲು ಬೇಡಿಕೆ ಇಟ್ಟಿದ್ದರು ಎಂದು ಅಭಿಷೇಕ್ ಸಹೋದರಿ ಮಾಹಿತಿ ನೀಡಿದ್ದಾರೆ.

ಇದರಿಂದ ಭಯಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ಆರೋಪಿಗಳು ಮತ್ತೆ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಒಂದು ಸಲ ಅಭಿಷೇಕ್ ಜತೆ ಮಾತನಾಡಲು ಇಚ್ಛಿಸಿದ್ದಕ್ಕೆ ಹಣದ ಮೊತ್ತ 15 ಲಕ್ಷ ರೂಪಾಯಿಗೆ ಏರಿಕೆ ಮಾಡಿದ್ದಾರೆ. ಅದಕ್ಕೂ ಕುಟುಂಬಸ್ಥರು ಒಪ್ಪಿದ್ದರು ಎಂದು ತಿಳಿದುಬಂದಿದೆ.

ಏತನ್ಮಧ್ಯೆಯೇ ಕುಟುಂಬಸ್ಥರನ್ನು ಆ ಜಾಗಕ್ಕೆ ಬನ್ನಿ, ಇಲ್ಲಿಗೆ ದುಡ್ಡು ತೆಗೆದುಕೊಂಡು ಬನ್ನಿ ಎಂದು ವಿನಾಕಾರಣ ಅಲೆದಾಡಿಸಿದ್ದು, ಅಲ್ಲಿಗೆ ಹೋದರೆ ಯಾರೂ ಇರುತ್ತಿರಲಿಲ್ಲ. ಕೊನೆಗೆ ಮೊಬೈಲ್ ನೆಟ್ ವರ್ಕ್ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೊಲೆ ಮಾಡಿರುವುದಾಗಿಯೂ, ನದಿಗೆ ಬಿಸಾಕಿರುವುದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search