• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಯುವಕನ ಅಪಹರಣ, ಹಣಕ್ಕಾಗಿ ಬೇಡಿಕೆ, ನೀಡದಕ್ಕೆ ಸಾಯಿಸಿಯೇ ಬಿಟ್ಟ ಮುಸ್ಲಿಂ ಯುವಕರು!

TNN Correspondent Posted On February 9, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಒಂದೆಡೆ ಲವ್ ಜಿಹಾದ್, ಇನ್ನೊಂದೆಡೆ ಬಲವಂತದ ಮತಾಂತರಕ್ಕೆ ಸಿಲುಕಿ ಹಿಂದೂಗಳು ಪರಿತಪಿಸುತ್ತಿದ್ದಾರೆ. ಇದರ ನಡುವೆಯೇ ಹಿಂದೂ ಯುವಕನನ್ನು ಅಪಹರಣ ಮಾಡಿದ್ದ ಮೂವರು ಮುಸ್ಲಿಂ ಯುವಕರು ಕುಟುಂಬಸ್ಥರು ಹಣ ನೀಡಲಿಲ್ಲ ಎಂದು ಯುವಕನನ್ನೇ ಕೊಂದಿದ್ದಾರೆ.

ಹೌದು, ಪಶ್ಚಿಮ ಬಂಗಾಳದ ಉತ್ತರ ಪರಗಣಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಜನವರಿ 20ರಿಂದ ನಾಪತ್ತೆಯಾಗಿದ್ದ 12ನೇ ತರಗತಿ ವಿದ್ಯಾರ್ಥಿಯ ಶವ ನೈಹಾತಿಯ ಜುಬಿಲಿ ಬ್ರಿಡ್ಜ್ ನದಿಯಲ್ಲಿ ಪತ್ತೆಯಾಗಿದೆ.

ಕುಟುಂಬಸ್ಥರ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ಮೂವರು ಮುಸ್ಲಿಮರನ್ನು ಬಂಧಿಸಿದ್ದು, ಅವರನ್ನು ಸರ್ಫರಾಜ್, ವಾಕಿಲ್ ಹಾಗೂ ಜಾಹೀದ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಲೆ ಮಾಡಿರುವುದಾಗಿ ಒಪ್ಪಿದ್ದಾರೆ.

ನನ್ನ ಸಹೋದರ ಟ್ಯೂಷನ್ಗೆ ಹೋಗಲು ತಯಾರಾಗುತ್ತಿದ್ದ. ಆಗ ಈ ಮೂವರು ಬಂದು ಆತನನ್ನು ಹೊರಗಡೆ ಕರೆದುಕೊಂಡು ಹೋದರು. ಆಗ ಸಂಜೆ ಸುಮಾರು 5 ಗಂಟೆಯಾಗಿತ್ತು. ಆದರೆ 8 ಗಂಟೆಯಾದರೂ ನನ್ನ ಅಣ್ಣ ಮನೆಗೆ ಬರಲಿಲ್ಲ. 8.45 ನಿಮಿಷಕ್ಕೆ ಮನೆಯ ಫೋನಿಗೆ ಕರೆ ಬಂತು. ನಿಮ್ಮ ಅಣ್ಣ ಅಭಿಷೇಕ್ ಚೌಬೇಯನ್ನು ಅಪಹರಿಸಿದ್ದು, ಆತ ಜೀವಂತವಾಗಿ ಬೇಕಿದ್ದರೆ 10 ಲಕ್ಷ ರೂ. ನೀಡಲು ಬೇಡಿಕೆ ಇಟ್ಟಿದ್ದರು ಎಂದು ಅಭಿಷೇಕ್ ಸಹೋದರಿ ಮಾಹಿತಿ ನೀಡಿದ್ದಾರೆ.

ಇದರಿಂದ ಭಯಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ಆರೋಪಿಗಳು ಮತ್ತೆ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಒಂದು ಸಲ ಅಭಿಷೇಕ್ ಜತೆ ಮಾತನಾಡಲು ಇಚ್ಛಿಸಿದ್ದಕ್ಕೆ ಹಣದ ಮೊತ್ತ 15 ಲಕ್ಷ ರೂಪಾಯಿಗೆ ಏರಿಕೆ ಮಾಡಿದ್ದಾರೆ. ಅದಕ್ಕೂ ಕುಟುಂಬಸ್ಥರು ಒಪ್ಪಿದ್ದರು ಎಂದು ತಿಳಿದುಬಂದಿದೆ.

ಏತನ್ಮಧ್ಯೆಯೇ ಕುಟುಂಬಸ್ಥರನ್ನು ಆ ಜಾಗಕ್ಕೆ ಬನ್ನಿ, ಇಲ್ಲಿಗೆ ದುಡ್ಡು ತೆಗೆದುಕೊಂಡು ಬನ್ನಿ ಎಂದು ವಿನಾಕಾರಣ ಅಲೆದಾಡಿಸಿದ್ದು, ಅಲ್ಲಿಗೆ ಹೋದರೆ ಯಾರೂ ಇರುತ್ತಿರಲಿಲ್ಲ. ಕೊನೆಗೆ ಮೊಬೈಲ್ ನೆಟ್ ವರ್ಕ್ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೊಲೆ ಮಾಡಿರುವುದಾಗಿಯೂ, ನದಿಗೆ ಬಿಸಾಕಿರುವುದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search