• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತುಕತೆ, ಹಲವು ವಿಷಯಗಳ ಚರ್ಚೆ

TNN Correspondent Posted On February 9, 2018
0


0
Shares
  • Share On Facebook
  • Tweet It

ದೆಹಲಿ/ವಾಷಿಂಗ್ಟನ್: ಪಾಕಿಸ್ತಾನದ ಭಯೋತ್ಪಾದನೆ ಪೋಷಣೆ ವಿರುದ್ಧ ಅಮೆರಿಕ ಟೀಕಿಸಿರುವ ಬೆನ್ನಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತನಾಡಿದ್ದು, ಹಲವು ವಿಷಯ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡೂ ರಾಷ್ಟ್ರಗಳ ನಾಯಕರು ಪ್ರಮುಖವಾಗಿ ಮಾಲ್ಡೀವ್ಸ್ ರಾಜಕೀಯ ಬಿಕ್ಕಟ್ಟಿನ ಕುರಿತು ಮಾತುಕತೆ ನಡೆಸಿದ್ದು, ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ನಿಯಮಗಳನ್ನು ಗೌರವಿಸಬೇಕು ಎಂಬ ನಿಲುವನ್ನು ಇಬ್ಬರೂ ವ್ಯಕ್ತಪಡಿಸಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.

2018ರಲ್ಲಿ ಇಬ್ಬರೂ ನಾಯಕರು ಇದೇ ಮೊದಲ ಬಾರಿಗೆ ಫೋನಿನಲ್ಲಿ ಮಾತನಾಡಿದ್ದು, ದಕ್ಷಿಣ ಏಷ್ಯಾದ ಅಭಿವೃದ್ಧಿಗೆ ಟ್ರಂಪ್ ಸಹಕಾರ, ಅಫ್ಗಾನಿಸ್ತಾನಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಉಭಯ ನಾಯಕರ ಬದ್ಧತೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಉಭಯ ರಾಷ್ಟ್ರಗಳ ಆರ್ಥಿಕ ಸಹಕಾರ ಹಾಗೂ ಏಳಿಗೆಯ ದೃಷ್ಟಿಯಿಂದ ಮುಂದಿನ ಏಪ್ರಿಲ್ ನಲ್ಲಿ ಅಮೆರಿಕದ ಶ್ವೇತಭವನದಲ್ಲಿ ಭಾರತದ ಇಬ್ಬರು ಹಾಗೂ ಅಮೆರಿಕದ ಇಬ್ಬರು ವಕ್ತಾರರ ಮಧ್ಯೆ ಸಚಿವಾಲಯ ಮಟ್ಟದ ಮಾತುಕತೆ ನಡೆಸಲು ಇಬ್ಬರೂ ಮುಖಂಡರು ಒಪ್ಪಿಗೆ ಸೂಚಿಸಿರುವುದು ಮಾತುಕತೆಯ ಮಹತ್ತರ ಬೆಳವಣಿಗೆಯಾಗಿದೆ.

ಇದರ ಜತೆಗೆ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ, ರೋಹಿಂಗ್ಯಾ ಮುಸ್ಲಿಮರು, ಜಾತಿಕ ಭಯೋತ್ಪಾದನೆ, ವಿಶ್ವ ಶಾಂತಿ ಸೇರಿ ಹಲವು ವಿಷಯಗಳನ್ನು ಮೋದಿ ಹಾಗೂ ಟ್ರಂಪ್ ಚರ್ಚಿಸಿದ್ದಾರೆ ಎಂದು ಶ್ವೇತಭವನದ ವಕ್ತಾರರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search