• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತುಕತೆ, ಹಲವು ವಿಷಯಗಳ ಚರ್ಚೆ

TNN Correspondent Posted On February 9, 2018


  • Share On Facebook
  • Tweet It

ದೆಹಲಿ/ವಾಷಿಂಗ್ಟನ್: ಪಾಕಿಸ್ತಾನದ ಭಯೋತ್ಪಾದನೆ ಪೋಷಣೆ ವಿರುದ್ಧ ಅಮೆರಿಕ ಟೀಕಿಸಿರುವ ಬೆನ್ನಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತನಾಡಿದ್ದು, ಹಲವು ವಿಷಯ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡೂ ರಾಷ್ಟ್ರಗಳ ನಾಯಕರು ಪ್ರಮುಖವಾಗಿ ಮಾಲ್ಡೀವ್ಸ್ ರಾಜಕೀಯ ಬಿಕ್ಕಟ್ಟಿನ ಕುರಿತು ಮಾತುಕತೆ ನಡೆಸಿದ್ದು, ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ನಿಯಮಗಳನ್ನು ಗೌರವಿಸಬೇಕು ಎಂಬ ನಿಲುವನ್ನು ಇಬ್ಬರೂ ವ್ಯಕ್ತಪಡಿಸಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.

2018ರಲ್ಲಿ ಇಬ್ಬರೂ ನಾಯಕರು ಇದೇ ಮೊದಲ ಬಾರಿಗೆ ಫೋನಿನಲ್ಲಿ ಮಾತನಾಡಿದ್ದು, ದಕ್ಷಿಣ ಏಷ್ಯಾದ ಅಭಿವೃದ್ಧಿಗೆ ಟ್ರಂಪ್ ಸಹಕಾರ, ಅಫ್ಗಾನಿಸ್ತಾನಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಉಭಯ ನಾಯಕರ ಬದ್ಧತೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಉಭಯ ರಾಷ್ಟ್ರಗಳ ಆರ್ಥಿಕ ಸಹಕಾರ ಹಾಗೂ ಏಳಿಗೆಯ ದೃಷ್ಟಿಯಿಂದ ಮುಂದಿನ ಏಪ್ರಿಲ್ ನಲ್ಲಿ ಅಮೆರಿಕದ ಶ್ವೇತಭವನದಲ್ಲಿ ಭಾರತದ ಇಬ್ಬರು ಹಾಗೂ ಅಮೆರಿಕದ ಇಬ್ಬರು ವಕ್ತಾರರ ಮಧ್ಯೆ ಸಚಿವಾಲಯ ಮಟ್ಟದ ಮಾತುಕತೆ ನಡೆಸಲು ಇಬ್ಬರೂ ಮುಖಂಡರು ಒಪ್ಪಿಗೆ ಸೂಚಿಸಿರುವುದು ಮಾತುಕತೆಯ ಮಹತ್ತರ ಬೆಳವಣಿಗೆಯಾಗಿದೆ.

ಇದರ ಜತೆಗೆ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ, ರೋಹಿಂಗ್ಯಾ ಮುಸ್ಲಿಮರು, ಜಾತಿಕ ಭಯೋತ್ಪಾದನೆ, ವಿಶ್ವ ಶಾಂತಿ ಸೇರಿ ಹಲವು ವಿಷಯಗಳನ್ನು ಮೋದಿ ಹಾಗೂ ಟ್ರಂಪ್ ಚರ್ಚಿಸಿದ್ದಾರೆ ಎಂದು ಶ್ವೇತಭವನದ ವಕ್ತಾರರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search