• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತುಕತೆ, ಹಲವು ವಿಷಯಗಳ ಚರ್ಚೆ

TNN Correspondent Posted On February 9, 2018


  • Share On Facebook
  • Tweet It

ದೆಹಲಿ/ವಾಷಿಂಗ್ಟನ್: ಪಾಕಿಸ್ತಾನದ ಭಯೋತ್ಪಾದನೆ ಪೋಷಣೆ ವಿರುದ್ಧ ಅಮೆರಿಕ ಟೀಕಿಸಿರುವ ಬೆನ್ನಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತನಾಡಿದ್ದು, ಹಲವು ವಿಷಯ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡೂ ರಾಷ್ಟ್ರಗಳ ನಾಯಕರು ಪ್ರಮುಖವಾಗಿ ಮಾಲ್ಡೀವ್ಸ್ ರಾಜಕೀಯ ಬಿಕ್ಕಟ್ಟಿನ ಕುರಿತು ಮಾತುಕತೆ ನಡೆಸಿದ್ದು, ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ನಿಯಮಗಳನ್ನು ಗೌರವಿಸಬೇಕು ಎಂಬ ನಿಲುವನ್ನು ಇಬ್ಬರೂ ವ್ಯಕ್ತಪಡಿಸಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.

2018ರಲ್ಲಿ ಇಬ್ಬರೂ ನಾಯಕರು ಇದೇ ಮೊದಲ ಬಾರಿಗೆ ಫೋನಿನಲ್ಲಿ ಮಾತನಾಡಿದ್ದು, ದಕ್ಷಿಣ ಏಷ್ಯಾದ ಅಭಿವೃದ್ಧಿಗೆ ಟ್ರಂಪ್ ಸಹಕಾರ, ಅಫ್ಗಾನಿಸ್ತಾನಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಉಭಯ ನಾಯಕರ ಬದ್ಧತೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಉಭಯ ರಾಷ್ಟ್ರಗಳ ಆರ್ಥಿಕ ಸಹಕಾರ ಹಾಗೂ ಏಳಿಗೆಯ ದೃಷ್ಟಿಯಿಂದ ಮುಂದಿನ ಏಪ್ರಿಲ್ ನಲ್ಲಿ ಅಮೆರಿಕದ ಶ್ವೇತಭವನದಲ್ಲಿ ಭಾರತದ ಇಬ್ಬರು ಹಾಗೂ ಅಮೆರಿಕದ ಇಬ್ಬರು ವಕ್ತಾರರ ಮಧ್ಯೆ ಸಚಿವಾಲಯ ಮಟ್ಟದ ಮಾತುಕತೆ ನಡೆಸಲು ಇಬ್ಬರೂ ಮುಖಂಡರು ಒಪ್ಪಿಗೆ ಸೂಚಿಸಿರುವುದು ಮಾತುಕತೆಯ ಮಹತ್ತರ ಬೆಳವಣಿಗೆಯಾಗಿದೆ.

ಇದರ ಜತೆಗೆ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ, ರೋಹಿಂಗ್ಯಾ ಮುಸ್ಲಿಮರು, ಜಾತಿಕ ಭಯೋತ್ಪಾದನೆ, ವಿಶ್ವ ಶಾಂತಿ ಸೇರಿ ಹಲವು ವಿಷಯಗಳನ್ನು ಮೋದಿ ಹಾಗೂ ಟ್ರಂಪ್ ಚರ್ಚಿಸಿದ್ದಾರೆ ಎಂದು ಶ್ವೇತಭವನದ ವಕ್ತಾರರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search