• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತುಕತೆ, ಹಲವು ವಿಷಯಗಳ ಚರ್ಚೆ

TNN Correspondent Posted On February 9, 2018
0


0
Shares
  • Share On Facebook
  • Tweet It

ದೆಹಲಿ/ವಾಷಿಂಗ್ಟನ್: ಪಾಕಿಸ್ತಾನದ ಭಯೋತ್ಪಾದನೆ ಪೋಷಣೆ ವಿರುದ್ಧ ಅಮೆರಿಕ ಟೀಕಿಸಿರುವ ಬೆನ್ನಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನಿನಲ್ಲಿ ಮಾತನಾಡಿದ್ದು, ಹಲವು ವಿಷಯ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡೂ ರಾಷ್ಟ್ರಗಳ ನಾಯಕರು ಪ್ರಮುಖವಾಗಿ ಮಾಲ್ಡೀವ್ಸ್ ರಾಜಕೀಯ ಬಿಕ್ಕಟ್ಟಿನ ಕುರಿತು ಮಾತುಕತೆ ನಡೆಸಿದ್ದು, ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ನಿಯಮಗಳನ್ನು ಗೌರವಿಸಬೇಕು ಎಂಬ ನಿಲುವನ್ನು ಇಬ್ಬರೂ ವ್ಯಕ್ತಪಡಿಸಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.

2018ರಲ್ಲಿ ಇಬ್ಬರೂ ನಾಯಕರು ಇದೇ ಮೊದಲ ಬಾರಿಗೆ ಫೋನಿನಲ್ಲಿ ಮಾತನಾಡಿದ್ದು, ದಕ್ಷಿಣ ಏಷ್ಯಾದ ಅಭಿವೃದ್ಧಿಗೆ ಟ್ರಂಪ್ ಸಹಕಾರ, ಅಫ್ಗಾನಿಸ್ತಾನಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಉಭಯ ನಾಯಕರ ಬದ್ಧತೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಉಭಯ ರಾಷ್ಟ್ರಗಳ ಆರ್ಥಿಕ ಸಹಕಾರ ಹಾಗೂ ಏಳಿಗೆಯ ದೃಷ್ಟಿಯಿಂದ ಮುಂದಿನ ಏಪ್ರಿಲ್ ನಲ್ಲಿ ಅಮೆರಿಕದ ಶ್ವೇತಭವನದಲ್ಲಿ ಭಾರತದ ಇಬ್ಬರು ಹಾಗೂ ಅಮೆರಿಕದ ಇಬ್ಬರು ವಕ್ತಾರರ ಮಧ್ಯೆ ಸಚಿವಾಲಯ ಮಟ್ಟದ ಮಾತುಕತೆ ನಡೆಸಲು ಇಬ್ಬರೂ ಮುಖಂಡರು ಒಪ್ಪಿಗೆ ಸೂಚಿಸಿರುವುದು ಮಾತುಕತೆಯ ಮಹತ್ತರ ಬೆಳವಣಿಗೆಯಾಗಿದೆ.

ಇದರ ಜತೆಗೆ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ, ರೋಹಿಂಗ್ಯಾ ಮುಸ್ಲಿಮರು, ಜಾತಿಕ ಭಯೋತ್ಪಾದನೆ, ವಿಶ್ವ ಶಾಂತಿ ಸೇರಿ ಹಲವು ವಿಷಯಗಳನ್ನು ಮೋದಿ ಹಾಗೂ ಟ್ರಂಪ್ ಚರ್ಚಿಸಿದ್ದಾರೆ ಎಂದು ಶ್ವೇತಭವನದ ವಕ್ತಾರರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search