• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಂಸತ್ತಿನಲ್ಲಿ ಮೋದಿ ಕಾಂಗ್ರೆಸ್ಸಿಗೆ ಹಿಗ್ಗಾಮುಗ್ಗ ಟೀಕಿಸುವಾಗ ಕಾಂಗ್ರೆಸ್ಸಿಗರು ಗಲಾಟೆ ಮಾಡಿದ್ದರ ಹಿಂದೆ ರಾಹುಲ್ ಕೈವಾಡ?

TNN Correspondent Posted On February 9, 2018
0


0
Shares
  • Share On Facebook
  • Tweet It

ದೆಹಲಿ: ಮೊನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲೂ 90 ಪ್ಲಸ್ 90 ನಿಮಿಷ ಕಾಂಗ್ರೆಸ್ಸಿನ ಮುಖವಾಡ ಬಯಲು ಮಾಡುತ್ತಲೇ ಕಾಂಗ್ರೆಸ್ಸಿಗರು ಸ್ಕೂಲ್ ಮೇಷ್ಟ್ರು ಹೊಡೆಯುವಾಗ ಮಕ್ಕಳು ಬೇಡ ಸರ್, ಕ್ಷಮಿಸಿ ಸರ್ ಎನ್ನುವ ಹಾಗೆ “ಬಂದ್ ಕರೋ, ಬಂದ್ ಕರೋ” ಎಂದು ಗದ್ದಲ ಎಬ್ಬಿಸಿದರು. ಆದರೂ ಮೋದಿ ಅವರು ದೇಶದ ಇತಿಹಾಸ ಬಿಚ್ಚಿಟ್ಟು, ಅದರಲ್ಲಿ ಕಾಂಗ್ರೆಸ್ ಮುಖವಾಡ ಎಂಥಾದ್ದು ಎಂದು ಬಯಲು ಮಾಡಿದರು.

ಆದರೆ ಹೀಗೆ ಮೋದಿ ಅವರು ಭಾಷಣ ಮಾಡುವಾಗ ಕಾಂಗ್ರೆಸ್ ಸಂಸದರು ಗಲಾಟೆ ಎಬ್ಬಿಸಿದ್ದರ ಹಿಂದೆ ರಾಹುಲ್ ಗಾಂಧಿಯವರ ಕೈವಾಡ, ಸೂಚನೆ ಇದೆಯಾ ಎಂಬ ಅನುಮಾನ ಮೂಡಿದೆ.

ಹೌದು, ಕಾಂಗ್ರೆಸ್ಸಿಗರು ಬಂದ್ ಕರೋ, ಬಂದ್ ಕರೋ ಎಂದು ಮೋದಿ ಅವರ ಭಾಷಣಕ್ಕೆ ಅಡ್ಡಿಪಡಿಸಿದರು ಎಂಬುದಕ್ಕೆ ಹಲವು ಸಾಕ್ಷ್ಯ ದೊರೆತಿವೆ. ಮೋದಿ ಅವರು ಭಾಷಣ ಆರಂಭಿಸುತ್ತಲೇ, ನಿಧಾನವಾಗಿ ಕಾಂಗ್ರೆಸ್ಸಿನ ನಿಜಬಣ್ಣ ಬಯಲು ಮಾಡಲು ಮುಂದಾದರು.

ಮೋದಿ ಅವರ ಮಾತುಗಳು ಯಾವಾಗ ಕಾಂಗ್ರೆಸ್ಸಿಗರನ್ನು ಚುಚ್ಚಲು ಆರಂಭಿಸಿದವೋ, ಯಾವಾಗ ಕಾಂಗ್ರೆಸ್ಸಿನ ಬಣ್ಣ ಕಳಚುತ್ತ ಹೋಯಿತೋ, ಅಲ್ಲೇ ಇದ್ದ ರಾಹುಲ್ ಗಾಂಧಿ ಮುಖ ಕೆಂಪಿಟ್ಟಿತು. ಆಗ ಅವರು ಕಾಂಗ್ರೆಸ್ಸಿಗರತ್ತ ಮುಖ ಮಾಡಿ, ಏನಿದು ಮೋದಿ ಎಷ್ಟೆಲ್ಲ ಜಾಡಿಸುತ್ತಿದ್ದರೂ ನೀವು ಸುಮ್ಮನೆ ಇದ್ದಿರಲ್ಲ, ಗದ್ದಲ ಆರಂಭಿಸಿ ಎಂಬಂತಹ ಮುಖಭಾವ ತೋರಿಸಿ, ಗದ್ದಲ ಆರಂಭಿಸಿ ಎಂದು ಹೇಳಿದ ಹಾಗಿತ್ತು. ಸಂಸತ್ತಿನಲ್ಲಿ ರಾಹುಲ್ ಸನ್ನೆ ಮಾಡಿರುವ ಕುರಿತು ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಅಷ್ಟೇ ಅಲ್ಲ, ಮೋದಿ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಟೀಕಾಸ್ತ್ರ ಬಳಸಿ, ರಾಜ್ಯಸಭೆಗೆ ತೆರಳುವ ಮುನ್ನ ರಾಹುಲ್ ಗಾಂಧಿಯವರು ಕಾಂಗ್ರೆಸ್ ಸಂಸದರಿಗೆ ಗದ್ದಲ ಆರಂಭಿಸಿ, ಮೋದಿ ಮಾತನಾಡಲು ಬಿಡಬೇಡಿ ಎಂದು ಸೂಚಿಸದ್ದರು ಎಂದು ಸಹ ತಿಳಿದುಬಂದಿದೆ.

ಒಟ್ಟಿನಲ್ಲಿ ದೇಶದ ಗಂಭೀರ ವಿಷಯಗಳನ್ನಿಟ್ಟುಕೊಂಡು ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಟೀಕಾಸ್ತ್ರ ಬಳಸಿದರೆ, ಅದಕ್ಕೆ ಉತ್ತರ ನೀಡುವ ಬದಲು ಕಾಂಗ್ರೆಸ್ಸಿಗರು ಗದ್ದಲ ಮಾಡಿದ್ದು, ಸಂಸತ್ತಿಗೆ ಮಾಡಿದ ಅವಮಾನ ಹಾಗೂ ಉತ್ತರಿಸಲು ಆಗದ ಪರಿಸ್ಥಿತಿಗೆ ಅವರು ತಲುಪಿದ್ದರು ಎಂಬುದು ಖಾತ್ರಿಯಾಗಿದೆ. ಮೋದಿ ಮಾತಿನ ಅಲೆಗೆ ಕಾಂಗ್ರೆಸ್ ನಾಯಕರು ಕೊಚ್ಚಿ ಹೋದರು ಹಾಗೂ ರಾಹುಲ್ ಗಾಂಧಿ ಬೆಚ್ಚಿಬಿದ್ದರು ಎಂಬುದಂತೂ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search